Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಬ್ರಾಹ್ಮಣ ಭಕ್ತನಾದರೇನಯ್ಯಾ?

ಬ್ರಾಹ್ಮಣ ಭಕ್ತನಾದರೇನಯ್ಯಾ?

ರಂಜಾನ್ ದರ್ಗಾರಂಜಾನ್ ದರ್ಗಾ30 Oct 2018 12:13 AM IST
share
ಬ್ರಾಹ್ಮಣ ಭಕ್ತನಾದರೇನಯ್ಯಾ?

ಬ್ರಾಹ್ಮಣ ಭಕ್ತನಾದರೇನಯ್ಯಾ? ಸೂತಕಪಾತಕಂಗಳ ಬಿಡ.

ಕ್ಷತ್ರಿಯ ಭಕ್ತನಾದರೇನಯ್ಯಿ? ಕ್ರೋಧವ ಬಿಡ.

ವೈಶ್ಯ ಭಕ್ತರಾದರೇನಯ್ಯ? ಕಪಟವ ಬಿಡ.

ಶೂದ್ರ ಭಕ್ತನಾದರೇನಯ್ಯ? ಸ್ವಜಾತಿಯೆಂಬುದ ಬಿಡ.

ಇಂತೀ ಜಾತಿಡಂಭಕರ ಮೆಚ್ಚುವನೆ ಕೂಡಲಚೆನ್ನಸಂಗಮದೇವ?

                                     -ಚೆನ್ನಬಸವಣ್ಣ

12ನೇ ಶತಮಾನದಲ್ಲಿ ಬಸವಣ್ಣನವರು ಶರಣರ ಜೊತೆಗೂಡಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿದರು. ಇದು ದುಡಿಯುವ ಜನರ ಮೊದಲ ಧರ್ಮವಾಯಿತು. ಇವರ ಸಮಾಜಕ್ಕೆ ಶರಣಸಂಕುಲ ಎಂದು ಕರೆಯಲಾಯಿತು. ಇದೊಂದು ಕ್ರಾಂತಿಕಾರಕ ಧರ್ಮವಾಗಿದ್ದು ಎಲ್ಲ ಜಾತಿ ಜನಾಂಗದವರು ಈ ಧರ್ಮವನ್ನು ಸ್ವೀಕಾರ ಮಾಡುವುದರ ಮೂಲಕ ಜಾತಿಸಂಕರಗೊಂಡು ಕೇವಲ ಲಿಂಗಾಯತರಾಗಿ ಸಮಾನತೆಯನ್ನು ಸಾಧಿಸುತ್ತಿದ್ದರು. ಇದೊಂದು ಸಮಾನತೆಯ ಹೊಸ ಧಾರ್ಮಿಕ ಮತ್ತು ಸಾಮಾಜಿಕ ಪ್ರಯೋಗವಾಗಿತ್ತು. ಆದರೆ ಕೆಲವರು ಈ ಹೊಸ ಧರ್ಮವನ್ನು ಸ್ವೀಕರಿಸಿದರೂ ತಮ್ಮ ಹಳೆಯ ಚಾಳಿಗೆ ಅಂಟಿಕೊಂಡಿದ್ದರು. ಲಿಂಗಾಯತ ಧರ್ಮದ ರೂಪುರೇಷೆಗಳನ್ನು ಎತ್ತಿತೋರಿಸಿದ ಚೆನ್ನಬಸವಣ್ಣನವರು ಈ ರೀತಿಯ ನಡವಳಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದ ನಂತರ ಬರೆದ ವಚನವಿದು.

ಈ ಹೊಸ ಧಾರ್ಮಿಕ ಚಳವಳಿ ಪ್ರವಾಹೋಪಾದಿಯಲ್ಲಿ ಬಂದಿತು. ಇದರಿಂದ ದೂರ ಉಳಿದವರು ಮುಜುಗರ ಪಡುವಂಥ ವಾತಾವರಣದ ನಿರ್ಮಾಣವಾಗಿತ್ತು. ಇಂಥ ಸಂದರ್ಭದಲ್ಲಿ ಅನೇಕರು ಲಿಂಗವಂತ ಧರ್ಮ ಸ್ವೀಕರಿಸಿದರು. ಆದರೆ ಅವರಲ್ಲಿ ಕೆಲವರು ತಮ್ಮ ಹಳೆಯ ಪದ್ಧತಿಯನ್ನೇ ಮುಂದುವರಿಸಿದರು. ಕೆಲ ಬ್ರಾಹ್ಮಣರು ವೈದಿಕ ವ್ಯವಸ್ಥೆಯಿಂದ ಹೊರಬಂದು ಲಿಂಗಾಯತ ಧರ್ಮ ಸ್ವೀಕರಿಸಿ ಭಕ್ತ ಎನಿಸಿಕೊಂಡರೂ ವೈದಿಕದ ಸೂತಕಪಾತಕಗಳನ್ನು ಉಳಿಸಿಕೊಂಡಿದ್ದರು. ಕ್ಷತ್ರಿಯರು ಈ ಹೊಸ ಧರ್ಮ ಪ್ರತಿಪಾದಿಸುವ ಶಾಂತ ಸ್ವಭಾವಕ್ಕೆ ವ್ಯತಿರಿಕ್ತವಾದ ಸಿಟ್ಟಿನ ಗುಣವನ್ನೇ ಹೊಂದಿದ್ದರು. ವೈಶ್ಯವರ್ಣದವರು ಭಕ್ತರಾದ ಮೇಲೂ ವ್ಯವಹಾರದಲ್ಲಿ ಮೋಸ ಮಾಡುವುದರಲ್ಲೇ ತೊಡಗುವುದರ ಮೂಲಕ ಲಿಂಗಾಯತ ಧರ್ಮದ ಪ್ರಾಮಾಣಿಕ ಬದುಕಿಗೆ ಒಗ್ಗಿಕೊಳ್ಳಲಿಲ್ಲ. ಶೂದ್ರರು ಲಿಂಗಾಯತ ಧರ್ಮವನ್ನು ಸ್ವೀಕರಿಸಿ ಶೂದ್ರತ್ವವನ್ನು ಕಳೆದು ಕೊಂಡು ಹೊಸ ವ್ಯಕ್ತಿತ್ವವನ್ನು ಪಡೆದರೂ ಸ್ವಜಾತಿ ಮೋಹದಿಂದ ಹೊರಬರಲಿಕ್ಕಾಗಲಿಲ್ಲ. ಎಲ್ಲ ಜಾತಿ ಮತ್ತು ವರ್ಣಗಳಲ್ಲಿಯ ಇಂಥ ಕೆಲವರು ವರ್ಣವ್ಯವಸ್ಥೆಗೆ ವಿರುದ್ಧವಾದ ಲಿಂಗಾಯತ ಧರ್ಮವನ್ನು ಸ್ವೀಕರಿಸಿದರೂ ಜಾತಿಡಂಭಕರಾಗೇ ಉಳಿದರು. ಇಂಥವರನ್ನು ದೇವರು ಮೆಚ್ಚುವುದಿಲ್ಲ ಎಂದು ಚೆನ್ನಬಸವಣ್ಣನವರು ಈ ವಚನದಲ್ಲಿ ತಿಳಿಸಿದ್ದಾರೆ.

ಇಂದು ಲಿಂಗಾಯತ ಧರ್ಮದಲ್ಲಿ ಇಂಥ ಜಾತಿಡಂಭಕರೇ ಹೆಚ್ಚಾಗಿದ್ದಾರೆ. ಅವರ ನಾಲಗೆ ಮೇಲೆ ಬಸವಣ್ಣ ಇದ್ದರೆ ಮೆದುಳಿನೊಳಗೆ ಮನು ಮನೆ ಮಾಡಿದ್ದಾನೆ. ಹೀಗಾಗಿ ಇಂದು ಲಿಂಗಾಯತ ಧರ್ಮದಲ್ಲಿ ನೂರೆಂಟು ಜಾತಿಗಳು ಉಳಿದುಕೊಂಡಿವೆ.

share
ರಂಜಾನ್ ದರ್ಗಾ
ರಂಜಾನ್ ದರ್ಗಾ
Next Story
X