Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಮ್ಮಚ್ಚಿ ಯೆಂಬ ನೆನಪು, ಜೀವನ ಯಜ್ಞ...

ಅಮ್ಮಚ್ಚಿ ಯೆಂಬ ನೆನಪು, ಜೀವನ ಯಜ್ಞ ತೆರೆಗೆ ಸಿದ್ಧ

ವಾರ್ತಾಭಾರತಿವಾರ್ತಾಭಾರತಿ28 Oct 2018 5:05 PM IST
share
ಅಮ್ಮಚ್ಚಿ ಯೆಂಬ ನೆನಪು, ಜೀವನ ಯಜ್ಞ ತೆರೆಗೆ ಸಿದ್ಧ

ಕರಾವಳಿ ಮೂಲದ ಎರಡು ಹೊಸ ಕನ್ನಡ ಚಿತ್ರಗಳು ತೆರೆಗೆ ಬರಲು ಸಜ್ಜಾಗಿವೆ. ಏಪ್ರಾನ್ ಸಂಸ್ಥೆಯ ‘ಅಮ್ಮಚ್ಚಿಯೆಂಬ ನೆನಪು’ ಹಾಗೂ ಕೆ.ಆರ್.ಎಸ್.ಕುಡ್ಲ ಕಂಬೈನ್ಸ್ ಅವರ - ‘ಜೀವನ ಯಜ್ಞ’ ಚಿತ್ರಗಳು ನವೆಂಬರ್‌ನಲ್ಲಿ ತೆರೆ ಕಾಣಲಿವೆ. ಖ್ಯಾತ ಲೇಖಕಿ ಡಾ.ವೈದೇಹಿ ಅವರ ಅಮ್ಮಚ್ಚಿಯೆಂಬ ನೆನಪು, ಅಕ್ಕು ಮತ್ತು ಪುಟ್ಟಮ್ಮತ್ತೆ ಮತ್ತು ಮೊಮ್ಮಗಳು- ಮೂರು ಕಥೆಗಳ ಆಧಾರಿತ ಚಿತ್ರ ‘ಅಮ್ಮಚ್ಚಿಯೆಂಬ ನೆನಪು’ ಹೆಸರಿನಲ್ಲಿ ನಿರ್ಮಾಣಗೊಂಡಿದ್ದು, ನ.1 ರಂದು ರಾಜ್ಯದಾದ್ಯಂತ ಬಿಡುಗಡೆ ಯಾಗಲಿದೆ. ಶೇ.99 ರಂಗಭೂಮಿಯ ಕಲಾವಿದರೇ ಇರುವ ಈ ಚಿತ್ರವನ್ನು ಚಂಪಾ ಪಿ.ಶೆಟ್ಟಿ ನಿರ್ದೇಶಿಸಿದ್ದಾರೆ. ಕುಂದಾಪುರ ಕನ್ನಡದ ಪ್ರಾದೇಶಿಕ ಭಾಷಾ ಸೊಗಡಿನ ಚಿತ್ರದ ಪೂರ್ಣ ಸಂಭಾಷಣೆಯನ್ನು ಸ್ವತಃ ವೈದೇಹಿಯವರೇ ಬರೆದಿದ್ದಾರೆ. ‘ಒಂದು ಮೊಟ್ಟೆಯ ಕಥೆ’ ಖ್ಯಾತಿಯ ರಾಜ್ ಬಿ.ಶೆಟ್ಟಿ ಈ ಚಿತ್ರದಲ್ಲಿ ವಿಭಿನ್ನ ಪಾತ್ರವನ್ನು ನಿರ್ವಹಿಸಿದ್ದಾರೆ. ಹಿಂದೂಸ್ಥಾನಿ ಗುರು ಪಂ.ಕಾಶಿನಾಥ್ ಪತ್ತಾರ್ ಸಂಗೀತ ನಿರ್ದೇಶನವಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೇಖಕಿ ವೈದೇಹಿ, ತನ್ನ ಮೂರು ಕತೆಗಳನ್ನು ಜೋಡಿಸಿ ‘ಅಕ್ಕು’ ಹೆಸರಿನಲ್ಲಿ ನಾಟಕ ಪ್ರಸ್ತುತಪಡಿಸಿ ಯಶಸ್ವಿಯಾದ ತಂಡವೇ ಇದನ್ನು ಚಲನಚಿತ್ರ ರೂಪಕ್ಕೆ ಪರಿಣಾಮಕಾರಿ ರೀತಿಯಲ್ಲಿ ರೂಪಾಂತರಿಸಿದೆ. ಕತೆಯ ಮೂಲ ಆಶಯಕ್ಕೆ ಧಕ್ಕೆ ತರದ ರೀತಿಯಲ್ಲಿ ಚಿತ್ರ ನಿರ್ಮಾಣಗೊಂಡಿದೆ ಎಂದು ತೃಪ್ತಿ ವ್ಯಕ್ತಪಡಿಸಿದರು.

ನಿರ್ದೇಶಕಿ ಚಂಪಾ ಪಿ.ಶೆಟ್ಟಿ ಮಾತನಾಡಿ, ಎಪ್ಪತ್ತರ ದಶಕದ ಸಾಮಾಜಿಕ ಘಟನೆಯ ಹಿನ್ನೆಲೆ, ಸ್ತ್ರೀ ಸ್ವಾತಂತ್ರ ಹಾಗೂ ಸೂಕ್ಷ್ಮ ಸಂವೇದನೆ ಯನ್ನು ಚಿತ್ರ ಒಳಗೊಂಡಿದೆ ಎಂದು ಹೇಳಿದರು. ಕಲಾವಿದರಾದ ರಾಜ್ ಬಿ.ಶೆಟ್ಟಿ, ಚಂದ್ರಹಾಸ ಉಳ್ಳಾಲ್, ವೈಜಯಂತಿ ಅಡಿಗ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನ.2ರಂದು ಜೀವನ ಯಜ್ಞ ಬಿಡುಗಡೆ

‘ಜೀವನ ಯಜ್ಞ’ ನ.2 ರಂದು ರಾಜ್ಯದ 100ಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ಏಕ ಕಾಲದಲ್ಲಿ ಬಿಡುಗಡೆಯಾಗಲಿದೆ. ಶಿವು ಸರಳೇಬೆಟ್ಟು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಕಿರಣ್ ರೈ, ಇದೊಂದು ನಾಲ್ಕು ಅನಾಥ ಮಕ್ಕಳ ಕತೆ. ಶಿಕ್ಷಣ, ಧರ್ಮ, ಜೀವನ ಪದ್ಧತಿ, ಆರ್ಥಿಕ ಪರಿಸ್ಥಿತಿ ಮತ್ತು ಸಮಾಜ ಇವರ ಮೇಲೆ ಯಾವ ರೀತಿ ಪ್ರಭಾವ ಬೀರುತ್ತದೆ ಎನ್ನುವುದನ್ನು ಕತೆ ಸಾರುತ್ತದೆ. ರಮೇಶ್ ಭಟ್, ಬಿ.ಜಯಶ್ರೀ, ಮನೋಜ್ ಪುತ್ತೂರು, ಶೈನ್ ಶೆಟ್ಟಿ, ಆದ್ಯಾ ಆರಾಧನ್, ಸಂದೀಪ್‌ಶೆಟ್ಟಿ ಮಾಣಿಬೆಟ್ಟು, ವಸಂತ ಮುನಿಯಾಲ್, ಎಂ.ಕೆ.ಮಠ, ಸೌಜನ್ಯಾ ಹೆಗ್ಡೆ ಮುಂತಾದವರು ತಾರಾಗಣದಲ್ಲಿದ್ದಾರೆ ಎಂದರು. ನಿರ್ಮಾಪಕ ರಂಜನ್ ಶೆಟ್ಟಿ, ಕಾರ್ಯಕಾರಿ ನಿರ್ದೇಶಕ ವಿಕಾಸ್, ಸಂಗೀತ ನಿರ್ದೇಶಕ ಆಶ್ಲೇ ಮೈಕಲ್, ಅನ್ವಿತಾ ಸಾಗರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X