ಆರೋಪಿಗಳ ಶೀಘ್ರ ಬಂಧನಕ್ಕೆ ಕರ್ನಾಟಕ ಪತ್ರಕರ್ತರ ಸಂಘದಿಂದ ಎಎಸ್ಪಿಗೆ ಮನವಿ
ವಿಟ್ಲದ ಪತ್ರಕರ್ತನ ಮನೆಯಿಂದ ಕಳವು ಪ್ರಕರಣ
ವಿಟ್ಲ, ಅ.24: ಇಲ್ಲಿಗೆ ಸಮೀಪದ ಬೊಬ್ಬೆಕೇರಿ ನಿವಾಸಿ, ಪತ್ರಕರ್ತ ರಮೇಶ. ಕೆ (ವಿಷ್ಣುಗುಪ್ತ ಪುಣಚ) ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಸಮಿತಿಯ ವತಿಯಿಂದ ಬಂಟ್ವಾಳ ಎಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಅವರಿಗೆ ಮನವಿ ಸಲ್ಲಿಸಲಾಯಿತು.
ಎಎಸ್ಪಿಯನ್ನು ಅವರ ಕಚೇರಿಯಲ್ಲಿ ಬುಧವಾರ ಭೇಟಿಯಾದ ಸಂಘದ ನಿಯೋಗವು ಕಳ್ಳತನ ಪ್ರಕರಣವನ್ನು ಭೇದಿಸಿ, ನೈಜ ಆರೋಪಿಗಳನ್ನು ಬಂಧಿಸಬೇಕು
ಎಂದು ಆಗ್ರಹಿಸಿತು.
ಬಳಿಕ ಬಂಟ್ವಾಳ ವೃತ್ತ ನಿರೀಕ್ಷಕರು ಟಿ.ಡಿ.ನಾಗರಾಜ್ ಅವರಿಗೂ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಫಾರೂಕ್ ಬಂಟ್ವಾಳ, ಕಾರ್ಯದರ್ಶಿ ವಿ.ಟಿ.ಪ್ರಸಾದ್, ಉಪಾಧ್ಯಕ್ಷ ಪಿ.ಎಂ.ಅಶ್ರಫ್, ಕೋಶಾಧಿಕಾರಿ ವಿಶ್ವನಾಥ್ ಬಂಟ್ವಾಳ, ಸದಸ್ಯರಾದ ಲತೀಫ್ ನೇರಳಕಟ್ಟೆ, ಜ್ಯೋತಿ ಪ್ರಕಾಶ್ ಪುಣಚ, ಸತೀಶ್ ಕಾರ್ತಿಕ್ ಉಪಸ್ಥಿತರಿದ್ದರು.
Next Story