Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರಳಿಗಾಗಿ ಧರಣಿ ಏಳನೆ ದಿನಕ್ಕೆ: 170...

ಮರಳಿಗಾಗಿ ಧರಣಿ ಏಳನೆ ದಿನಕ್ಕೆ: 170 ಮಂದಿಗೂ ಪರವಾನಿಗೆ ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 Oct 2018 10:26 PM IST
share
ಮರಳಿಗಾಗಿ ಧರಣಿ ಏಳನೆ ದಿನಕ್ಕೆ: 170 ಮಂದಿಗೂ ಪರವಾನಿಗೆ ನೀಡಲು ಆಗ್ರಹ

ಉಡುಪಿ, ಅ.30: ಉಡುಪಿ ಜಿಲ್ಲಾ ಮರಳು ಹೋರಾಟ ಸಮಿತಿಯ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮರಳುಗಾರಿಕೆ ಪ್ರಾರಂಭಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರವೂ ಮುಂದುವರಿದ ಆರನೆ ದಿನದ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿಯಲ್ಲಿ ಈಗಾಗಲೇ ಮರಳು ತೆಗೆ ಯಲು ಪರವಾನಗಿ ಹೊಂದಿರುವ 170 ಮಂದಿ ಜೊತೆ ಮಾಲೋಚನೆ ಸಭೆ ನಡೆಸಲಾಯಿತು.

ಎಲ್ಲ 170 ಪರವಾನಿಗೆದಾರರಿಗೆ ಮರಳು ತೆಗೆಯಲು ಅವಕಾಶ ನೀಡುವ ವರೆಗೆ ಧರಣಿಯನ್ನು ಹಿಂತೆಗೆಯಲ್ಲ ಎಂಬ ನಿರ್ಧಾರವನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಯಿತು. ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಮರಳು ತೆಗೆಯದಿರುವುದರಿಂದ ಅಭಿವೃದ್ಧಿ ಮಾತ್ರ ಕುಂಠಿತವಾಗುವುದಲ್ಲದೆ ಮುಂದಿನ ಮಳೆಗಾಲ ದಲ್ಲಿ ಕೃತಕ ನೆರೆ ಕೂಡ ಉಂಟಾಗಲಿದೆ. ಆದುದರಿಂದ ಜಿಲ್ಲೆಯನ್ನು ಅಧಿಕಾರಿಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಈ ಹೋರಾಟವನ್ನು ಇನ್ನಷ್ಟು  ತೀವ್ರಗೊಳಿ ಬೇಕಾಗಿದೆ ಎಂದರು.

ಆರನೆ ದಿನದ ಧರಣಿಯಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಮಾಜಿ ಜಿಪಂ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಮರಳಿಗಾಗಿ ಹೋರಾಟ ಸಮಿತಿಯ ಸಂಚಾಲಕ ಎಂ.ಜಿ.ನಾಗೇಂದ್ರ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಇಂಜಿನಿಯರ್ ಅಸೋಸಿಯೇಶನ್‌ನ ಗೋಪಾಲ ಭಟ್, ಗುರುರಾಜ್ ಭಟ್, ದೋಣಿ ಮಾಲಕರ ಸಂಘದ ಅಧ್ಯಕ್ಷ ಸುಧಾಕರ್ ಪೂಜಾರಿ ಮೊದಲಾದವರು ಉಪಸ್ಥಿರಿದ್ದರು.

ದೋಣಿ ಕಾರ್ಮಿಕರ ಸಭೆ:  ಧರಣಿಯಲ್ಲಿ ಹೊಗೆ ದೋಣಿ ಕಾರ್ಮಿಕ ಸಂಘದ ಸದಸ್ಯರ ಸಭೆಯನ್ನು ಪ್ರತ್ಯೇಕವಾಗಿ ನಡೆಸಲಾಯಿತು. ಇದರಲ್ಲಿ ಒಟ್ಟು 165 ಮರಳು ದಿಬ್ಬ ತೆರವುಗೊಳಿಸುವ ರವಾನಿಗೆದಾರರು ಭಾಗವಹಿಸಿದ್ದರು.

ಚೈನ್ನೈ ಹಸಿರು ಪೀಠದ ಆದೇಶ ಬಂದ ನಂತರ ಸರಕಾರ ಅಧಿಕಾರಿಗಳ ಮೂಲಕ ಪ್ರತಿಯೊಬ್ಬ ಪರವಾನಿಗೆದಾರನು ಸಾಂಪ್ರದಾಯಿಕ ಮರಳುಗಾರ ಎಂದು ದೃಢೀಕರಿಸಿ 2017-18ನೆ ಸಾಲಿನಲ್ಲಿ ಪರವಾನಿಗೆ ನೀಡಿದೆ. ಆದುದ ರಿಂದ ಸಾಂಪ್ರದಾಯಿಕ ಮರಳುಗಾರರಾದ 170 ಮಂದಿಗೂ ಏಕಕಾಲದಲ್ಲಿ ಮರಳು ತೆರವುಗೊಳಿಸುವ ಪರವಾನಿಗೆಯನ್ನು ನೀಡಬೇಕು ಎಂದು ಸರ್ವಾನು ಮತದ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

ಈ ನಿರ್ಣಯವನ್ನು ಅ.31ರಂದು ಜಿಲ್ಲಾಧಿಕಾರಿಗಳಿಗೆ ತಿಳಿಸುವ ಬಗ್ಗೆ ನಿರ್ಧ ರಿಸಲಾಯಿತು. ಅಲ್ಲದೆ ಮರಳುಗಾರಿಕೆಗೂ ತಕ್ಷಣ ಅನುಮತಿ ನೀಡಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು. ಈ ಸಭೆಯಲ್ಲಿ ಶಾಸಕ ರಘುಪತಿ ಭಟ್, ದೋಣಿ ಕಾರ್ಮಿಕರ ಸಂಘದ ಅಧ್ಯಕ್ಷ ಸುಧಾಕರ್ ಅಮೀನ್ ಹಾಗೂ ಇತ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಧರಣಿಯಲ್ಲಿ ಕಾಂಗ್ರೆಸ್ ಮುಖಂಡ ಭಾಗಿ

ರಘುಪತಿ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಈವರೆಗೆ ಯಾವುದೇ ಕಾಂಗ್ರೆಸ್ ಮುಖಂಡರು ಭಾಗವಹಿಸಿರಲಿಲ್ಲ. ಇಂದಿನ ಆರನೆ ದಿನದ ಧರಣಿಯಲ್ಲಿ ಅಚ್ಚರಿ ಎಂಬಂತೆ ಪಾಲ್ಗೊಂಡ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಪಂ ಅಧ್ಯಕ್ಷ ಭುಜಂಗ ಶೆಟ್ಟಿ ಹೋರಾಟವನ್ನು ಬೆಂಬಲಿಸಿ ಮಾತನಾಡಿದರು.

ಅಲ್ಲದೆ ಹಾರ್ಡ್‌ವೇರ್ ಸಂಘ, ಮಾರ್ಬಲ್ಸ್ ಸಂಘ, ಇಂಟರ್‌ಲಾಕ್ ಹಾಗೂ ವೆಲ್ಡಿಂಗ್ ಫ್ಯಾಬ್ರಿಕೇಟ್ ಸಂಘ, ಮೇಸ್ತ್ರಿ ಅಸೋಶಿಯೇಶನ್, ಪೈಂಟರ್ ಅಸೋಶಿಯೇಶನ್, ವಿದ್ಯುತ್ ಗುತ್ತಿಗೆದಾರರು ಹೋರಾಟದಲ್ಲಿ ಪಾಲ್ಗೊಂಡು ಸರಕಾರ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಕೂಡಲೇ ತಮ್ಮ ಪಟ್ಟನ್ನು ಸಡಿಲಿಸಿ ಜನತೆಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X