Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2017ನೇ ಸಾಲಿನ ರಾಜ್ಯ ಚಲನಚಿತ್ರ...

2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ25 Oct 2018 9:56 PM IST
share
2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಬೆಂಗಳೂರು, ಅ. 25: 2017ರ ಕ್ಯಾಲೆಂಡರ್ ವರ್ಷದ ‘ಶುದ್ಧಿ, ಮಾರ್ಚ್-22 ಹಾಗೂ ಪಡ್ಡಾಯಿ’(ತುಳು) ಚಿತ್ರಗಳನ್ನು ಕ್ರಮವಾಗಿ ಪ್ರಥಮ, ದ್ವೀತಿಯ, ತೃತೀಯ ಅತ್ಯುತ್ತಮ ಚಿತ್ರ ಹಾಗೂ ‘ಹೆಬ್ಬೆಟ್ ರಾಮಕ್ಕ’ ವಿಶೇಷ ಸಾಮಾಜಿಕ ಕಾಳಜಿ ಬೀರುವ ಚಲನಚಿತ್ರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರು, ಸದಸ್ಯರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜನಪ್ರಿಯ ಮನರಂಜನಾ ಚಿತ್ರ-‘ರಾಜಕುಮಾರ’, ಅತ್ಯುತ್ತಮ ಮಕ್ಕಳ ಚಿತ್ರ-‘ಎಳೆಯರು ನಾವು ಗೆಳೆಯರು’, ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ-‘ಅಯನ’ ಹಾಗೂ ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ ‘ಸೋಫಿಯಾ’ (ಕೊಂಕಣಿ) ಚಿತ್ರ ಆಯ್ಕೆಯಾಗಿದೆ ಎಂದರು.

ಮೊದಲನೆ ಅತ್ಯುತ್ತಮ ಚಿತ್ರ-ಶುದ್ಧಿ ನಿರ್ಮಾಪಕ, ನಿರ್ದೇಶಕರಿಗೆ ತಲಾ 1ಲಕ್ಷ ರೂ.ನಗದು, 50 ಗ್ರಾಂ ಚಿನ್ನದ ಪದಕ, ಎರಡನೆ ಅತ್ಯುತ್ತಮ ಚಿತ್ರ-ಮಾರ್ಚ್ 22 ನಿರ್ಮಾಪಕ ಮತ್ತು ನಿರ್ದೇಶಕರಿಗೆ 75 ಸಾವಿರ ರೂ.ನಗದು 100 ಗ್ರಾಂ ಬೆಳ್ಳಿ ಪದಕ, ಮೂರನೆ ಅತ್ಯುತ್ತಮ ಚಿತ್ರ ಪಡ್ಡಾಯಿ ನಿರ್ಮಾಪಕ ಮತ್ತು ನಿರ್ದೇಶಕರಿಗೆ ತಲಾ 50ಸಾವಿರ ರೂ.ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು ಎಂದು ಚಲನಚಿತ್ರ ಆಯ್ಕೆ ಸಮಿತಿ ಅಧ್ಯಕ್ಷ ಎನ್.ಎಸ್.ಶಂಕರ್ ತಿಳಿಸಿದರು.

ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ-ಹೆಬ್ಬೆಟ್ ರಾಮಕ್ಕ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕರಿಗೆ ತಲಾ 75 ಸಾವಿರ ರೂ.ನಗದು, 100 ಗ್ರಾಂ ಬೆಳ್ಳಿ ಪದಕ, ಅತ್ಯಂತ ಜನಪ್ರಿಯ ಮನರಂಜನಾ ಚಿತ್ರ ರಾಜಕುಮಾರ ಚಿತ್ರದ ನಿರ್ಮಾಪಕ, ನಿರ್ದೇಶಕರಿಗೆ ತಲಾ 50 ಸಾವಿರ ರೂ.ನಗದು, 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು ಎಂದು ಅವರು ಹೇಳಿದರು.

ಅತ್ಯುತ್ತಮ ಮಕ್ಕಳ ಚಿತ್ರ-‘ಎಳೆಯರು ನಾವು ಗೆಳೆಯರು’ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರಿಗೆ ತಲಾ 50 ಸಾವಿರ ರೂ.ನಗದು, 100 ಗ್ರಾಂ ಬೆಳ್ಳಿ ಪದಕ, ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ-‘ಅಯನ’ ಹಾಗೂ ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ ‘ಸೋಫಿಯಾ’ (ಕೊಂಕಣಿ) ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರಿಗೆ ತಲಾ 50 ಸಾವಿರ ರೂ.ನಗದು, 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು ಎಂದು ಶಂಕರ್ ಮಾಹಿತಿ ನೀಡಿದರು.

ಅತ್ಯುತ್ತಮ ನಟ-ವಿಶೃತ್ ನಾಯರ್ (ಚಿತ್ರ: ಮಂಜರಿ) ಹಾಗೂ ಅತ್ಯುತ್ತಮ ನಟಿ-ತಾರಾ ಅನುರಾಧ(ಹೆಬ್ಬೆಟ್ ರಾಮಕ್ಕ), ಅತ್ಯುತ್ತಮ ಪೋಷಕ ನಟ- ಮಂಜುನಾಥ ಹೆಗಡೆ(ಲಕ್ಷ್ಮಿ ನಾರಾಯಣರ ಪ್ರಪಂಚಾನೆ ಬೇರೆ), ಅತ್ಯುತ್ತಮ ಪೋಷಕ ನಟಿ-ರೇಖಾ(ಮೂಕ ನಾಯಕ) ತಲಾ 20 ಸಾವಿರ ರೂ.ನಗದು, 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು ಎಂದು ಅವರು ಹೇಳಿದರು.

ಅತ್ಯುತ್ತಮ ಕಥೆ-ಹನುಮಂತ ಹಾಲಿಗೇರಿ(ಕೆಂಗುಲಾಬಿ), ಅಮರೇಶ ನುಗಡೋಣಿ (ನೀರು ತಂದವರು) ತಲಾ 10 ಸಾವಿರ ರೂ.ನಗದು, 50 ಗ್ರಾಂ ಬೆಳ್ಳಿ ಪದಕ, ಅತ್ಯುತ್ತಮ ಚಿತ್ರಕಥೆ-ವೆಂಕಟ್ ಭಾರದ್ವಾಜ್(ಕೆಂಪಿರ್ವೆ), ಅತ್ಯುತ್ತಮ ಸಂಭಾಷಣೆ- ಪ್ರೊ.ಎಸ್.ಜಿ.ಸಿದ್ದರಾಮಯ್ಯ(ಹೆಬ್ಬೆಟ್ ರಾಮಕ್ಕ), ಅತ್ಯುತ್ತಮ ಛಾಯಾಗ್ರಹಣ- ಸಂತೋಷ್ ರೈ ಪಾತಾಜೆ, ಅತ್ಯುತ್ತಮ ಸಂಗೀತ ನಿರ್ದೇಶನ-ಹರಿಕೃಷ್ಣ (ರಾಜಕುಮಾರ), ಅತ್ಯುತ್ತಮ ಸಂಕಲನ-ಹರೀಶ್ ಕೊಮ್ಮೆ(ಮಫ್ತಿ), ಅತ್ಯುತ್ತಮ ಬಾಲನಟ-ಮಾಸ್ಟರ್ ಕಾರ್ತಿಕ್(ರಾಮರಾಜ್ಯ), ಅತ್ಯುತ್ತಮ ಬಾಲನಟಿ-ಶ್ಲಘ ಸಾಲಿಗ್ರಾಮ(ಕಟಕ) ಎಂದು ಶಂಕರ್ ವಿವರಿಸಿದರು.

ಅತ್ಯುತ್ತಮ ಕಲಾ ನಿರ್ದೇಶನ-ಎಸ್.ಎ.ರವಿ(ಹೆಬ್ಬುಲಿ), ಅತ್ಯುತ್ತಮ ಗೀತರಚನೆ- ಜೆ.ಎಂ. ಪ್ರಹ್ಲಾದ್(ಮುತ್ತುರತ್ನದ ಪ್ಯಾಟೆ), ಅತ್ಯುತ್ತಮ ಹಿನ್ನಲೆ ಗಾಯಕ-ತೇಜಸ್ವಿ ಹರಿದಾಸ್(ವಲಸೆ ಬಂದವರೆ), ಅತ್ಯುತ್ತಮ ಹಿನ್ನಲೆ ಗಾಯಕಿ-ಅಪೂರ್ವ ಶ್ರೀಧರ್ (ಅಸಾದುಲ್ಲಾ ದಾಟಿಬಿಟ್ಟ), ಅತ್ಯುತ್ತಮ ನಿರ್ಮಾಣ ನಿರ್ವಾಹಕ-ಸುರೇಶ್ ಕೆ.(ಹೆಬ್ಬುಲಿ) ತಲಾ 20 ಸಾವಿರ ರೂ.ನಗದು, 100 ಗ್ರಾಂ ಬೆಳ್ಳಿ ಪದಕ. ತೀರ್ಪುಗಾರರ ವಿಶೇಷ ಪ್ರಶಸ್ತಿ-ಶ್ರೀದರ್ಶನ್(ಮಹಕಾವ್ಯ ಮಿತ್ರ), ಮಿತ್ರ-ಚಿತ್ರ: ರಾಗ ತಲಾ 10 ಸಾವಿರ ರೂ.ನಗದು, 50 ಗ್ರಾಂ ಬೆಳ್ಳಿ ಪದಕ ಎಂದು ಅವರು ಹೇಳಿದರು.

ಸಾಹಿತ್ಯ ವಾರ್ಷಿಕ ಪ್ರಶಸ್ತಿ: ಗಂಗಾಧರ್ ಮೊದಲಿಯಾರ್ ಬರೆದಿರುವ ‘ಸಿನಿಮಾ ಸಮಯ’ ಪುಸ್ತಕವನ್ನು 2017ನೆ ಕ್ಯಾಲೆಂಡರ್ ವರ್ಷದ ಸಾಹಿತ್ಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಲೇಖಕರಿಗೆ ಹಾಗೂ ಈ ಪುಸ್ತಕದ ಪ್ರಕಾಶರಾಗಿರುವ ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನದ ಪ್ರಕಾಶಕರಿಗೆ ತಲಾ 20 ಸಾವಿರ ರೂ.ನಗದು ಬಹುಮಾನ, 50 ಗ್ರಾಂ ಬೆಳ್ಳಿ ಪದಕ ನೀಡಲು ನಿರ್ಧರಿಸಲಾಗಿದೆ ಎಂದು ಶಂಕರ್ ತಿಳಿಸಿದರು.

ರಾಜ್ಯ ಚಲನಚಿತ್ರ ಪ್ರಶಸ್ತಿಗಳಲ್ಲಿ ನಿರ್ಮಾಣ ನಿರ್ವಾಹಕ ಪ್ರಶಸ್ತಿಯನ್ನು ಆರಂಭಿಸಬೇಕು. ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಸೇರಿದಂತೆ ಇನ್ನಿತರ ಪ್ರಶಸ್ತಿಗಳ ಆಯ್ಕೆಗಾಗಿ ಪ್ರತ್ಯೇಕ ಆಯ್ಕೆ ಸಮಿತಿ ಇರುತ್ತದೆ. ನಿರ್ಮಾಣ ನಿರ್ವಾಹಕ ಪ್ರಶಸ್ತಿಯನ್ನು ಅದೇ ಸಮಿತಿಯವರು ಆಯ್ಕೆ ಮಾಡಬೇಕು. ಅಲ್ಲದೆ, ಫಿಲಂಫೇರ್ ಸೇರಿದಂತೆ ಇನ್ನಿತರ ಪ್ರಶಸ್ತಿಗಳಲ್ಲಿ ಇರುವಂತೆ ನವ ಹಾಗೂ ನಟಿ ಪ್ರಶಸ್ತಿಗಳನ್ನು ರಾಜ್ಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಆರಂಭಿಸಬೇಕು ಎಂದು ಸರಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ.

-ಎನ್.ಎಸ್.ಶಂಕರ್, ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X