Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸರಕಾರದ ವಿರುದ್ಧ ಪಿಂಚಣಿದಾರರ...

ಕೇಂದ್ರ ಸರಕಾರದ ವಿರುದ್ಧ ಪಿಂಚಣಿದಾರರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ21 Oct 2018 6:49 PM IST
share

ಬೆಂಗಳೂರು, ಅ.21: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಪಿಂಚಣಿದಾರರ ವಿರೋಧಿ ಸರಕಾರವಾಗಿದೆ ಎಂದು ಭವಿಷ್ಯನಿಧಿ ವಂತಿಗೆದಾರರ ಮತ್ತು ಇಪಿಎಫ್ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜೈ.ಶಂಕರರೆಡ್ಡಿ ಆರೋಪಿಸಿದ್ದಾರೆ.

ರವಿವಾರ ನಗರದ ಮಲ್ಲೇಶ್ವರಂನ ಆಜಾದ್ ಮೈದಾನದಲ್ಲಿ ಆಯೋಜಿಸಿದ್ದ ಇಪಿಎಫ್ ಪಿಂಚಣಿದಾರರ ಸಮಾವೇಶದಲ್ಲಿ ಮಾತನಾಡಿದ ಅವರು, 1971ರಲ್ಲಿ ಪಿ.ವಿ.ನರಸಿಂಹರಾವ್ ನೇತೃತ್ವದ ಸರಕಾರ ನಿವೃತ್ತ ಬಡ ಕಾರ್ಮಿಕರ ಆರ್ಥಿಕ ಸಬಲೀಕರಣ ದೃಷ್ಟಿಯಿಂದ ಕುಟುಂಬ ಪಿಂಚಣಿ ಯೋಜನೆಯನ್ನು ಬದಲಾಯಿಸಿ ಕಾರ್ಮಿಕ ಯೋಜನೆ 1995 ಅನ್ನು ಜಾರಿ ಮಾಡಿದ್ದರು ಎಂದು ಹೇಳಿದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಮೋದಿ ಸರಕಾರ ಹಿಂದಿನ ಕಾರ್ಮಿಕ ಯೋಜನೆಯಲ್ಲಿನ ಅನೇಕ ಅಂಶಗಳನ್ನು ಬದಲಾವಣೆ ಮಾಡಿ ಬಡ ನಿವೃತ್ತ ಕಾರ್ಮಿಕರ ಗಾಯದ ಮೇಲೆ ಬರೆ ಎಳೆದಿದ್ದಾರೆ ಎಂದು ಅವರು ಆರೋಪಿಸಿದರು.

ದೇಶದಲ್ಲಿ ಲಕ್ಷಾಂತರ ಇಪಿಎಫ್ ಪಿಂಚಣಿದಾರರು ಇಂದಿಗೂ ಕೇವಲ ಒಂದು ಸಾವಿರಕ್ಕೂ ಕಡಿಮೆ ಪಿಂಚಣಿ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಒಂದು ರೂ.ಯನ್ನು ಹೆಚ್ಚಿಗೆ ಮಾಡಿಲ್ಲ ಎಂದ ಅವರು, ಸರಕಾರಕ್ಕೆ ಯಾವುದೇ ವಂತಿಗೆಯನ್ನು ಸಲ್ಲಿಸದ ಮಾಜಿ ಶಾಸಕರು, ಸಂಸದರು ಲಕ್ಷಗಟ್ಟಲೇ ಪಿಂಚಣಿ ಪಡೆಯುತ್ತಾರೆ. ಅದಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸುವುದಿಲ್ಲ. ಅದೇ ರೀತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಿ ನೌಕರರು ನಿವೃತ್ತಿಯಾದ ನಂತರ ಸರಕಾರಕ್ಕೆ ಯಾವುದೇ ವಂತಿಗೆಯನ್ನು ಸಲ್ಲಿಸದೆ ತಮ್ಮ ಕೊನೆಯ ಸಂಬಳದ ಅರ್ಧದಷ್ಟು ಪಿಂಚಣಿಯನ್ನು ಡಿಎ ಸಮೇತ ಪಡೆಯುತ್ತಿದ್ದಾರೆ. ಆದರೆ, ಇದೇ ರೀತಿಯಲ್ಲಿ ಸರಕಾರಕ್ಕೆ ಸೇವೆ ಸಲ್ಲಿಸುವ ಕಾರ್ಮಿಕರಿಗೆ ಪಿಂಚಣಿ ನೀಡಲು ಸರಕಾರಗಳು ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಮಿಕ ಸಚಿವರ ಪ್ರಕಾರ ಮೂರು ಸಾವಿರ ಪಿಂಚಣಿ ಕೊಡಲು ವಾರ್ಷಿಕ 16,540 ಕೋಟಿ ರೂ.ಗಳಷ್ಟು ಹಣದ ಅಗತ್ಯವಿದೆ ಎಂದು ಹೇಳಿಕೆ ನೀಡಿರುವುದು ಶುದ್ಧ ಸುದ್ದು. ಉತ್ಪಾದನಾ ಕ್ಷೇತ್ರದಲ್ಲಿ ದುಡಿದ ನಿವೃತ್ತಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ದೇಶದಲ್ಲಿ ಸುಮಾರು 15 ಕೋಟಿ ಭವಿಷ್ಯನಿಧಿ ವಂತಿಗೆದಾರರಿದ್ದು, ವಾರ್ಷಿಕ 2.25 ಸಾವಿರ ಕೋಟಿ ರೂ.ಹಣ ವಂತಿಗೆ ರೂಪದಲ್ಲಿ ಭವಿಷ್ಯನಿಧಿಗೆ ಸೇರುತ್ತಿದೆ. ಆದರೂ, ನಿವೃತ್ತಿ ಕಾರ್ಮಿಕರಿಗೆ ಪಿಂಚಣಿ ಹೆಚ್ಚಳ ಮಾಡದೇ ಅನ್ಯಾಯ ಮಾಡಲಾಗುತ್ತಿದೆ ಎಂದು ಅವರು ದೂರಿದರು.

ಕೇಂದ್ರ ಸರಕಾರ ಸಾಮಾಜಿಕ ಭದ್ರತೆ, ಕನಿಷ್ಠ ಮಾಸಿಕ ಪಿಂಚಣಿ ಐದು ಸಾವಿರ ರೂ.ಗಳು ನಿಗದಿಪಡಿಸಬೇಕು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರ ನಿವೃತ್ತ ಸರಕಾರಿ ನೌಕರರಿಗೆ ಡಿಎ ಜತೆಗೆ ನೀಡುವ ಪಿಂಚಣಿಯನ್ನು ನಮಗೂ ಸೇರಿಸಿಕೊಡಬೇಕು. ಸಂಕಷ್ಟದಲ್ಲಿರುವ ಇಪಿಎಫ್ ಪಿಂಚಣಿದಾರರ ಭವಿಷ್ಯಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಮಾವೇಶದಲ್ಲಿ ಸಂಘದ ಗೌರವಾಧ್ಯಕ್ಷ ಅಶ್ವತ್ಥ ನಾರಾಯಣ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಮಂದಾಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X