Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ದರ್ಗಾಕ್ಕಾಗಿ ಹಣ ಸಂಗ್ರಹಕ್ಕೆ...

ಉಳ್ಳಾಲ ದರ್ಗಾಕ್ಕಾಗಿ ಹಣ ಸಂಗ್ರಹಕ್ಕೆ ಆಡಳಿತ ಸಮಿತಿ ಯಾರನ್ನೂ ನೇಮಿಸಿಲ್ಲ: ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ

ವಾರ್ತಾಭಾರತಿವಾರ್ತಾಭಾರತಿ23 Oct 2018 8:33 PM IST
share

ಮಂಗಳೂರು, ಅ.23: ಉಳ್ಳಾಲ ಸೈಯದ್ ಮದನಿ ದರ್ಗಾದಲ್ಲಿ ಆರ್ಥಿಕ ಸಮಸ್ಯೆಯಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುತ್ತಿರುವ ಆರೋಪ ಸುಳ್ಳಿನ ಕಂತೆಯಾಗಿದೆ, ಇದೇ ನೆಪದಲ್ಲಿ ಸಂಘಟನೆಯೊಂದಕ್ಕೆ ಸೇರಿದ ಕೆಲವು ಯುವಕರ ತಂಡ ಕೊಲ್ಲಂ, ಹಾಸನ, ಕಾಸರಗೋಡು ಪ್ರದೇಶದಲ್ಲಿ ಹಣ ಸಂಗ್ರಹ ಮಾಡುತ್ತಿರುವ ಮಾಹಿತಿ ಬಂದಿದ್ದು ಇದು ಅಪರಾಧ ಎಂದು ಉಳ್ಳಾಲ ಸೈಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದರು.

ಮಂಗಳವಾರ ದರ್ಗಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಳ್ಳಾಲ ದರ್ಗಾ ಕಾರಣಿಕ ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ಇಲ್ಲಿಗೆ ಹಣದ ರೂಪದಲ್ಲಿ ಹರಕೆ ಇಡುವವರು ನೇರವಾಗಿ ದರ್ಗಾಕ್ಕೇ ತಂದು ಪಾವತಿಸಬೇಕಿದ್ದು, ಹಣ ಸಂಗ್ರಹಕ್ಕಾಗಿ ದರ್ಗಾ ಆಡಳಿತ ಹಣ ಸಂಗ್ರಹಕ್ಕೆ ಯಾರನ್ನೂ ನೇಮಿಸಿಲ್ಲ. ಹರಕೆ ಪಾವತಿಯಲ್ಲಿ ಕೇರಳಿಗರ ಕೊಡುಗೆ ದೊಡ್ಡದು ಎಂದರು.

ಇಲ್ಲಿಗೆ ಹರಕೆಯಾಗಿ ಇಡಲಾಗುವ ಆಡುಗಳು ನೇರವಾಗಿ ಯಾವುದಾದರೊಂದು ರೂಪದಲ್ಲಿ ದರ್ಗಾ ತಲುಪುತ್ತವೆ. ದರ್ಗಾದ ನೂತನ ಸಮಿತಿ ಆಡಳಿತಕ್ಕೆ ಬಂದು ಎರಡೂವರೆ ವರ್ಷಗಳಾಗಿದ್ದು ಇಲ್ಲಿ ಯಾವುದೇ ಬಣಗಳಿಲ್ಲ. ಕೆಲವರು ಆಡಳಿತದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಮಾಡುತ್ತಿದ್ದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಆಡಳಿತ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ದರ್ಗಾ ಕ್ಯಾಂಪಸ್‌ನಲ್ಲಿ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣ ಪಡೆಯುತ್ತಿರುವ 500ರಷ್ಟು ಮಕ್ಕಳಿದ್ದಾರೆ. ಮಹಿಳೆಯರಿಗೆ ಕಾಲೇಜು ಆರಂಭಿಸಲಾಗಿದೆ. ಸಹಾಯ ಯಾಚಿಸಿ ಯಾವುದೇ ಭಾಗದಿಂದ ಬರುವ ಜನರಿಗೆ ಜಾತಿ, ಧರ್ಮ ನೋಡದೆ ಸಹಾಯ ಮಾಡಲಾಗುತ್ತಿದೆ ಎಂದರು.

ದರ್ಗಾ ಹೆಸರಿಗೆ ಕಳಂಕ ತರುವ ಯತ್ನ: ಕೋಮು ಸೂಕ್ಷ್ಮಪ್ರದೇಶ ಎನ್ನುವ ಕಪ್ಪು ಚುಕ್ಕೆಯನ್ನು ಎರಡೂವರೆ ವರ್ಷದಲ್ಲಿ ಅಳಿಸಿ ಹಾಕಲಾಗಿದೆ. ಇಂತಹ ಜನಪರ ಕಾರ್ಯಗಳನ್ನು ಸಹಿಸಲಾರದ ತಂಡ ದರ್ಗಾ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡುತ್ತಿದೆ. ಕೆಲವು ವರ್ಷಗಳ ಹಿಂದೆ ಇ.ಕೆ. ಸಂಸ್ಥೆಯಿಂದ ಪುಸ್ತಕ ತರಿಸಲಾಗುತ್ತಿದ್ದರೆ, ಬಳಿಕ ಎ.ಪಿ. ಸಂಸ್ಥೆಯಿಂದ ತರಲಾಗುತ್ತಿತ್ತು. ಉಳ್ಳಾಲದಲ್ಲಿ ಕಣಚೂರು ಮೋನು ಅವರ ಆಡಳಿತ ಅವಧಿಯಲ್ಲಿ ಕರ್ನಾಟಕ ವಿದ್ಯಾಭ್ಯಾಸ ಬೋರ್ಡ್ ಆರಂಭಿಸಲಾಗಿದ್ದು, ಸ್ವಂತ ಸಿಲೆಬಸ್ ಸ್ಥಾಪಿಸಲಾಗಿದೆ. ಕರ್ನಾಟಕದಾದ್ಯಂತ ಅದೇ ಪುಸ್ತಕ ಕೊಡಿಸುವ ಯೋಜನೆ ಇತ್ತಾದರೂ ಕೆಲವರ ಅಸಹಕಾರದಿಂದ ಯೋಜನೆ ಈಡೇರಿಲ್ಲ ಎಂದು ಹೇಳಿದರು.

ಕರ್ನಾಟಕ ಪಠ್ಯಕ್ರಮ ಅಳವಡಿಸಲು ದರ್ಗಾ ಅಧೀನದ 32 ಮಸೀದಿಗಳ ಪೈಕಿ ಆರಂಭದಲ್ಲಿ 13 ಮಸೀದಿಗಳ ವಿರೋಧವಿತ್ತಾದರೂ ಈಗ ಕೇವಲ ಎಂಟು ಮಸೀದಿಗಳಿಂದ ವಿರೋಧ ವ್ಯಕ್ತವಾಗಿದೆ. ದರ್ಗಾಕ್ಕೆ ವಾರ್ಷಿಕ ಆರು ಕೋಟಿ ರೂ. ಅನುದಾನ ಹರಕೆ ಸೇರಿದಂತೆ ವಿವಿಧ ರೂಪದಲ್ಲಿ ಹರಿದು ಬರುತ್ತಿದ್ದು, ಅದೆಲ್ಲವನ್ನು ವಿವಿಧ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತಿದೆ. ಸರಕಾರವೂ ಅನುದಾನ ನೀಡುತ್ತಾ ಬಂದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 15 ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಶೌಚಾಲಯ ನಿರ್ಮಿಸಿ ಕೊಡುತ್ತಿದೆ. ದರ್ಗಾದಲ್ಲಿ ಪ್ರತಿದಿನ ಅನ್ನದಾನ ನಡೆಯುತ್ತಿದೆ. ಅಲ್ಲದೆ, ಸರಕಾರ ಮಂಜೂರು ಮಾಡಿರುವ 75 ಲಕ್ಷ ರೂ. ಅನುದಾನದಲ್ಲಿ 30 ಕೊಠಡಿಗಳ ಯಾತ್ರಿ ನಿವಾಸ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು.

ಪ್ರಧಾನ ಕಾರ್ಯದರ್ಶಿ ತ್ವಾಹಾ ಮುಹಮ್ಮದ್, ಉಪಾಧ್ಯಕ್ಷ ಯು.ಕೆ.ಮೋನು ಇಸ್ಮಾಯೀಲ್, ಬಾವಾ ಮುಹಮ್ಮದ್, ಸದಸ್ಯರಾದ ವಿ.ಸಿ.ಕಾಸಿಂ, ಫಾರೂಕ್ ಉಳ್ಳಾಲ್, ಅಮೀರ್, ಆಸಿಫ್ ಅಬ್ದುಲ್ಲಾ, ಅಲಿಮೋನು, ಕೆ.ಎನ್. ಮುಹಮ್ಮದ್, ಹಸೈನಾರ್, ಹಸನ್ ಕೈಕೊ ಹಾಗೂ ಲತೀಫ್ ಮೋನು ಮೇಲಂಗಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X