Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ರಾಜ್ಯದಲ್ಲಿ ಪೆಟ್ರೋಲ್‌ಗಿಂತ ಡೀಸೆಲ್...

ಈ ರಾಜ್ಯದಲ್ಲಿ ಪೆಟ್ರೋಲ್‌ಗಿಂತ ಡೀಸೆಲ್ ದುಬಾರಿ!

ವಾರ್ತಾಭಾರತಿವಾರ್ತಾಭಾರತಿ22 Oct 2018 9:30 AM IST
share
ಈ ರಾಜ್ಯದಲ್ಲಿ ಪೆಟ್ರೋಲ್‌ಗಿಂತ ಡೀಸೆಲ್ ದುಬಾರಿ!

ಭುವನೇಶ್ವರ, ಅ.22: ದೇಶದಲ್ಲೇ ಮೊದಲ ಬಾರಿಗೆ ಒಡಿಶಾದಲ್ಲಿ ಪೆಟ್ರೋಲ್ ಬೆಲೆಗಿಂತ ಅಧಿಕ ದರದಲ್ಲಿ ಡೀಸೆಲ್ ಮಾರಾಟ ಮಾಡಲಾಗುತ್ತಿದೆ. ರಾಜಧಾನಿ ಭುವನೇಶ್ವರದಲ್ಲಿ ರವಿವಾರ ಪ್ರತಿ ಲೀಟರ್ ಡೀಸೆಲ್ 80.78 ರೂಪಾಯಿಗೆ ಮಾರಾಟವಾಗಿದ್ದರೆ, ಪೆಟ್ರೋಲ್ ಬೆಲೆ 80.65 ರೂಪಾಯಿ ಆಗಿತ್ತು. ಶನಿವಾರ ಮೊಟ್ಟಮೊದಲ ಬಾರಿಗೆ ಡೀಸೆಲ್ ಬೆಲೆ, ಪೆಟ್ರೋಲ್ ಬೆಲೆಯನ್ನು ಮೀರಿತ್ತು.

ಶನಿವಾರ ಪ್ರತಿ ಲೀಟರ್ ಡೀಸೆಲ್ 80.97 ರೂಪಾಯಿಗೆ ಮಾರಾಟವಾಗಿದ್ದರೆ, ಪೆಟ್ರೋಲ್ 80.90 ರೂಪಾಯಿ ದರದಲ್ಲಿ ಮಾರಾಟವಾಗಿತ್ತು. ಕಳೆದ ಐದು ದಿನಗಳಲ್ಲಿ ಎರಡೂ ಇಂಧನಗಳ ಬೆಲೆ ಕಡಿಮೆಯಾಗಿತ್ತು. ಸಾಮಾನ್ಯವಾಗಿ ದೇಶಾದ್ಯಂತ ಡೀಸೆಲ್ ಚಿಲ್ಲರೆ ಮಾರಾಟ ದರ ಪೆಟ್ರೋಲ್‌ಗಿಂತ ಕಡಿಮೆ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕಡಿಮೆ ತೆರಿಗೆ, ಕಡಿಮೆ ಡೀಲರ್ ಕಮಿಷನ್ ಹಾಗೂ ಕಡಿಮೆ ಮೂಲ ದರ.

ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಬೇಡಿಕೆಯ ಹಿನ್ನೆಲೆಯಲ್ಲಿ ಡೀಸೆಲ್‌ನ ಮೂಲದರ 5 ರೂಪಾಯಿಯಷ್ಟು ಹೆಚ್ಚಿದೆ. ಮೂಲದರ ಎಂದರೆ ತೈಲ ಕಂಪೆನಿಗಳು ತೆರಿಗೆ ರಹಿತವಾಗಿ ಡೀಲರ್‌ಗಳಿಗೆ ವಿಧಿಸುವ ದರ. ಈ ದರ ಹೆಚ್ಚಳ ಪ್ರಮಾಣ, ಡೀಸೆಲ್‌ಗೆ ಇರುವ ಕಡಿಮೆ ಸೆಂಟ್ರಲ್ ಎಕ್ಸೈಸ್ ಮತ್ತು ಕಡಿಮೆ ಡೀಲರ್ ಕಮಿಷನ್ ಅನುಕೂಲತೆಯನ್ನು ತಿಂದುಹಾಕಿದೆ ಎನ್ನುವುದು ಉತ್ಕಲ್ ಪಟ್ರೋಲಿಯಂ ಡೀಲರ್ಸ್‌ ಅಸೋಸಿಯೇಶನ್ ಕಾರ್ಯದರ್ಶಿ ಸಂಜಯ್ ಲಾಥ್ ಅವರ ಅಭಿಪ್ರಾಯ.

"ಒಡಿಶಾದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ದರ ಶೇಕಡ 26 ಇರುವುದರಿಂದ ಡೀಸೆಲ್ ಈಗ ದುಬಾರಿಯಾಗಿದೆ. ಆದರೆ ಇತರ ರಾಜ್ಯಗಳಲ್ಲಿ ಡೀಸೆಲ್ ಮೇಲಿನ ವ್ಯಾಟ್ ದರ ಪೆಟ್ರೋಲ್‌ಗಿಂತ ಕಡಿಮೆ ಇದೆ" ಎಂದು ಅವರು ವಿವರಿಸುತ್ತಾರೆ. ತೈಲ ಕಂಪೆನಿಗಳ ಅಂಕಿ ಅಂಶದ ಪ್ರಕಾರ, ಡೀಲರ್‌ಗಳು ಇದೀಗ ಪ್ರತಿ ಲೀಟರ್ ಪೆಟ್ರೋಲ್‌ಗೆ ತೆರಿಗೆರಹಿತವಾಗಿ 43.49 ರೂಪಾಯಿ ಬೆಲೆ ನೀಡುತ್ತಿದ್ದಾರೆ. ಆದರೆ ಪ್ರತಿ ಲೀಟರ್‌ಗೆ 48.02 ರೂಪಾಯಿ ದರ ನೀಡಬೇಕಾಗಿದೆ. ಎಕ್ಸೈಸ್ ಸುಂಕ ಪೆಟ್ರೋಲ್‌ಗೆ 17.80 ರೂಪಾಯಿ ಮತ್ತು ಡೀಸೆಲ್‌ಗೆ 13.83 ರೂಪಾಯಿ ಇದೆ. ಡೀಲರ್ ಕಮಿಷನ್ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 3.5 ರೂಪಾಯಿ ಇದ್ದರೆ, ಡೀಸೆಲ್‌ಗೆ 2.5 ರೂಪಾಯಿ.

ಈ ಪರಿಸ್ಥಿತಿ ಆಡಳಿತಾರೂಢ ಬಿಜೆಡಿ ಮತ್ತು ವಿರೋಧ ಪಕ್ಷವಾದ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X