Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವಳ ಪ್ರವೇಶಿಸುವ ಮೂವರು ಮಹಿಳೆಯರ...

ದೇವಳ ಪ್ರವೇಶಿಸುವ ಮೂವರು ಮಹಿಳೆಯರ ಪ್ರಯತ್ನ ವಿಫಲ

ಶಬರಿಮಲೆ: ಮುಂದುವರಿದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Oct 2018 5:21 PM IST
share
ದೇವಳ ಪ್ರವೇಶಿಸುವ ಮೂವರು ಮಹಿಳೆಯರ ಪ್ರಯತ್ನ ವಿಫಲ

ತಿರುವನಂತಪುರ, ಅ.21: ರವಿವಾರ 50 ವರ್ಷದ ಕೆಳಹರೆಯದ ಮೂವರು ಮಹಿಳೆಯರು ಶಬರಿಮಲೆ ದೇವಸ್ಥಾನ ಪ್ರವೇಶಿಸಲು ನಡೆಸಿದ ಪ್ರಯತ್ನವನ್ನು ಪ್ರತಿಭಟನಾಕಾರರು ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  ಆಂಧ್ರಪ್ರದೇಶದ ಮಹಿಳೆಯರಾದ ವಸಂತಿ(41 ವರ್ಷ) ಹಾಗೂ ಆದಿಶೇಷಿ(42 ವರ್ಷ) ಜೊತೆಯಾಗಿ ಪಂಪಾ ಮೂಲಶಿಬಿರದಿಂದ ಸುಮಾರು 200 ಮೀಟರ್‌ನಷ್ಟು ದೂರ ಕಾಲ್ನಡಿಗೆಯಲ್ಲಿ ಸಾಗಿ ಬಂದಿದ್ದರು. ಆದರೆ ಅಲ್ಲಿ ಅವರನ್ನು ತಡೆದ ಪ್ರತಿಭಟನಾಕಾರರು ಮುಂದುವರಿಯಲು ಅವಕಾಶ ನೀಡಲಿಲ್ಲ. ಬಾಲಮ್ಮ (47 ವರ್ಷ) ಎಂಬ ಮಹಿಳೆ ಏಕಾಂಗಿಯಾಗಿ ಸುಮಾರು 4 ಕಿ.ಮೀ.ನಷ್ಟು ದೂರ ಸಾಗಿ ಬಂದಿದ್ದರು. ಆದರೆ ಈ ಸಂದರ್ಭ ಅವರನ್ನು ಮುತ್ತಿಕೊಂಡ ಪ್ರತಿಭಟನಾಕಾರರು ವಾಪಾಸು ತೆರಳುವಂತೆ ಆಗ್ರಹಿಸಿದರು. ಈ ವೇಳೆ ಭಯ ಮತ್ತು ಆತಂಕದಿಂದ ಅಸ್ವಸ್ಥಗೊಂಡ ಬಾಲಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರವಿವಾರ ಬೆಳಿಗ್ಗೆ ಆಂಧ್ರದ ಇಬ್ಬರು ಮಹಿಳೆಯರು ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಉದ್ದೇಶದಿಂದ ಪಂಪಾ ಮೂಲಶಿಬಿರಕ್ಕೆ ಆಗಮಿಸಿದ್ದರು. ಆದರೆ ಶಬರಿಮಲೆಯಲ್ಲಿರುವ ಪರಿಸ್ಥಿತಿಯನ್ನು ಅರಿತುಕೊಂಡ ಅವರು ಅಲ್ಲಿಂದಲೇ ವಾಪಸಾಗಲು ನಿರ್ಧರಿಸಿದಾಗ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ಪೊಲೀಸರು ಅವರನ್ನು ಸುರಕ್ಷಿತವಾಗಿ ಮರಳಿ ಕಳುಹಿಸುವ ವ್ಯವಸ್ಥೆ ಮಾಡಿದ್ದರು. ಶನಿವಾರ ಭಾರೀ ಮಳೆಯ ಕಾರಣ ಕೇರಳದ 38ರ ಹರೆಯದ ಮಹಿಳೆ ದೇವಸ್ಥಾನ ಪ್ರವೇಶಿಸುವ ತನ್ನ ಯೋಜನೆಗೆ ತಿಲಾಂಜಲಿ ಇತ್ತು ವಾಪಸಾಗಿದ್ದರು.

ಕಳೆದ ಬುಧವಾರ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆದ ಬಳಿಕ ಇದುವರೆಗೆ 50ರ ಕೆಳಹರೆಯದ ಕೇವಲ 9 ಮಹಿಳೆಯರು ದೇವಸ್ಥಾನ ಪ್ರವೇಶಕ್ಕೆ ಪ್ರಯತ್ನಿಸಿದ್ದಾರೆ . ಆದರೆ ಯಾರು ಕೂಡಾ ಯಶಸ್ವಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು.

ದಲಿತ ಮುಖಂಡೆಗೆ ಪೊಲೀಸ್ ಭದ್ರತೆ ನಿರಾಕರಣೆ

ಈ ಮಧ್ಯೆ, ಶನಿವಾರ ಶಬರಿಮಲೆ ಬೆಟ್ಟದ 18 ಮೆಟ್ಟಿಲು ಏರಿ ದೇವಸ್ಥಾನವನ್ನು ಪ್ರವೇಶಿಸಲು ಮುಂದಾದ ಕೇರಳ ದಲಿತ ಮಹಿಳಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಂಜುಗೆ ಭದ್ರತೆ ಒದಗಿಸಲು ಪೊಲೀಸರು ನಿರಾಕರಿಸಿದ ಘಟನೆ ನಡೆಯಿತು.

   ಮಂಜು ಪೊಲೀಸ್ ರಕ್ಷಣೆ ಕೇಳಿದಾಗ , ನಿಮ್ಮ ಹಿನ್ನೆಲೆಯ ವಿವರ ಪಡೆದು ಬಳಿಕ ನಿರ್ಧರಿಸುವುದಾಗಿ ಪೊಲೀಸರು ತಿಳಿಸಿದರು. ಮೂಲಭೂತವಾದಿ ಸಂಘಟನೆಯೊಂದರ ಜೊತೆ ಆಕೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಹಾಗೂ ಆಕೆಯ ವಿರುದ್ಧ ಕೆಲವು ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ಒದಗಿಸಲು ನಿರಾಕರಿಸಿದರು ಎಂದು ವರದಿಯಾಗಿದೆ.­

share
ವಾರ್ತಾಭಾರತಿ
ವಾರ್ತಾಭಾರತಿ
Next Story
X