Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆರಿಗೆಗಳ ಭಾರದಿಂದ ದೇಶದಲ್ಲಿ ದೂರಸಂಪರ್ಕ...

ತೆರಿಗೆಗಳ ಭಾರದಿಂದ ದೇಶದಲ್ಲಿ ದೂರಸಂಪರ್ಕ ಕ್ಷೇತ್ರ ತತ್ತರಿಸುತ್ತಿದೆ: ಏರ್ ಟೆಲ್ ಅಧ್ಯಕ್ಷ ಮಿತ್ತಲ್

ವಾರ್ತಾಭಾರತಿವಾರ್ತಾಭಾರತಿ25 Oct 2018 8:46 PM IST
share
ತೆರಿಗೆಗಳ ಭಾರದಿಂದ ದೇಶದಲ್ಲಿ ದೂರಸಂಪರ್ಕ ಕ್ಷೇತ್ರ ತತ್ತರಿಸುತ್ತಿದೆ: ಏರ್ ಟೆಲ್ ಅಧ್ಯಕ್ಷ ಮಿತ್ತಲ್

ಹೊಸದಿಲ್ಲಿ,ಅ.25: ಅತಿಯಾದ ತೆರಿಗೆಗಳ ಭಾರದಿಂದ ದೂರಸಂಪರ್ಕ ಕ್ಷೇತ್ರವು ನಲುಗುತ್ತಿದೆ ಮತ್ತು ಈ ಕ್ಷೇತ್ರವು ದೇಶದ ಡಿಜಿಟಲ್ ಮಹತ್ವಾಕಾಂಕ್ಷೆಗಳಿಗೆ ತನ್ನ ಕೊಡುಗೆಯನ್ನು ಸಲ್ಲಿಸುತ್ತಿದೆಯಾದರೂ ಅದನ್ನು ತಂಬಾಕು ಉದ್ಯಮದಂತೆ ಭಾವಿಸಿ ತೆರಿಗೆಗಳನ್ನು ಹೇರಲಾಗುತ್ತಿದೆ ಎಂದು ಪ್ರಮುಖ ದೂರಸಂಪರ್ಕ ಸಂಸ್ಥೆ ಭಾರ್ತಿ ಏರ್‌ಟೆಲ್‌ನ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ ಅವರು ಗುರುವಾರ ಇಲ್ಲಿ ವಿಷಾದಿಸಿದರು.

ಭಾರತದ ದೂರಸಂಪರ್ಕ ಕ್ಷೇತ್ರವು ಈಗ ಘನೀಕರಣಗೊಂಡಿದೆ, ಆದರೆ ಇದಕ್ಕಾಗಿ ಅದು ದುಬಾರಿ ಬೆಲೆಯನ್ನು ತೆತ್ತಿದೆ. ಹಲವಾರು ಜನರು ಉದ್ಯೋಗ ವಂಚಿತರಾಗಿದ್ದಾರೆ ಮತ್ತು ಸುಮಾರು 50 ಶತಕೋಟಿ ಡಾ.ಗಳ ಹೂಡಿಕೆಯನ್ನು ತೊಡೆದುಹಾಕಲಾಗಿದೆ ಎಂದರು.

ಇಂಡಿಯಾ ಮೊಬೈಲ್ ಕಾಂಗ್ರೆಸ್ 2018ರ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡುತ್ತಿದ್ದ ಅವರು,ನಮ್ಮ ದೇಶದಲ್ಲಿ ಮೊಬೈಲ್ ಕಂಪನಿಗಳು ಗಳಿಸುವ ಪ್ರತಿ 190 ರೂ.ಗಳಲ್ಲಿ ಸುಮಾರು 37 ರೂ.ಗಳು ಒಂದಲ್ಲ ಒಂದು ತೆರಿಗೆ ರೂಪದಲ್ಲಿ ಹೋಗುತ್ತಿವೆ. ಒಂದೆಡೆ ನಾವು ಪ್ರಧಾನಿಯವರ ಡಿಜಿಟಲ್ ಸಮರ್ಥ ಭಾರತದ ಕನಸನ್ನು ಹೊಂದಿದ್ದೇವೆ ಮತ್ತು ಇದಕ್ಕಾಗಿ ಬೃಹತ್ ಹೂಡಿಕೆ ಅಗತ್ಯವಾಗಿದೆ. ಇನ್ನೊಂದೆಡೆ ನಾವು ಭಾರೀ ಸ್ಪೆಕ್ಟ್ರಂ ಶುಲ್ಕಗಳನ್ನು ತೆರಬೇಕಿದೆ ಮತ್ತು ನಮ್ಮ ಪರವಾನಿಗೆ ಶುಲ್ಕಗಳೂ ತೀರ ಹೆಚ್ಚಾಗಿವೆ. ಇದರ ಜೊತೆಗೆ ಶೇ.18 ಜಿಎಸ್‌ಟಿಯನ್ನು ಪಾವತಿಸಬೇಕಿದೆ. ಇಂತಹ ಸಂಘರ್ಷದ ಸ್ಥಿತಿಯ ಅಸ್ತಿತ್ವವೇ ನನಗೆ ಅರ್ಥವಾಗುತ್ತಿಲ್ಲ ಎಂದರು.

ಈ ಸಮಸ್ಯೆಗಳನ್ನು ಬಗೆಹರಿಸುವ ಅಗತ್ಯವಿದೆ. ರಾಷ್ಟ್ರೀಯ ಡಿಜಿಟಲ್ ಸಂವಹನ ನೀತಿಯು ದ್ವಿತೆರಿಗೆ,ವಿಲೀನ ಮತ್ತು ಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಿಕೆ ಮತ್ತು ಕ್ಷೇತ್ರದಲ್ಲಿ ಕಾನೂನು ವಿವಾದಗಳಂತಹ ಬಾಕಿಯುಳಿದಿರುವ ಸಮಸ್ಯೆಗಳ ಕಡೆಗೆ ಗಮನ ಹರಿಸಿರುವುದು ಸಮಾಧಾನದ ವಿಷಯವಾಗಿದೆ ಎಂದರು.

ಉದ್ಯಮವು ಈಗ ಸರಿಯಾದ ಸ್ವರೂಪವನ್ನು ಪಡೆದುಕೊಂಡಿದೆ ಎಂದ ಅವರು,ವೊಡಾಫೋನ್-ಐಡಿಯಾ ವಿಲೀನವನ್ನು ಹೊರತುಪಡಿಸಿ ಈ ರೂಪಾಂತರವು ಸಾಮಾನ್ಯ ರೀತಿಯಲ್ಲಿ ನಡೆದಿಲ್ಲ. ಇದು ದುಬಾರಿ ಬೆಲೆಯನ್ನು ಪಡೆದುಕೊಂಡಿದೆ ಎಂದರು.

5ಜಿ ಅನ್ನು ತರಲು ದೂರಸಂಪರ್ಕ ಉದ್ಯಮವು ಸಜ್ಜಾಗಿದೆ ಮತ್ತು ಅದು ಕಳೆದ 24 ವರ್ಷಗಳಲ್ಲಿಯಂತೆ ಯಶಸ್ವಿ ಫಲಿತಾಂಶಗಳನ್ನು ನೀಡಲಿದೆ ಎಂದ ಮಿತ್ತಲ್,ಆದರೆ ಸ್ಪೆಕ್ಟ್ರಂ ಬೆಲೆಗಳು ಮತ್ತು ಶುಲ್ಕಗಳು ನ್ಯಾಯಯುತವಾಗಿರಬೇಕು ಮತ್ತು ಕೈಗೆಟಕುವಂತಿರಬೇಕು,ಜೊತೆಗೆ ಅತಿಯಾದ ತೆರಿಗೆ ಹೇರಿಕೆಯನ್ನು ಕೈಬಿಡಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X