Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ-ನರಸಿಂಹ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ-ನರಸಿಂಹ ಮಠದ ವಿವಾದ: ಸಂಘ ಪರಿವಾರದ ಸಂಘಟನೆಗಳ ನಡುವೆ ಗಲಾಟೆ

ಓರ್ವನಿಗೆ ಗಾಯ, ಚೈತ್ರಾ ಕುಂದಾಪುರ ಸಹಿತ 7 ಮಂದಿ ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ24 Oct 2018 11:26 PM IST
share
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ-ನರಸಿಂಹ ಮಠದ ವಿವಾದ: ಸಂಘ ಪರಿವಾರದ ಸಂಘಟನೆಗಳ ನಡುವೆ ಗಲಾಟೆ

ಸುಬ್ರಹ್ಮಣ್ಯ, ಅ.24: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದಕ್ಕೆ ಸಂಬಂಧಿಸಿ ಸಂಘ ಪರಿವಾರದ ಸಂಘಟನೆಗಳ ಮಧ್ಯೆಯೇ ಬುಧವಾರ ಸಂಜೆ ಗಲಾಟೆ ನಡೆದಿದ್ದು, ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಗಾಯಗೊಂಡಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧಿಸಿ ಸಂಘ ಪರಿವಾರದ ನಾಯಕಿ ಚೈತ್ರಾ ಕುಂದಾಪುರ ಸಹಿತ ಏಳು ಮಂದಿಯನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಘಟನೆಯನ್ನು ಖಂಡಿಸಿ ಗುರುವಾರ ಸುಬ್ರಹ್ಮಣ್ಯ ಬಂದ್‌ಗೆ ನಗರದ ವರ್ತಕರು, ಕೆಲವು ಸಂಘಟನೆಗಳು ಕರೆ ನೀಡಿವೆ.

ಘಟನೆ ವಿವರ

ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯ ವಿಚಾರಕ್ಕೆ ಸಂಬಂಧಿಸಿ ಸಂಘ ಪರಿವಾರದ ಎರಡು ಗುಂಪುಗಳ ನಡುವೆ ಇತ್ತೀಚೆಗೆ ವೈಮನಸ್ಸು ಏರ್ಪಟ್ಟಿತ್ತು. ಈ ವಿಚಾರದಲ್ಲಿ ಚೈತ್ರಾ ಕುಂದಾಪುರ ಮಠದ ಪರವಾಗಿ ಮಾತನಾಡುತ್ತಾ ದೇವಸ್ಥಾನದ ಸರ್ಪ ಸಂಸ್ಕಾರ ವಿಧಿಯ ಕುರಿತು ಆಕ್ಷೇಪಾರ್ಹ ಮಾತುಗಳನ್ನಾಡಿದ್ದಳೆನ್ನಲಾಗಿದೆ. ಬಳಿಕ ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ ವಿರೋಧ ಚರ್ಚೆಗಳು ನಡೆದಿದ್ದವು.

ಇದೇ ವಿಚಾರವಾಗಿ ಗುರುಪ್ರಸಾದ್ ಪಂಜ ಹಾಗೂ ಚೈತ್ರಾ ನಡುವೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನಿರಂತರ ವಾಗ್ವಾದ ನಡೆಯುತ್ತಿತ್ತು. ಬಳಿಕ ಇವರೊಳಗೆ ಈ ವಿಚಾರದಲ್ಲಿ ದೂರವಾಣಿ ಮೂಲಕ ಚರ್ಚೆಯಾಗಿ ಪರಸ್ಪರ ಸವಾಲು ಹಾಕುವ ಮಟ್ಟಕ್ಕೆ ತಲುಪಿದೆ. ಇದರ ಮುಂದುವರಿದ ಭಾಗವಾಗಿ ಚೈತ್ರಾ ಕುಂದಾಪುರ ಹಾಗೂ ತಂಡ ಬುಧವಾರ ಸಂಜೆ ಸುಬ್ರಹ್ಮಣ್ಯಕ್ಕೆ ಆಗಮಿಸಿದೆ. ಸುಬ್ರಹ್ಮಣ್ಯ ಕಾಶಿಕಟ್ಟೆ ಎಂಬಲ್ಲಿ ಚೈತ್ರಾ ಮತ್ತು ಗುರುಪ್ರಸಾದ್ ಬೆಂಬಲಿಗರ ತಂಡವನ್ನು ಪರಸ್ಪರ ಸಂಧಿಸಿದ್ದು, ಇವರೊಳಗೆ ವಾಗ್ವಾದ ನಡೆದಿದೆ. ಇದು ಕೈಕೈ ಮಿಲಾಯಿಸುವ ಹಂತ ತಲುಪಿದಾಗ ಚೈತ್ರಾ ಬೆಂಬಲಿಗ ತಂಡದ ಓರ್ವ ಕಬ್ಬಿಣದ ರಾಡ್‌ನಿಂದ ಗುರುಪ್ರಸಾದ್ ಮೇಲೆ ಹಲ್ಲೆ ನಡೆಸಿದನೆನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಸುಬ್ರಹ್ಮಣ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದರು.

ಚೈತ್ರಾ ಕುಂದಾಪುರ ಹಾಗೂ ತಂಡದ ಕೃತ್ಯವನ್ನು ಖಂಡಿಸಿ ತಡರಾತ್ರಿ ಸುಬ್ರಹ್ಮಣ್ಯದ ನಾಗರಿಕರು ಮೆರವಣಿಗೆ ನಡೆಸಿದರು. ಘಟನೆ ಕುರಿತಂತೆ ರಾತ್ರಿಯವರೆಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಯಾವುದೇ ದೂರು ಸ್ವೀಕಾರವಾಗಿಲ್ಲ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಆಕೆಯ ಬೆಂಬಲಿಗರೆನ್ನಲಾದ ಕುಂದಾಪುರ ಮೂಲದ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಕುರಿತು ಸತ್ಯಾಸತ್ಯತೆಯ ಮಾಹಿತಿ ಪಡೆದು ಮುಂದಿನ ಕ್ರಮ ಜರಗಿಸಲಾಗುವುದು ಎಂದು ಸುಬ್ರಹ್ಮಣ್ಯ ಠಾಣಾಧಿಕಾರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X