Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಿ ಟೂ; ಹೆಣ್ಣು ಮುಕ್ತವಾಗಿ ಬಂದಾಗ...

​ಮಿ ಟೂ; ಹೆಣ್ಣು ಮುಕ್ತವಾಗಿ ಬಂದಾಗ ಬೆಂಬಲ ನೀಡಿ: ಜಯಮಾಲ

ವಾರ್ತಾಭಾರತಿವಾರ್ತಾಭಾರತಿ25 Oct 2018 8:52 PM IST
share
​ಮಿ ಟೂ; ಹೆಣ್ಣು ಮುಕ್ತವಾಗಿ ಬಂದಾಗ ಬೆಂಬಲ ನೀಡಿ: ಜಯಮಾಲ

ನಾಗೂರು (ಬೈಂದೂರು), ಅ.25: ಮಿ ಟೂ ಅಭಿಯಾನ ಹೆಣ್ಣನ್ನು ಹರಾಜು ಹಾಕುವ ಅಭಿಯಾನ ಆಗದಿರಲಿ. ಹೆಣ್ಣು ಮುಕ್ತವಾಗಿ ಬಂದಾಗ ಬೆಂಬಲ ನೀಡಬೇಕು. ಆದರೆ ಹೆಣ್ಣಿಗೆ ರಕ್ಷಣೆ ಕೊಡುವ ನೆಪದಲ್ಲಿ ಗಂಡಸನ್ನು ಸುಮ್ಮನೆ ದೂಷಿಸುವುದು ಸರಿಯಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಚಿತ್ರನಟಿ ಡಾ. ಜಯಮಾಲಾ ಹೇಳಿದ್ದಾರೆ.

ನಾಗೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಜಯಮಾಲ, ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಹೆಣ್ಣಿನ ಮೇಲಾಗುವ ದೌರ್ಜನ್ಯ, ಲೈಂಗಿಕ ಕಿರುಕುಳವನ್ನು ಎದುರಿಸಲು ಮಿ ಟೂ ಆಕೆಗೆ ಬಲ ತಂದು ಕೊಟ್ಟಿದೆ. ಮಿ ಟೂ ಈಗ ತಾನೇ ಹುಟ್ಟಿಕೊಂಡ ಹೊಸ ಅಭಿಯಾನ. ಇದಕ್ಕೆ ಕಾನೂನಿನ ನೆಲೆ ಸಿಗುವವರೆಗೂ ಇದರಿಂದ ಹೆಣ್ಣಿಗೆ ಎಷ್ಟು ನ್ಯಾಯ ಸಿಗುತ್ತದೆ ಎಂಬುದು ಮುಖ್ಯವಾಗುತ್ತದೆ ಎಂದು ಜಯಮಾಲಾ ಅಭಿಪ್ರಾಯಪಟ್ಟರು.

ಮಿ ಟೂ ಅಭಿಯಾನ ಹೆಣ್ಣಿಗೆ ರಕ್ಷಣೆ ನೀಡುವ ಅಭಿಯಾನವಾಗಿದೆ. ಇದು ಹೆಣ್ಣಿಗೆ ಬಲವನ್ನು ತಂದುಕೊಟ್ಟಿದೆ. ಹೆಣ್ಣು ದೌರ್ಜನ್ಯದಿಂದ ಮಾನಸಿಕವಾಗಿ ಚಿತ್ರಹಿಂಸೆ ಪಡುವ ಬದಲು, ಅದನ್ನು ಮುಕ್ತವಾಗಿ ಹೇಳಿಕೊಳ್ಳುವ ಅವಕಾಶ ವನ್ನು, ವೇದಿಕೆಯನ್ನು ಇದು ನೀಡಿದೆ ಎಂದು ಅವರು ಹೇಳಿದರು.

ತಾವು ಅಭಿನಯಿಸುವಾಗ ನಿರ್ದೇಶಕರು ಅಥವಾ ನಟರಿಂದ ಇಂಥ ಅನುಭವವಾಗಿತ್ತೇ ಎಂದು ಪ್ರಶ್ನಿಸಿದಾಗ, ಮಾತನ್ನು ಅರ್ಧದಲ್ಲೇ ತುಂಡರಿಸಿದ ಜಯಮಾಲ, ‘ನಾವು ಸುವರ್ಣ ಕಾಲದಲ್ಲಿದ್ವಿ. ರಾಜ್‌ಕುಮಾರ್‌ರಂಥ ಮಹಾನ್ ನಟರೊಂದಿಗೆ ಕೆಲಸ ಮಾಡಿದ್ದೀವಿ. ನಾವು ಇಂಥ ದಿನಗಳನ್ನೇ ನೋಡಿಲ್ಲ. ನಾನು, ನನ್ನ 13ನೇ ವರ್ಷದಿಂದ ಈವರೆಗೆ 75 ಸಿನಿಮಾಗಳಲ್ಲಿ ಕೆಲಸ ಮಾಡಿದ್ದೀನಿ. ಐದು ಸಿನಿಮಾಗಳನ್ನು ನಿರ್ಮಿಸಿದ್ದೀನಿ. ಇದು ನನ್ನ 46ನೇ ವರ್ಷದ ಚಿತ್ರರಂಗ ಯಾತ್ರೆ. ಬದುಕಿನಲ್ಲಿ ಇಂಥ ಒಂದು ದಿನ ಯಾವತ್ತೂ ನನಗೆ ಬಂದಿಲ್ಲ. ಒಂದೇ ಒಂದು ಕಹಿ ಘಟನೆ ನನ್ನ ಜೀವನದಲ್ಲಿ ನಡೆದಿಲ್ಲ. ನನ್ನ ಕಾಲ ಚಿತ್ರರಂಗದ ಸುವರ್ಣ ಯುಗ’ ಎಂದರು.

ಈಗಿನ ಚಿತ್ರರಂಗದ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಆದರೆ ನಟ ಅರ್ಜುನ್ ಸರ್ಜಾ ಸರಳ ಸಜ್ಜನ ಹುಡುಗ. ಸರ್ಜಾ ತಂದೆಯ ಜೊತೆಯೂ ನಾನು ಅಭಿನಯಿಸಿದ್ದೆ. ಇದೀಗ ಈ ವಿಷಯದ ಬಗ್ಗೆ ವಾಣಿಜ್ಯ ಮಂಡಳಿ ತೀರ್ಮಾನಕ್ಕೆ ಬರಲಿದೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡರು ಸಭೆ ಕರೆದಿದ್ದಾರೆ ಎಂದರು.

ನಾನು ಮಂಡಳಿ ಅಧ್ಯಕ್ಷೆಯಾಗಿದ್ದಾಗ ವಿಶಾಖ ಜಡ್ಜ್ ಮೆಂಟ್‌ನ ಘಟಕವನ್ನು ಎಲ್ಲಾ ಕಡೆ ತೆರೆಯುವಂತೆ ಒತ್ತಾಯಿಸಿದ್ದೆ. ಇದರಿಂದ ಇಂಥ ಘಟನೆಗಳು ನಡೆದರೆ, ಹೆಣ್ಣಿಗೆ ತನ್ನ ನೋವನ್ನು ಹೇಳಿಕೊಳ್ಳಲು ತಕ್ಷಣವೇ ವೇದಿಕೆ ಸಿಕ್ಕಿ, ಅದು ಶೀಘ್ರವೇ ಇತ್ಯರ್ಥಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಈ ಘಟನೆಯಿಂದ ಕನ್ನಡ ಚಿತ್ರರಂಗ ಇಬ್ಭಾಗವಾಗುವ ಸಾದ್ಯತೆ ಇದೆಯೇ ಎಂದು ಪ್ರಶ್ನಿಸಿದಾಗ, ಮೀಟೂ ಚಿತ್ರರಂಗವನ್ನು ಇಬ್ಬಾಗ ಮಾಡಲು ಸಾಧ್ಯವಿಲ್ಲ. ಸ್ಯಾಂಡಲ್‌ವುಡ್‌ಗೆ 85 ವರ್ಷಗಳ ಇತಿಹಾಸ ಇದೆ. ಈ ಘಟನೆಯಿಂದ ಚಿತ್ರರಂಗಕ್ಕೆ ಏನೂ ಆಗುವುದಿಲ್ಲ. ನಾಳೆಯ ದಿನ ಈಗ ಪರಸ್ಪರ ದೂರಿ ಕೊಂಡವರೂ ಒಟ್ಟಿಗೆ ಅಭಿನಯಿಸಿದರೂ ಆಶ್ಚರ್ಯವಿಲ್ಲ ಎಂದು ಜಯಮಾಲ ನುಡಿದರು.

ಮರಳು ಕಾಲಾವಕಾಶ ಬೇಕು: ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನಡೆದಿರುವ ಪ್ರತಿಭಟನೆಯ ಕುರಿತಂತೆ ಪ್ರಶ್ನಿಸಿದಾಗ, ಮರಳು ತೆಗೆಯಲು ಪರವಾನಿಗೆಯನ್ನು ಎಲ್ಲರಿಗೂ ಒಟ್ಟಿಗೆ ಅನುಮತಿ ನೀಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಯವರು ಸಂಬಂಧಿತ ರನ್ನು ಕರೆದು ಮಾತನಾಡಿ ಅವರನ್ನು ಒಪ್ಪಿಸಿದ್ದಾರೆ. ಅವರು ಕಾಲಾವಕಾಶ ನೀಡಿದ್ದಾರೆ ಎಂದರು.

ಈ ಬಗ್ಗೆ ಇರುವ ಕಾನೂನಾತ್ಮಕ ತೊಂದರೆಯ ಬಗ್ಗೆಯೂ ನಾವು ಅರಿತುಕೊಳ್ಳಬೇಕು. ಜನರಿಗೆ ಮರಳು ಸಿಗುವುದು ಹಾಗೂ ಕೊಡುವುದು ನಮ್ಮ ಆದ್ಯ ಕರ್ತವ್ಯ. ಸಮಸ್ಯೆ ಪರಿಹಾರಕ್ಕೆ ಎಲ್ಲರೂ ಸಹಕರಿಸಬೇಕಾಗುತ್ತದೆ. ಇದು ಒಬ್ಬರಿಂದ ಇತ್ಯರ್ಥಗೊಳ್ಳುವ ಸಮಸ್ಯೆ ಅಲ್ಲ. ಸಿಆರ್‌ಝಡ್‌ನಲ್ಲಿ 68 ಜನಕ್ಕೆ ಪರವಾನಿಗೆ ನೀಡುವುದು ಸಾಲುವುದಿಲ್ಲ ಅಂತಾರೆ. ಪ್ರತಿಯೊಬ್ಬರಿಗೂ ಕೊಡಲು ಸಮಯ ಬೇಕಾಗುತ್ತದೆ. ಇದಕ್ಕೆ ಎಲ್ಲರೂ ಸಹಕರಿಸಬೇಕಾಗುತ್ತದೆ. ಅವರೇ ಟೆಂಡರ್ ಕರೆಯುವವರೆಗೂ ಕಾಯುತ್ತೇವೆ ಎನ್ನುತಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X