Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವಧರ್ ಟ್ರೋಫಿ: ಭಾರತ ‘ಸಿ’ ಫೈನಲ್ ಗೆ...

ದೇವಧರ್ ಟ್ರೋಫಿ: ಭಾರತ ‘ಸಿ’ ಫೈನಲ್ ಗೆ ಪ್ರವೇಶ

ಶುಭ್‌ಮನ್ ಗಿಲ್ ಅಜೇಯ ಶತಕ

ವಾರ್ತಾಭಾರತಿವಾರ್ತಾಭಾರತಿ25 Oct 2018 11:44 PM IST
share
ದೇವಧರ್ ಟ್ರೋಫಿ:  ಭಾರತ ‘ಸಿ’ ಫೈನಲ್ ಗೆ ಪ್ರವೇಶ

ಹೊಸದಿಲ್ಲಿ, ಅ.25: ಸಮಯೋಚಿತ ಶತಕ ಸಿಡಿಸಿದ ಶುಭ್‌ಮನ್ ಗಿಲ್ ಸಹಾಯದಿಂದ ಭಾರತ ‘ಸಿ’ ತಂಡ ಭಾರತ ‘ಎ’ ತಂಡದ ವಿರುದ್ಧ ಆರು ವಿಕೆಟ್‌ಗಳ ಅಂತರದಿಂದ ಸುಲಭ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ದೇವಧರ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಪ್ರಶಸ್ತಿ ಸುತ್ತಿಗೆ ಪ್ರವೇಶ ಪಡೆದಿದೆ.

ಇಲ್ಲಿ ಗುರುವಾರ ನಡೆದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಮೂವರು ಆಯ್ಕೆಗಾರರ ಎದುರಿನಲ್ಲೇ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸಿದ ಅಂಡರ್-19 ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಗಿಲ್ 111 ಎಸೆತಗಳಲ್ಲಿ ಔಟಾಗದೆ 106 ರನ್(8 ಬೌಂಡರಿ,3 ಸಿಕ್ಸರ್)ಗಳಿಸಿದರು. ಈಗಾಗಲೇ ಟೀಮ್ ಇಂಡಿಯಾ ಪ್ರವೇಶಿಸಿರುವ ಅಂಡರ್-19 ನಾಯಕ ಪೃಥ್ವಿ ಶಾ ಹೆಜ್ಜೆ ಯನ್ನು ಹಿಂಬಾಲಿಸಿದರು.

ಗೆಲ್ಲಲು 294 ರನ್ ಗುರಿ ಪಡೆದಿದ್ದ ಭಾರತ ‘ಸಿ’ ತಂಡ 85 ರನ್‌ಗೆ ಮೊದಲ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆಗ ಇಶಾನ್ ಕಿಶನ್(69,60 ಎಸೆತ) ಹಾಗೂ ಸೂರ್ಯಕುಮಾರ್ ಯಾದವ್(ಔಟಾಗದೆ 56,36 ಎಸೆತ)ಬೆಂಬಲದೊಂದಿಗೆ ಇನಿಂಗ್ಸ್ ಆಧರಿಸಿದ ಗಿಲ್ ಭಾರತ ‘ಸಿ’ ತಂಡ 47 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿ ಗೆಲುವಿನ ದಡ ಸೇರಲು ನೆರವಾದರು.

   ಭಾರತ ‘ಸಿ’ ನಾಯಕ ಅಜಿಂಕ್ಯ ರಹಾನೆ(14,25 ಎಸೆತ) ಹಾಗೂ ಅಭಿಮನ್ಯು ಮಿಥುನ್(37,40 ಎಸೆತ)ನಿಧಾನಗತಿಯ ಆರಂಭ ನೀಡಿದರು. ಕಿಶನ್‌ರೊಂದಿಗೆ 4ನೇ ವಿಕೆಟ್‌ಗೆ 121 ರನ್ ಜೊತೆಯಾಟ ಹಾಗೂ ಯಾದವ್‌ರೊಂದಿಗೆ 5ನೇ ವಿಕೆಟ್‌ಗೆ ಅಜೇಯ 90 ರನ್ ಜೊತೆಯಾಟ ನಡೆಸಿದ ಗಿಲ್ ಭಾರತ ‘ಸಿ’ ತಂಡಕ್ಕೆ 18 ಎಸೆತಗಳು ಬಾಕಿ ಇರುವಾಗಲೇ ಗೆಲುವು ತಂದರು.

 ಭಾರತ ‘ಸಿ’ ತಂಡ ಶನಿವಾರ ದಿಲ್ಲಿಯಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಇಂಡಿಯಾ ‘ಬಿ’ ತಂಡವನ್ನು ಎದುರಿಸಲಿದೆ.

► ಭಾರತ ‘ಎ’ 293/6: ಇದಕ್ಕೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ‘ಎ’ ತಂಡ ಅಗ್ರ ಕ್ರಮಾಂಕದ ಮೂವರು ಆಟಗಾರರಾದ ಅಭಿಮನ್ಯು ಈಶ್ವರನ್(69,103 ಎಸೆತ), ಅಮೋಲ್‌ಪ್ರೀತ್ ಸಿಂಗ್(59,56 ಎಸೆತ) ಹಾಗೂ ನಿತೀಶ್ ರಾಣಾ(68,76 ಎಸೆತ) ಅರ್ಧಶತಕಗಳ ಕೊಡುಗೆ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 293 ರನ್ ಗಳಿಸಿತು. ಆಲ್‌ರೌಂಡರ್ ಕೇದಾರ್ ಜಾಧವ್ ಡೆತ್ ಓವರ್‌ನಲ್ಲಿ 25 ಎಸೆತಗಳಲ್ಲಿ ಔಟಾಗದೆ 41 ರನ್ ಗಳಿಸಿ ತಂಡದ ಮೊತ್ತವನ್ನು 293ಕ್ಕೆ ತಲುಪಿಸಿದರು.

ಈಶ್ವರನ್ ಹಾಗೂ ಸಿಂಗ್ ಮೊದಲ ವಿಕೆಟ್‌ಗೆ 99 ರನ್ ಜೊತೆಯಾಟ ನಡೆಸಿ ಭಾರತ ‘ಎ’ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಸಿಂಗ್ ಔಟಾದ ಬಳಿಕ ನಿತೀಶ್ ರಾಣಾ ಅವರೊಂದಿಗೆ ಜೊತೆಯಾದ ಈಶ್ವರನ್ 2ನೇ ವಿಕೆಟ್‌ಗೆ 76 ರನ್ ಸೇರಿಸಿದರು. ದಿಲ್ಲಿ ಮೂಲದ ರಾಣಾ ಕೋಟ್ಲಾ ಸ್ಟೇಡಿಯಂ ಪಿಚ್‌ನ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದ್ದು ಅವರು 76 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್‌ಗಳ ಸಹಿತ 68 ರನ್ ಗಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X