Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇತಿಹಾಸದ ‘ಅತ್ಯಂತ ಕೆಟ್ಟ ಮುಚ್ಚಿಹಾಕುವ...

ಇತಿಹಾಸದ ‘ಅತ್ಯಂತ ಕೆಟ್ಟ ಮುಚ್ಚಿಹಾಕುವ ಕಾರ್ಯಾಚರಣೆ’: ಟ್ರಂಪ್

ಸೌದಿ ಪತ್ರಕರ್ತನ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 Oct 2018 8:27 PM IST
share
ಇತಿಹಾಸದ ‘ಅತ್ಯಂತ ಕೆಟ್ಟ ಮುಚ್ಚಿಹಾಕುವ ಕಾರ್ಯಾಚರಣೆ’: ಟ್ರಂಪ್

ವಾಶಿಂಗ್ಟನ್, ಅ. 24: ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯನ್ನು ಸೌದಿ ಅರೇಬಿಯ ನಿಭಾಯಿಸಿದ ರೀತಿಯು ‘ಇತಿಹಾಸದ ಅತ್ಯಂತ ಕೆಟ್ಟ ಮುಚ್ಚಿಹಾಕುವ ಕಾರ್ಯಾಚರಣೆ’ಯಾಗಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದಾರೆ.

ಹತ್ಯೆಗೆ ಕಾರಣವಾದ ಸೌದಿ ಅಧಿಕಾರಿಗಳ ವೀಸಾಗಳನ್ನು ರದ್ದುಪಡಿಸುವ ಮೂಲಕ ಅವರನ್ನು ಶಿಕ್ಷಿಸಲು ಮೊದಲ ಹಂತದ ಕ್ರಮಗಳನ್ನು ತನ್ನ ಸರಕಾರ ತೆಗೆದುಕೊಳ್ಳಲು ಮುಂದಾಗಿದೆ ಹಾಗೂ ಹೆಚ್ಚಿನ ಕ್ರಮಗಳನ್ನು ಮುಂದಕ್ಕೆ ತೆಗೆದುಕೊಳ್ಳಲಾಗುವುದು ಎಂದು ಅವರು ನುಡಿದರು.

‘‘ಅವರು ಅತ್ಯಂತ ಕೆಟ್ಟ ಯೋಜನೆ ಹೊಂದಿದ್ದರು. ಅದನ್ನು ಅಷ್ಟೇ ಕೆಟ್ಟದಾಗಿ ಜಾರಿಗೊಳಿಸಲಾಯಿತು. ಬಳಿಕ ಅದನ್ನು ಅವರು ಮುಚ್ಚಿಹಾಕಿದ ರೀತಿಯು ಇತಿಹಾಸದಲ್ಲೇ ಅತ್ಯಂತ ಕೆಟ್ಟದಾಗಿತ್ತು. ಅದೊಂದು ಅತ್ಯಂತ ಕೆಟ್ಟ ಯೋಜನೆಯಾಗಿತ್ತು’’ ಎಂದು ಟ್ರಂಪ್ ಹೇಳಿದರು.

ಸೌದಿ ಶಂಕಿತರ ವೀಸಾ ರದ್ದು: ಅಮೆರಿಕ

ಸೌದಿ ಅರೇಬಿಯದ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯಲ್ಲಿ ಶಾಮೀಲಾಗಿರುವರೆನ್ನಲಾದ ಸೌದಿ ಅರೇಬಿಯದ ಅಧಿಕಾರಿಗಳ ವೀಸಾಗಳನ್ನು ರದ್ದುಪಡಿಸುವುದಾಗಿ ಅಮೆರಿಕ ಘೋಷಿಸಿದೆ.

‘ವಾಶಿಂಗ್ಟನ್ ಪೋಸ್ಟ್’ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದ ಖಶೋಗಿ ಇಸ್ತಾಂಬುಲ್‌ನಲ್ಲಿರುವ ತನ್ನ ಕೌನ್ಸುಲೇಟ್‌ನಲ್ಲಿ ಹತ್ಯೆಯಾಗಿದ್ದಾರೆ ಎನ್ನುವುದನ್ನು ಸೌದಿ ಅರೇಬಿಯ ಒಪ್ಪಿಕೊಂಡಿದೆ.

ಹತ್ಯೆಗೆ ಕಾರಣರಾದವರ ಮೇಲೆ ಉತ್ತರದಾಯಿತ್ವ ಹೊರಿಸಲು ಅಮೆರಿಕವು ನಿರಂತರವಾಗಿ ಮಾಹಿತಿಗಳನ್ನು ಸಂಗ್ರಹಿಸಲಿದೆ, ಸಂಸತ್ತು ಕಾಂಗ್ರೆಸ್ ಜೊತೆ ಸಮಾಲೋಚನೆ ನಡೆಸಲಿದೆ ಹಾಗೂ ಇತರ ದೇಶಗಳೊಂದಿಗೆ ಜೊತೆಗೂಡಿ ಕೆಲಸ ಮಾಡಲಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಸುದ್ದಿಗಾರರಿಗೆ ತಿಳಿಸಿದರು.

ಅಮೆರಿಕ ಪ್ರಸಕ್ತ ಹೊಂದಿರುವ ಮಾಹಿತಿಗಳ ಆಧಾರದಲ್ಲಿ ಅದು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಹೆಚ್ಚಿನ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ: ಜಿ7

ಸೌದಿ ಅರೇಬಿಯದ ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯ ಬಗ್ಗೆ ಸೌದಿ ಅರೇಬಿಯ ಈವರೆಗೆ ನೀಡಿರುವ ವಿವರಣೆಗಳಲ್ಲಿ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ ಎಂದು ‘ಜಿ7’ ಗುಂಪಿನ ದೇಶಗಳ ವಿದೇಶ ಸಚಿವರು ಮಂಗಳವಾರ ನೀಡಿದ ಜಂಟಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಪತ್ರಕರ್ತನ ಹತ್ಯೆ ಬಗ್ಗೆ ಮೂರು ವಾರಗಳ ಕಾಲ ಮೌನವಾಗಿದ್ದ ಸೌದಿ ಅರೇಬಿಯ, ಶನಿವಾರ ಹೇಳಿಕೆಯೊಂದನ್ನು ನೀಡಿ, ಇಸ್ತಾಂಬುಲ್‌ನಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿಯಲ್ಲಿ 59 ವರ್ಷದ ಪತ್ರಕರ್ತನ ಹತ್ಯೆ ನಡೆದಿರುವುದನ್ನು ಒಪ್ಪಿಕೊಂಡಿರುವುದನ್ನು ಸ್ಮರಿಸಬಹುದಾಗಿದೆ.

‘‘ಹತ್ಯೆಗೆ ಕಾರಣರಾದವರನ್ನು ಹೊಣೆಗಾರರನ್ನಾಗಿಸಬೇಕು. ಇಂಥ ಘಟನೆ ಇನ್ನೆಂದೂ ನಡೆಯದಂತೆ ಖಾತರಿಪಡಿಸಲು ಸೌದಿ ಅರೇಬಿಯ ಸೂಕ್ತ ವ್ಯವಸ್ಥೆಯನ್ನು ಜಾರಿಗೊಳಿಸಬೇಕು’’ ಎಂದು ಹೇಳಿಕೆ ತಿಳಿಸಿದೆ.

ಬ್ರಿಟನ್, ಕೆನಡ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್ ಮತ್ತು ಅಮೆರಿಕಗಳ ವಿದೇಶ ಸಚಿವರು ಹಾಗೂ ಐರೋಪ್ಯ ಒಕ್ಕೂಟದ ಉನ್ನತ ಪ್ರತಿನಿಧಿ ಹೇಳಿಕೆಗೆ ಸಹಿ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X