Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಗತ್ತಿನ ಅತಿ ಉದ್ದದ ‘ಸಾಗರ ಸೇತುವೆ’...

ಜಗತ್ತಿನ ಅತಿ ಉದ್ದದ ‘ಸಾಗರ ಸೇತುವೆ’ ಪೂರ್ಣ

55 ಕಿ.ಮೀ. ಉದ್ದದ 1.47 ಲಕ್ಷ ಕೋಟಿ ರೂ. ಮೊತ್ತದ ಯೋಜನೆ

ವಾರ್ತಾಭಾರತಿವಾರ್ತಾಭಾರತಿ22 Oct 2018 10:57 PM IST
share
ಜಗತ್ತಿನ ಅತಿ ಉದ್ದದ ‘ಸಾಗರ ಸೇತುವೆ’ ಪೂರ್ಣ

ಹಾಂಕಾಂಗ್, ಅ. 22: ಹಾಂಕಾಂಗ್ ಮತ್ತು ಮಕಾವು ದೇಶಗಳನ್ನು ಮಾತೃನೆಲ ಚೀನಾಕ್ಕೆ ಸಂಪರ್ಕಿಸುವ 20 ಬಿಲಿಯ ಡಾಲರ್ (ಸುಮಾರು 1.47 ಲಕ್ಷ ಕೋಟಿ ರೂಪಾಯಿ) ವೆಚ್ಚದ ಬೃಹತ್ ಸಾಗರ ಸೇತುವೆಯು ಬುಧವಾರ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

ಇದು ಸಮುದ್ರದಲ್ಲಿ ಹಾದು ಹೋಗುವ ಜಗತ್ತಿನ ಅತ್ಯಂತ ಉದ್ದದ ಸೇತುವೆಯಾಗಿದೆ.

55 ಕಿ.ಮೀ. ಉದ್ದದ ಸೇತುವೆಯು ಚೀನಾದ ಝುಹೈ ನಗರದಲ್ಲಿ ಕೊನೆಗೊಳ್ಳುತ್ತದೆ.

ಸೇತುವೆಯ ನಿರ್ಮಾಣಕ್ಕೆ 9 ವರ್ಷ ತಗಲಿದೆ. ಅದು 2016ರಲ್ಲೇ ಸಂಚಾರಕ್ಕೆ ಮುಕ್ತವಾಗಬೇಕಾಗಿತ್ತು. ಆದರೆ, ಕಾಮಗಾರಿಯಲ್ಲಿ ಪದೇ ಪದೇ ಸಂಭವಿಸಿದ ವಿಳಂಬದಿಂದಾಗಿ ಸೇತುವೆ ಈಗಷ್ಟೇ ಪೂರ್ಣಗೊಂಡಿದೆ.

ದಕ್ಷಿಣ ಚೀನಾದ 56,500 ಚದರ ಕಿ.ಮೀ. ವಿಸ್ತೀರ್ಣವನ್ನು ಕ್ರಮಿಸುವ ಚೀನಾದ ‘ಗ್ರೇಟರ್ ಬೇ ಏರಿಯ’ ಯೋಜನೆಯ ಮಹತ್ವದ ಭಾಗ ಈ ಸೇತುವೆಯಾಗಿದೆ. ಈ ಯೋಜನೆಯ ವ್ಯಾಪ್ತಿಯಲ್ಲಿ ಹಾಂಕಾಂಗ್ ಮತ್ತು ಮಕಾವು ಸೇರಿದಂತೆ 11 ನಗರಗಳು ಬರುತ್ತವೆ. ಈ ಪ್ರದೇಶದಲ್ಲಿ 6.8 ಕೋಟಿ ಜನರು ವಾಸಿಸುತ್ತಿದ್ದಾರೆ.

ಸೇತುವೆಯು ನಗರಗಳ ನಡುವಿನ ಪ್ರಯಾಣ ಅವಧಿಯನ್ನು 3 ಗಂಟೆಯಿಂದ 30 ನಿಮಿಷಗಳಿಗೆ ತಗ್ಗಿಸುತ್ತದೆ ಎಂದು ಹೇಳಲಾಗಿದೆ.

ಆದಾಗ್ಯೂ, ಹಾಂಕಾಂಗ್‌ನ ಖಾಸಗಿ ಕಾರುಗಳ ಮಾಲೀಕರು ಸೇತುವೆಯನ್ನು ದಾಟಲು ವಿಶೇಷ ಪರವಾನಿಗೆಯನ್ನು ಪಡೆಯಬೇಕಾಗಿದೆ.

ಹಾಂಕಾಂಗ್‌ನಲ್ಲಿ ತೀವ್ರ ವಿರೋಧ

ಹಾಂಕಾಂಗ್‌ನಲ್ಲಿ ಈ ಸೇತುವೆ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾಂಕಾಂಗ್‌ನಲ್ಲಿ ಯಾರೂ ಈ ಸೇತುವೆಯನ್ನು ಬಯಸಿಯೂ ಇಲ್ಲ, ಮಕಾವು ಅಥವಾ ಝುಹೈ ಜೊತೆಗೆ ಅವರಿಗೆ ಹೆಚ್ಚಿನ ಸಂಪರ್ಕವೂ ಬೇಕಾಗಿಲ್ಲ. ಚೀನಾದ ಪ್ರವಾಸಿಗರು ನಗರವನ್ನು ಆವರಿಸುತ್ತಾರೆ ಎಂಬ ಭೀತಿಯನ್ನು ಹಾಂಕಾಂಗ್‌ನ ಜನರು ಹೊಂದಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X