Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಡತನ ದೇವರು ಕೊಟ್ಟ ಸೌಭಾಗ್ಯ:...

ಬಡತನ ದೇವರು ಕೊಟ್ಟ ಸೌಭಾಗ್ಯ: ನಿರ್ಭಯಾನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ24 Oct 2018 10:46 PM IST
share
ಬಡತನ ದೇವರು ಕೊಟ್ಟ ಸೌಭಾಗ್ಯ: ನಿರ್ಭಯಾನಂದ ಸ್ವಾಮೀಜಿ

ಬೆಂಗಳೂರು, ಅ.24: ಬಡತನ ದೇವರು ಕೊಟ್ಟ ಸೌಭಾಗ್ಯ. ಅವಮಾನ ದೇವರು ಕೊಟ್ಟ ವರ. ಇವರೆಡನ್ನು ಅನುಭವಿಸುವ ವ್ಯಕ್ತಿಗಳು ಸಾಧಕರಾಗುತ್ತಾರೆ ಎಂದು ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.

ಆರ್‌ಡಿಸಿ ಪಬ್ಲಿಕೇಷನ್ಸ್ ನಗರದ ಗಂಗಮ್ಮ ತಿಮ್ಮಯ್ಯ ಕನ್‌ವೆನ್‌ಷನ್ ಸೆಂಟರ್‌ನಲ್ಲಿ ಲೇಖಕ ಎರ್ರೆಪ್ಪಗೌಡ ಚಾನಾಳ್‌ರವರ ‘ನಮ್ಮೆಳಗೊಬ್ಬ ರವಿ ಡಿ ಚನ್ನಣ್ಣನವರ್’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮನುಷ್ಯನಿಗೆ ಬಡತನ ಹಾಗೂ ಅವಮಾನಗಳು ಹೆಜ್ಜೆ ಹೆಜ್ಜೆಗೂ ಕಾಡಬೇಕು. ಆಗ ಮಾತ್ರ ವ್ಯಕ್ತಿಯಲ್ಲಿ ಏನಾದರು ಸಾಧಿಸಬೇಕೆಂದು ಛಲ ಹುಟ್ಟುತ್ತದೆ ಎಂದು ತಿಳಿಸಿದರು.

ನಮ್ಮ ಸರಕಾರ, ಬುದ್ಧಿಜೀವಿಗಳು ಹಾಗೂ ಮಠಾಧೀಶರು ದಲಿತರು ಹಾಗೂ ಹಿಂದುಳಿದ ಸಮುದಾಯದವರನ್ನು ದಾರಿ ತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ. ದಲಿತ ವ್ಯಕ್ತಿಯನ್ನು ನೀನು ಹಿಂದುಳಿದವನು, ನಿನಗೆ ಸಮಸ್ಯೆಗಳಿವೆ ಎಂಬುದನ್ನು ಪದೇ ಪದೇ ಹೇಳುವ ಮೂಲಕ, ಆ ವ್ಯಕ್ತಿಯನ್ನು ನಿಸ್ಸಾಯಕನನ್ನಾಗಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸಾಧಕನಾಗಬೇಕಾದವನು ಓದಲೇ ಬೇಕೆಂದಿಲ್ಲ. ಕನ್ನಡ ಓದಲು, ಬರೆಯಲು ಬಾರದವರು ಆರ್ಥಿಕವಾಗಿ ಸಬಲರಾಗಬಲ್ಲರು. ನನ್ನ ಆಶ್ರಮದಲ್ಲಿ ಓದಲು, ಬರೆಯಲು ಬಾರದ ವ್ಯಕ್ತಿಯಿದ್ದ. ಆದರೆ, ಆತನಿಗೆ ಅಡುಗೆ ಚೆನ್ನಾಗಿ ಮಾಡಲು ಬರುತ್ತಿತ್ತು. ಈಗ ಆತ ದೇಶದ 20ಕಡೆಗಳಲ್ಲಿ ಬೃಹತ್ ಹೊಟೇಲ್‌ಗಳನ್ನು ತೆರೆದಿದ್ದಾನೆ. ಹೀಗಾಗಿ ಓದುವವರು ಮಾತ್ರ ಸಾಧಕರಾಗುತ್ತಾರೆಂಬುದು ತಪ್ಪು ಎಂದು ಅವರು ಹೇಳಿದರು.

ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ರವಿ ಡಿ ಚನ್ನಣ್ಣನವರ್ ಮಾತನಾಡಿ, ಐಪಿಎಸ್ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಗಂಟೆಗಟ್ಟಲೆ ಕೂತು ಎಲ್ಲ ಪುಸ್ತಕಗಳನ್ನು ಓದಿದವನಲ್ಲ. ರಾಮಕೃಷ್ಣ ಪರಮಹಂಸ, ವಿವೇಕಾನಂದರ ತತ್ವಗಳು ನನ್ನೊಳಗೆ ಏನಾದರು ಸಾಧಿಸಬೇಕೆಂಬ ಛಲ ಮೂಡುವಂತೆ ಮಾಡಿದ್ದವು ಎಂದು ತಿಳಿಸಿದರು.

ನಾನು ಶಾಲಾ ದಿನಗಳಲ್ಲಿ ಉಡಾಫೆ ಹುಡುಗನಾಗಿದ್ದೆ. ಜಗಳ, ತಿರುಗಾಟ ಸರ್ವೆ ಸಾಮಾನ್ಯವಾಗಿತ್ತು ಹಾಗೂ ಅಗತ್ಯಕ್ಕಿಂತ ಹೆಚ್ಚು ತಿನ್ನುವುದು ರೂಢಿಯಾಗಿತ್ತು. ಆದರೆ, ವಿವೇಕಾನಂದರ ವಿಚಾರಗಳನ್ನು ತಿಳಿಯುತ್ತಿದ್ದಂತೆ ನನ್ನ ಬದುಕನ್ನು ನಿರ್ದಿಷ್ಟ ದಿಕ್ಕಿನಲ್ಲಿ ರೂಪಿಸಿಕೊಳ್ಳಲು ತೊಡಗಿದೆ. ಅದರ ಕಾರಣದಿಂದಾಗಿ ಐಪಿಎಸ್ ಅಧಿಕಾರಿಯಾಗಲು ಸಾಧ್ಯವಾಯಿತು ಎಂದು ಅವರು ಹೇಳಿದರು.

ನಮ್ಮಳಗೊಬ್ಬ ರವಿ ಡಿ ಚನ್ನಣ್ಣನವರ್ ಕೃತಿಯನ್ನು ಮುಖ್ಯ ಪೊಲೀಸ್ ಪೇದೆ ಎನ್.ಚಂದ್ರು ಬಿಡುಗಡೆ ಮಾಡಿದರು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮನು ಬಳಿಗಾರ್, ಲೇಖಕ ಎರ್ರೆಪ್ಪಗೌಡ ಚಾನಾಳ್, ಸ್ವಾನ್ ಪ್ರಿಂಟರ್ಸ್‌ನ ಕೃಷ್ಣಮೂರ್ತಿ ಮತ್ತಿತರರಿದ್ದರು.

ನಾಗರಪಂಚಮಿಯೆಂದು ಹುತ್ತಕ್ಕೆ ಹಾಲು ಹಾಕುವುದನ್ನು ಬುದ್ಧಿ ಜೀವಿಗಳು ವಿರೋಧಿಸುತ್ತಾರೆ. ಆ ಮೂಲಕ ಭಾರತೀಯ ಸಂಸ್ಕೃತಿಯನ್ನು ಅವಮಾನ ಮಾಡುತ್ತಿದ್ದಾರೆ. ಕೇವಲ ಹುತ್ತಕ್ಕೆ ಎರಡು ಮೂರು ಲೀಟರ್ ಹಾಲು ಹಾಕಿದರೆ, ದೇಶಕ್ಕೆ ದೊಡ್ಡ ನಷ್ಟವಾದಂತೆ ನಟಿಸುತ್ತಿದ್ದಾರೆ.

-ನಿರ್ಭಯಾನಂದ ಸರಸ್ವತಿ ಸ್ವಾಮೀಜಿ, ರಾಮಕೃಷ್ಣ ಆಶ್ರಮ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X