Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಧೀಜಿ ಕುರಿತು ತಿಳಿಸುವ ಸಂತತಿ...

ಗಾಂಧೀಜಿ ಕುರಿತು ತಿಳಿಸುವ ಸಂತತಿ ಕಡಿಮೆಯಾಗುತ್ತಿದೆ: ಸಚಿವ ಜಿ.ಟಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ22 Oct 2018 11:53 PM IST
share
ಗಾಂಧೀಜಿ ಕುರಿತು ತಿಳಿಸುವ ಸಂತತಿ ಕಡಿಮೆಯಾಗುತ್ತಿದೆ: ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಅ.22: ಅಹಿಂಸಾತ್ಮಕ ಚಳುವಳಿ, ಆಂದೋಲನ, ಶಾಂತಿಯ ಸಂದೇಶದ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾತ್ಮಾ ಗಾಂಧೀಜಿಯವರ ಕುರಿತು ತಿಳಿಸುವ ಸಂತತಿ ಕಡಿಮೆಯಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು.

ಮಾನಸ ಗಂಗೋತ್ರಿಯ ಗಾಂಧಿಭವನದಲ್ಲಿ ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ರಂಗಾಯಣ, ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾದ ಗಾಂಧೀಜಿ ಕುರಿತ ಸಿಮೆಂಟ್ ಶಿಲ್ಪ ಶಿಬಿರವನ್ನು ಗಾಂಧಿ ಪುತ್ಥಳಿಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ಉದ್ಘಾಟಿಸಿದರು. 

ಬಳಿಕ ಮಾತನಾಡಿದ ಅವರು ಮಹಾತ್ಮಾ ಗಾಂಧೀಜಿಯವರ ತತ್ವಗಳನ್ನು ಮೈಗೂಡಿಸಿಕೊಂಡಿರುವ ನಿಮ್ಮಂತಹವರ ಮುಂದೆ ಗಾಂಧೀಜಿಯವರ ಕುರಿತು ಮಾತನಾಡಲು ನಾನು ತುಂಬಾ ಚಿಕ್ಕವನು ಎಂದರು. ಇಂದು ಗಾಂಧೀಜಿಯವರ ಕುರಿತು ತಿಳಿಸುವವರ ಸಂತತಿ ಕಡಿಮೆಯಾಗುತ್ತಿದೆ. ಗಾಂಧೀಜಿಯವರ ಕುರಿತು ಮಾರ್ಗದರ್ಶನ ನೀಡುವವರ ಅಗತ್ಯತೆಯಿದೆ. ಮಹಾತ್ಮಾ ಗಾಂಧೀಜಿಯವರು ಜೀವನದಲ್ಲಿ ತಾಯಿಯನ್ನೇ ನೋಡಲಿಕ್ಕಾಗದ ಸನ್ನಿವೇಶದಲ್ಲಿ ಬೆಳೆದವರು. ಆದರೆ ಇದಾವುದನ್ನೂ ಲೆಕ್ಕಿಸದೆ ದೇಶದ ಜನತೆ ಬ್ರಿಟಿಷರ ಕಪಿಮುಷ್ಠಿಯಿಂದ ಹೊರಬರಬೇಕು. ಜೀತಪದ್ಧತಿಯಿಂದ ಹೊರಬರಬೇಕು. ಬ್ರಿಟಿಷರ ಆಡಳಿತ ತೊಡೆಯಲು ಶಾಂತಿ ಸತ್ಯಾಗ್ರಹ, ಅಹಿಂಸಾತ್ಮಕ ಚಳುವಳಿಯಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತು ಅನುಸರಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಮಹಾತ್ಮಾಗಾಂಧಿಯವರ ಹೋರಾಟ, ಸಂದೇಶಗಳು, ಸರಳತೆಯನ್ನು ಇಂದಿನ ಯುವಜನತೆಗೆ ತಿಳಿಸುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ ಎಂದರು. 

ಪ್ರಧಾನಿ ನರೇಂದ್ರ ಮೋದಿಯವರು ಒಂದು ವರ್ಷದವರೆಗಿನ ಗಾಂಧೀಜಿಯವರ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಗಾಂಧೀಜಿ ಇಂದಿಗೂ ಎಷ್ಟು ಪ್ರಸ್ತುತ ಎಂಬುದು ಈಗ ಅವರಿಗೆ ಜ್ಞಾನೋದಯವಾಗಿದೆ ಎಂದು ತಿಳಿಸಿದರು. ಹಳ್ಳಿಯಲ್ಲಿ ಜನತೆಗೆ ಮೂಲಭೂತ ಸೌಕರ್ಯ ಒದಗಿಸಲು ಒಂದು ಗ್ರಾಮ ಪಂಚಾಯತ್, ಶಿಕ್ಷಣಕ್ಕಾಗಿ ಒಂದು ಶಾಲೆ, ರೈತರ ಸಾಲಸೌಲಭ್ಯಕ್ಕಾಗಿ, ಅವರ ವ್ಯವಹಾರ ಅಭಿವೃದ್ಧಿಗಾಗಿ, ಆರ್ಥಿಕ ಸಹಕಾರಕ್ಕಾಗಿ ಸಹಕಾರ ಸಂಘಗಳಿರಬೇಕೆಂದು ಕನಸು ಕಂಡರು. ಅದರಂತೆ ಇಂದು ಪ್ರತಿ ಹಳ್ಳಿಯಲ್ಲಿಯೂ ಅವೆಲ್ಲವೂ ಇದೆ. ಗಾಂಧೀಜಿಯವರ ಸಂಕಲ್ಪಗಳು, ಅವರ ಆದರ್ಶಗಳನ್ನು ಎಂದಿಗೂ ಮರೆಯಬಾರದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಆಯಿಷಾ ಎಂ.ಶರೀಫ್, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅದ್ಯಕ್ಷ ಶಿಲ್ಪಿ ರು.ಕಾಳಾಚಾರ್, ಅಂತರರಾಷ್ಟ್ರೀಯ ಪ್ರಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್, ಕುಲಸಚಿವ ಪ್ರೊ.ಆರ್.ರಾಜಣ್ಣ, ಕೆ.ಟಿ.ವೀರಪ್ಪ, ಡಾ.ಎಂ.ಜಿ.ಕೃಷ್ಣಮೂರ್ತಿ, ಪ.ಮಲ್ಲೇಶ್, ಬಿ.ಕೆ.ಶಿವಣ್ಣ, ಡಾ.ಎಸ್.ತುಕಾರಾಮ್, ಪಿ.ವಿಶ್ವನಾಥ್, ಗಾಂಧಿ ಭವನದ ನಿರ್ದೇಶಕ ಪ್ರೊ.ಎಂ.ಎಸ್.ಶೇಖರ್, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಇಂದ್ರಮ್ಮ ಹೆಚ್.ವಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X