Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇರಳದಲ್ಲಿ ರಾಷ್ಟ್ರಪತಿ ಆಳ್ವಿಕೆ...

ಕೇರಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿ: ಪ್ರಮೋದ್ ಮುತಾಲಿಕ್

ವಾರ್ತಾಭಾರತಿವಾರ್ತಾಭಾರತಿ25 Oct 2018 6:52 PM IST
share
ಕೇರಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿ: ಪ್ರಮೋದ್ ಮುತಾಲಿಕ್

ಬೆಂಗಳೂರು, ಅ. 25: ಕಮ್ಯೂನಿಸ್ಟ್, ಬುದ್ಧಿಜೀವಿಗಳು ಹಿಂದೂ ಮಠ, ದೇವಸ್ಥಾನವನ್ನು ಅವಹೇಳನ ಮಾಡುವ ಕೆಲಸದಲ್ಲಿ ನಿರತರಾಗಿದ್ದು, ಅವರು ಏನೇ ಮಾಡಿದರೂ ಹಿಂದೂ ಸಂಪ್ರದಾಯ ಮುರಿಯಲು ಸಾಧ್ಯವಿಲ್ಲ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಶಬರಿಮಲೆಗೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂಕೋರ್ಟ್ ನೀಡಿದ ತೀರ್ಪು ಧಾರ್ಮಿಕತೆಗೆ ಧಕ್ಕೆಯಾಗಿದ್ದು, ತೀರ್ಪನ್ನು ಮರುಪರಿಶೀಲಿಸಬೇಕು. ಭಾರತ ಅಧ್ಯಾತ್ಮ ನೆಲೆಯ ಹಿನ್ನೆಲೆ ಹೊಂದಿದ್ದು, ಕಮ್ಯೂನಿಸ್ಟ್, ಬುದ್ಧಿಜೀವಿಗಳು ಹಿಂದೂ ಮಠ, ದೇವಸ್ಥಾನ ಹಾಗೂ ಆಚರಣೆಗಳನ್ನು ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.

ಕೇರಳ ಸರಕಾರ ನಾಸ್ತಿಕ ಸರಕಾರವಾಗಿದ್ದು, ಪ್ರಸಿದ್ಧ ದೇವಸ್ಥಾನ ಅಪವಿತ್ರ ಮಾಡುವ ಸಂಚು ರೂಪಿಸಿದೆ. ಮಸೀದಿಯೊಳಗೆ ಮಹಿಳೆಯರು ಸೇರಿದಂತೆ ಎಲ್ಲರನ್ನು ಬಿಡಲಿ. ನಂತರ ಹಿಂದೂ ದೇವಸ್ಥಾನದ ಬಗ್ಗೆ ಮಾತನಾಡಲಿ. ಕಿಸ್‌ ಆಫ್ ಲವ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡವಳು ಪೊಲೀಸ್ ಡ್ರೆಸ್‌ನಲ್ಲಿ ದೇವಸ್ಥಾನ ಪ್ರವೇಶಿಸಿದ್ದೇಕೆ? ಪೊಲೀಸ್ ಡ್ರೆಸ್ ಕೊಟ್ಟಿದ್ದು ಯಾರು? ಸರಕಾರದ ಕೈವಾಡ ಇದರಲ್ಲಿ ಕಾಣುತ್ತದೆ. ಆದ್ದರಿಂದ ಕೇಂದ್ರ ಸರಕಾರ ಕೇರಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಹರಿಹರಾತ್ಮಜ ಪೀಠಾಪತಿ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ ಮಾತನಾಡಿ, ಅಯ್ಯಪ್ಪ ಮಾಲಾಧಾರಿಗಳು 48 ದಿನಗಳು ಅಖಂಡ ಮಂಡಲ ವ್ರತಾಚರಣೆ ಮಾಡಿ ಶಬರಿಮಲೆಗೆ ತೆರಳುವ ಸಂಪ್ರದಾಯ ಸಹಸ್ರಾರು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತದೆ. 10 ವರ್ಷದ ಒಳಗೆ 50 ವರ್ಷದ ಮೇಲ್ಪಟ್ಟವರು ಶಬರಿಮಲೆಗೆ ಹೋಗಲಿ. ಆದರೆ ಎಲ್ಲ ವಯಸ್ಸಿನ ಮಹಿಳೆಯರು ಹೋಗುವುದು ಧರ್ಮಕ್ಕೆ ವಿರುದ್ಧ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪನ್ನು ಮರು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ದೇಶಾದಾದ್ಯಂತ ತೀರ್ಪಿನ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಕೋರ್ಟ್ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಹಿಂದಿನ ಸಂಪ್ರದಾಯದಂತೆ ಶಬರಿಮಲೆಯಲ್ಲಿ ಆಚರಣೆಗಳು ಆಗಬೇಕು. ಆದ್ದರಿಂದ ರಾಜ್ಯ ಸರಕಾರಗಳು ಕೇಂದ್ರಕ್ಕೆ, ರಾಜ್ಯಪಾಲರು ರಾಷ್ಟ್ರಪತಿಗೆ, ಹೈಕೋರ್ಟ್‌ನ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಬೇಕಿದೆ. ತೀರ್ಪು ಮರುಪರಿಶೀಲನೆಗಾಗಿ ಶಾಂತಿ ಸದ್ಭಾವನಾ ಮೆರವಣಿಗೆ, ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ನಟ ಶಿವರಾಮ್ ಮಾತನಾಡಿ, ಭಾರತ ಮಹಿಳೆಯರಿಗೆ ಸ್ಥಾನಮಾನ ಕೊಟ್ಟ ದೇಶ. ಶಬರಿಮಲೆ ಪ್ರವೇಶ ಕೇಳುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ, ಅತ್ಯಾಚಾರದ ವಿರುದ್ಧ ಹೋರಾಡಲಿ. ಡಾ.ರಾಜಕುಮಾರ್, ಕಮಲ್‌ ಹಾಸನ್, ರಜಿನೀಕಾಂತ್, ಅಮಿತಾಬ್ ಬಚ್ಚನ್ ಸೇರಿದಂತೆ ಹಿರಿಯ ನಟರೆಲ್ಲರೂ ಶಬರಿಮಲೆಗೆ ಹೋದಾಗಿನಿಂದ ಶಬರಿಮಲೆಯ ಮಹತ್ವ ತಿಳಿದು ಜನರು ಹೋಗಲು ಆರಂಭಿಸಿದರು. ಇಂತ ಪವಿತ್ರ ಕ್ಷೇತ್ರಕ್ಕೆ ಕೋರ್ಟ್‌ನ ತೀಪಿನಿಂದ ಧಕ್ಕೆಯಾಗಿದೆ. ತೀಪು ಮರುಪರಿಶೀಲನೆಯಾಗಬೇಕು ಎಂದರು.

ಅ.27ರಂದು ಸದ್ಭಾವನಾ ಮೆರವಣಿಗೆ

ಶಬರಿಮಲೆ ತೀರ್ಪು ಮರು ಪರಿಶೀಲಿಸಬೇಕೆಂದು ಆಗ್ರಹಿಸಿ ಶ್ರೀಶಬರಿಮಲೆ ಪರಂಪರೆ ಸಂರಕ್ಷಣಾ ವೇದಿಕೆ, ಶ್ರೀರಾಮಸೇನೆ ಸೇರಿದಂತೆ ಹಿಂದೂ ಸಂಘಟನೆಗಳು ಅ.27ರಂದು ಬೆಳಗ್ಗೆ 10ಗಂಟೆಗೆ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನವರೆಗೆ ಶಾಂತಿ ಸದ್ಭಾವನಾ ಮೆರವಣಿಗೆ ಹಮ್ಮಿಕೊಂಡಿರುವುದಾಗಿ ಪ್ರಮೋದ್ ಮುತಾಲಿಕ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X