Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೀಟೂ ಅಭಿಯಾನ ಪುರುಷ ದ್ವೇಷಿ ಅಲ್ಲ:...

ಮೀಟೂ ಅಭಿಯಾನ ಪುರುಷ ದ್ವೇಷಿ ಅಲ್ಲ: ಹಿರಿಯ ವಕೀಲೆ ಹೇಮಲತಾ ಮಹಿಷಿ

ವಾರ್ತಾಭಾರತಿವಾರ್ತಾಭಾರತಿ25 Oct 2018 8:00 PM IST
share
ಮೀಟೂ ಅಭಿಯಾನ ಪುರುಷ ದ್ವೇಷಿ ಅಲ್ಲ: ಹಿರಿಯ ವಕೀಲೆ ಹೇಮಲತಾ ಮಹಿಷಿ

ಬೆಂಗಳೂರು, ಅ.25: ಮೀಟೂ ಅಭಿಯಾನ ಪುರುಷ ದ್ವೇಷಿ ಎನ್ನುವ ರೀತಿಯಲ್ಲಿ ಕೆಲವರು ತಪ್ಪು ಅಭಿಪ್ರಾಯಗಳು ಮೂಡಿಸುತ್ತಿದ್ದಾರೆ. ಇದು ಯಾರ ವಿರುದ್ಧವು ಅಲ್ಲ. ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಹಿಳೆಯರು ಹಾಗೂ ಪುರುಷರು ಇಬ್ಬರು ಸೇರಿ ಜಾಗೃತಿ ಮೂಡಿಸುತ್ತಿರುವ ಅಭಿಯಾನವಾಗಿದೆ ಎಂದು ಹಿರಿಯ ವಕೀಲೆ ಹೇಮಲತಾ ಮಹಿಷಿ ಸ್ಪಷ್ಟ ಪಡಿಸಿದರು.

ಗುರುವಾರ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನಗರದ ಯುವಿಸಿಇ ಅಲುಮ್ನಿ ಅಸೋಸಿಯೇಷನ್‌ನಲ್ಲಿ ಮೀಟೂ ಅಭಿಯಾನದ ಭಾಗವಾಗಿ ಆಯೋಜಿಸಿದ್ದ ಮಹಿಳೆಯರ ಘನತೆ-ಭದ್ರತೆಗಾಗಿ ಆಗ್ರಹಿಸಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಶತಶತಮಾನಗಳಿಂದಲೂ ಮಹಿಳೆಯನ್ನು ಶೋಷಿಸುತ್ತಲೆ ಬರಲಾಗುತ್ತಿದೆ. ಇವತ್ತಿನ ಆಧುನಿಕ, ಪ್ರಜಾಪ್ರಾಭುತ್ವ ದೇಶದಲ್ಲೂ ಮಹಿಳೆ ತನ್ನ ಮೇಲಾದ ದೌರ್ಜನ್ಯವನ್ನು ಹೇಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಕೆಲವು ಮಹಿಳೆಯರು ಮೀಟೂ ಅಭಿಯಾನದ ಮುಖಾಂತರ ತಮ್ಮ ಮೇಲಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗ ಪಡಿಸುತ್ತಿದ್ದಾರೆ. ಇವರಿಗೆ ಬೆಂಬಲ ಕೊಡಬೇಕಾಗಿರುವುದು ಸಮಾಜದ ಕರ್ತವ್ಯವೆಂದು ಅವರು ಹೇಳಿದರು.

ಇಂದಿಗೂ ಸಿನೆಮಾ ಕ್ಷೇತ್ರದಲ್ಲಿ ಮಹಿಳೆಯನ್ನು ಬೋಗದ ವಸ್ತುವಾಗಿಯೆ ನೋಡುವಂತಹ ಪುರುಷ ಕೇಂದ್ರಿತ ಸಿನೆಮಾಗಳೆ ನಿರ್ಮಾಣವಾಗುತ್ತಿದೆ. ಸಿನೆಮಾಗಳಲ್ಲಿ ಮೂಡಿ ಬರುವ ಬಹುತೇಕ ದೃಶ್ಯಗಳನ್ನು ಗಮನಿಸಿದರೆ ಮಹಿಳಾ ವಿರೋಧಿಯಾಗಿಯೆ ಕಂಡು ಬರುತ್ತವೆ. ಇಂತಹ ವಾತಾವರಣ ಬದಲಾಗಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಮಾತನಾಡಿ, ಮೀಟೂ ಅಭಿಯಾನ ಗಾರ್ಮೆಂಟ್ಸ್ ಮಹಿಳಾ ನೌಕರರು, ಪೌರ ಕಾರ್ಮಿಕರು, ಸಾರಿಗೆ ಸಂಸ್ಥೆಯ ಮಹಿಳಾ ನೌಕರರ ಸೇರಿದಂತೆ ಕೆಳ ಹಂತದ ಮಹಿಳಾ ಸಮುದಾಯವನ್ನು ಒಳಗೊಳ್ಳಬೇಕಿದೆ. ಆಗ ಮಾತ್ರ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮೀಟೂ ಸಂಚಲನ ಮೂಡಿಸಲು ಸಾಧ್ಯವೆಂದು ತಿಳಿಸಿದರು.

ಸಿನೆಮಾ ರಂಗದಲ್ಲಿ ನಾಯಕಿಯರು ಹಲವು ರೀತಿಯಲ್ಲಿ ದೌರ್ಜನ್ಯಕ್ಕೆ ತುತ್ತಾಗಬೇಕಾದರೆ, ಇನ್ನು ಪೋಷಕ ನಟಿಯರ ಎಂತಹ ಪರಿಸ್ಥಿತಿಯನ್ನು ಎದುರಿಸುತ್ತಿರಬಹುದು. ಹೀಗಾಗಿ ಕಾನೂನಿನ ಜತೆ ಜತೆಗೆ ಪುರುಷರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಎಂದು ಅವರು ತಿಳಿಸಿದರು.

ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ ಮಾತನಾಡಿ, ಮಹಿಳೆಯರ ಮೇಲಿನ ನಡೆಯುತ್ತಿರುವ ದೌರ್ಜನ್ಯ ಮನೆಯ ಹಂತದಿಂದಲೆ ಪ್ರಾರಂಭವಾಗುತ್ತದೆ. ಹಾಗೂ ಇದಕ್ಕೆ ಪೂರಕವಾಗಿ ನಮ್ಮ ಮನುಧರ್ಮ ಶಾಸ್ತ್ರದಲ್ಲಿ, ತತ್ವಶಾಸ್ತ್ರಜ್ಞ ಅರಿಸ್ಟಾಟಲ್ ಸೇರಿದಂತೆ ಮಹಾನ್ ಚಿಂತಕರು ಮಹಿಳಾ ವಿರೋಧಿ ಹೇಳಿಕೆಗಳನ್ನೆ ನೀಡಿದ್ದಾರೆ. ಹೀಗಾಗಿ ಪುರುಷ ಪ್ರಧಾನ ವ್ಯವಸ್ಥೆಯ ಬದಲಾಗಿ ಮಾತೃ ಪ್ರಧಾನ ವ್ಯವಸ್ಥೆಯನ್ನು ಜಾರಿಗೆ ತರುವ ಅಗತ್ಯವಿದೆ ಎಂದು ತಿಳಿಸಿದರು.

ಹಿರಿಯ ಪತ್ರಕರ್ತೆ ಜ್ಯೋತಿ ಇರ್ವತ್ತೂರು ಮಾತನಾಡಿ, ಮಾಧ್ಯಮ ಕ್ಷೇತ್ರವನ್ನು ಒಳಗೊಂಡಂತೆ ಎಲ್ಲ ಕ್ಷೇತ್ರಗಳಲ್ಲಿ ನಿರ್ಣಾಯಕ ಹಂತದ ಹುದ್ದೆಗಳಲ್ಲಿ ಮಹಿಳೆಯರಿಗೆ ಸ್ಥಾನವಿಲ್ಲ. ಹೀಗಾಗಿ ಸಮಾಜದಲ್ಲಿ ಮಹಿಳೆಯರ ಬಗೆಗಿನ ಸಂವೇದನೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಮೀಟೂ ಅಭಿಯಾನದ ಮೂಲಕ ಸಮಾಜದಲ್ಲಾಗುತ್ತಿರುವ ಎಲ್ಲ ರೀತಿಯ ದೌರ್ಜನ್ಯಗಳು ಹೊರಕ್ಕೆ ಬರಲಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಐಎಂಎಸ್‌ಎಸ್ ಉಪಾಧ್ಯಕ್ಷೆ ಡಾ.ಸುಧಾ ಕಾಮತ್, ಎಐಎಂಎಸ್‌ಎಸ್ ಅಧ್ಯಕ್ಷ ಅಪರ್ಣಾ, ರಾಜ್ಯ ಕಾರ್ಯದರ್ಶಿ ಶೋಭಾ ಮತ್ತಿತರರಿದ್ದರು.

ಹಕ್ಕೊತ್ತಾಯಗಳು

-ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ

-ವಿಶಾಖ ಮಾರ್ಗಸೂಚಿ ಅನುಷ್ಠಾನಗೊಳ್ಳಲಿ

-ಲೈಂಗಿಕ ಕಿರುಕುಳ ನಿವಾರಣೆ ಸಮಿತಿಗಳನ್ನು ಎಲ್ಲ ಸರಕಾರಿ-ಖಾಸಗಿ ಸಂಸ್ಥೆಗಳಲ್ಲಿ ರಚಿಸಿರುವುದನ್ನು ಖಾತ್ರಿ ಮಾಡಬೇಕು

-ಲೈಂಗಿಕ ಕಿರುಕುಳ ಪ್ರಕರಣಗಳನ್ನು ಗರಿಷ್ಠ 6ತಿಂಗಳೊಳಗೆ ತೀರ್ಮಾನ ಮಾಡಬೇಕು.

-ಲೈಂಗಿಕ ಕಿರುಕುಳ ನೀಡಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಖಾತ್ರಿ ಪಡಿಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X