Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ವಿಶ್ವಕಪ್: ಟೀಮ್ ಇಂಡಿಯಾದ ಬೇಡಿಕೆ...

ಐಸಿಸಿ ವಿಶ್ವಕಪ್: ಟೀಮ್ ಇಂಡಿಯಾದ ಬೇಡಿಕೆ ಪಟ್ಟಿಯಲ್ಲಿ ಬಾಳೆಹಣ್ಣು!

ವಾರ್ತಾಭಾರತಿವಾರ್ತಾಭಾರತಿ30 Oct 2018 6:52 PM IST
share
ಐಸಿಸಿ ವಿಶ್ವಕಪ್: ಟೀಮ್ ಇಂಡಿಯಾದ ಬೇಡಿಕೆ ಪಟ್ಟಿಯಲ್ಲಿ ಬಾಳೆಹಣ್ಣು!

 ಮುಂಬೈ, ಅ.30: ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯುವ ಐಸಿಸಿ ವಿಶ್ವಕಪ್‌ನಲ್ಲಿ ತಮಗೆ ರೈಲಿನ ಬೋಗಿಯೊಂದನ್ನು ಮೀಸಲಿಡಬೇಕು. ಪತ್ನಿಯಂದಿರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಅನುಮತಿ ನೀಡಬೇಕು ಹಾಗೂ ಡ್ರೆಸ್ಸಿಂಗ್ ಕೊಠಡಿಯಲ್ಲಿ ತಿನ್ನಲು ಸಾಕಷ್ಟು ಬಾಳೆಹಣ್ಣುಗಳನ್ನು ಒದಗಿಸಬೇಕು ಎಂಬ ಬೇಡಿಕೆಗಳ ಪಟ್ಟಿಯನ್ನು ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಸದಸ್ಯರು ಹೈದರಾಬಾದ್‌ನಲ್ಲಿ ನಡೆದ ಆಡಳಿತಾಧಿಕಾರಿಗಳ ಸಮಿತಿ(ಸಿಒಎ)ಯೊಂದಿಗೆ ಪರಾಮರ್ಶೆ ಸಭೆಯ ಮುಂದೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.

ಸೆ.11ರಂದು ಕೊನೆಗೊಂಡ ಇಂಗ್ಲೆಂಡ್ ಪ್ರವಾಸದ ವೇಳೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತಮ್ಮ ಆಯ್ಕೆಯ ಹಣ್ಣುಗಳನ್ನು ಪೂರೈಸಲು ವಿಫಲವಾಗಿದೆ ಎಂದು ಭಾರತದ ಆಟಗಾರರು ದೂರಿದ್ದಾರೆ.

 ಇದಕ್ಕೆ ಉತ್ತರಿಸಿದ ಸಮಿತಿಯು, ಆಟಗಾರರು ಇಂಗ್ಲೆಂಡ್‌ನಲ್ಲಿ ಬಿಸಿಸಿಐ ಖರ್ಚಿನಲ್ಲಿ ಬಾಳೆಹಣ್ಣನ್ನು ಖರೀದಿಸುವಂತೆ ಟೀಮ್ ಮ್ಯಾನೇಜರ್‌ಗೆ ಹೇಳಬೇಕಾಗಿತ್ತು ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ಸರಿಯಾದ ಜಿಮ್ ಇರುವ ಹೊಟೇಲ್‌ಗಳನ್ನು ಬುಕ್ ಮಾಡುವುದು. ಕ್ರಿಕೆಟ್ ಪ್ರವಾಸದ ವೇಳೆ ಕ್ರಿಕೆಟಿಗರು ಹಾಗೂ ಅವರ ಪತ್ನಿಯಂದಿರ ನಡುವೆ ಸಮಯದ ಶಿಷ್ಟಾಚಾರವೇನು ಎಂಬ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

 ಮುಂದಿನ ವರ್ಷದ ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನಲ್ಲಿ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡಬೇಕೆಂಬ ಬೇಡಿಕೆಯು ಸಮಿತಿಗೆ ಅಚ್ಚರಿ ತಂದಿದೆ. ಇದು ಭದ್ರತಾ ದೃಷ್ಟಿಯಿಂದ ಹುಬ್ಬೇರಿಸುವ ಬೇಡಿಕೆಯಾಗಿದೆ.

ರೈಲಿನಲ್ಲಿ ಪ್ರಯಾಣಿಸುವುದರಿಂದ ಸಮಯ ಉಳಿತಾಯವಾಗಲಿದೆ. ಇಂಗ್ಲೆಂಡ್ ಕ್ರಿಕೆಟ್ ತಂಡ ಕೂಡ ರೈಲಿನಲ್ಲಿ ಪ್ರಯಾಣಿಸುತ್ತದೆ ಎಂದು ಕೊಹ್ಲಿ ಸಭೆಗೆ ಮಾಹಿತಿ ನೀಡಿದ್ದರು. ಆದರೆ, ಭಾರತದ ಆಟಗಾರರನ್ನು ಕ್ರಿಕೆಟ್ ಅಭಿಮಾನಿಗಳು ಮುತ್ತಿಕೊಳ್ಳಬಹುದು. ಏನೇ ಅಹಿತಕರ ಘಟನೆ ನಡೆದರೆ, ಬಿಸಿಸಿಐ ಅಥವಾ ಸಿಒಎ ಜವಾಬ್ದಾರಿಯಲ್ಲ ಎಂಬ ಷರತ್ತಿನ ಮೇಲೆ ಭಾರತ ತಂಡ ಇಂಗ್ಲೆಂಡ್‌ನಲ್ಲಿ ರೈಲಿನಲ್ಲಿ ಪ್ರಯಾಣಿಸಬಹುದು ಎಂದು ಸಮಿತಿ ಹೇಳಿದ್ದಾಗಿ ತಿಳಿದುಬಂದಿದೆ.

ಮುಂದಿನ ತಿಂಗಳು ಆರಂಭವಾಗಲಿರುವ ಆಸ್ಟ್ರೇಲಿಯ ಪ್ರವಾಸಕ್ಕೆ ಆಟಗಾರರೊಂದಿಗೆ ಅವರ ಪತ್ನಿಯಂದಿರು ತೆರಳುವ ಬಗ್ಗೆ ಸಿಒಎ ಒಪ್ಪಿಗೆ ನೀಡಿದೆ. ಆದರೆ, ಅವರು ವಿದೇಶಕ್ಕೆ ತೆರಳಿದ ಬಳಿಕ ಅಧಿಕೃತ ಟೀಮ್ ಬಸ್‌ನಲ್ಲಿ ತೆರಳುವಂತಿಲ್ಲ. ಆಟಗಾರರ ಪತ್ನಿಯಂದಿರಿಗೆ ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗುವುದು ಎಂದು ಸಿಒಎ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X