Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ರಂಗಭೂಮಿಯ ‘ಹೊಸದಿಕ್ಕು’

ರಂಗಭೂಮಿಯ ‘ಹೊಸದಿಕ್ಕು’

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ31 Oct 2018 12:09 AM IST
share
ರಂಗಭೂಮಿಯ ‘ಹೊಸದಿಕ್ಕು’

ಇತ್ತೀಚಿನ ದಿನಗಳಲ್ಲಿ ರಂಗಭೂಮಿಯ ಕುರಿತಂತೆ ಗಂಭೀರವಾಗಿ ಬರೆಯುವ ಬರಹಗಾರರು ಕಡಿಮೆಯಾಗುತ್ತಿದ್ದಾರೆ. ರಂಗಭೂಮಿಯಲ್ಲಿ ಪ್ರಯೋಗಗಳು ನಡೆಯುವುದೇ ಅತ್ಯಲ್ಪ ಎಂದ ಮೇಲೆ, ಈ ಕ್ಷೇತ್ರದ ಬಗ್ಗೆ ಬರೆಯುವವರ ಸಂಖ್ಯೆ ಕಡಿಮೆಯಾಗುವುದು ಸಹಜ. ಸದ್ಯಕ್ಕೆ ಇರುವ ರಂಗಭೂಮಿಯನ್ನು ಉಳಿಸಿಕೊಳ್ಳುವುದೇ ಮುಖ್ಯ ಎನ್ನುವ ನೆಲೆಯಲ್ಲಿ ಗಂಭೀರ ವಿಮರ್ಶೆಗಳು ಕಡಿಮೆಯಾಗುತ್ತಿರಬಹುದು. ಇದೇ ಸಂದರ್ಭದಲ್ಲಿ, ರಂಗಭೂಮಿಯ ಇತಿಹಾಸ ಮತ್ತು ಆಗಿ ಹೋದ ಪ್ರಮುಖರ ಬಗ್ಗೆ ತಿಳಿಸಿಕೊಡುವ ಪ್ರಯತ್ನವೂ ಕಡಿಮೆಯಾಗುತ್ತದೆ. ಹೊಸ ಪ್ರಯೋಗಗಳ ಕೊರತೆಗೆ ಇತಿಹಾಸದ ಕುರಿತ ಮಾಹಿತಿಯ ಕೊರತೆಯೂ ಕಾರಣವಾಗಿರಬಹುದು. ಈ ನಿಟ್ಟಿನಲ್ಲಿ ಎಸ್. ಮಾಲತಿ ಅವರು ಬರೆದಿರುವ ‘ಹೊಸ ದಿಕ್ಕು’ ರಂಗಭೂಮಿಯ ಕುರಿತ ಲೇಖನಗಳು ಒಂದು ಶ್ಲಾಘನೀಯ ಪ್ರಯತ್ನವಾಗಿದೆ. ರಂಗಭೂಮಿಗೆ ಹೊಸದಿಕ್ಕುಗಳನ್ನು ನೀಡಿದ ಚಳವಳಿ, ಪ್ರಯೋಗ, ನಿರ್ದೇಶಕ, ನಟರುಗಳ ಕುರಿತಂತೆ ಮಾಹಿತಿಗಳನ್ನು ಕಲೆಹಾಕಲಾಗಿದೆ.
 ಬೆನ್ನುಡಿ ಹೇಳುವಂತೆ, ರಂಗಭೂಮಿಯ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಉಪಯುಕ್ತವಾಗುವಂತಹ ಯಕ್ಷಗಾನ, ಯೋಗ, ಆಂಗಿಕ-ವಾಚಿಕ, ಬಿ.ವಿ. ಕಾರಂತ, ಹಬೀಬ್ ತನ್ವೀರ್, ಬಾದಲ್ ಸರ್ಕಾರ್, ಇಬ್ರಾಹಿಂ ಅಲ್ಕಾಜಿ, ಪಾಶ್ಚಾತ್ಯ ರಂಗಭೂಮಿಯ ಗ್ರೊಟೋವ್‌ಸ್ಕಿ, ಸ್ಟಾನಿಸ್ಲಾವ್‌ಸ್ಕಿ, ಬ್ರೆಕ್ಟ್, ಮೇಯರ್ ಹೋಲ್ಡ್, ಪೀಟರ್ ಬ್ರೂಕ್ ಮುಂತಾದ ಮಹಾನ್ ರಂಗತಜ್ಞರುಗಳ ಬಗ್ಗೆ ಮತ್ತು ಅವರು ನಡೆಸಿದ ಪ್ರಯೋಗಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಕುವೆಂಪು ಅವರ ನಾಟಕಗಳು, ಜಿ. ಪಿ. ರಾಜರತ್ನಂ ಅವರ ನಾಟಕಗಳು ಸೇರಿದಂತೆ ಹಲವು ಲೇಖಕರ ನಾಟಕ ಕೃತಿಗಳ ಬಗ್ಗೆಯೂ ಕೃತಿ ಮಾಹಿತಿಗಳನ್ನು ನೀಡುತ್ತದೆ. ಸ್ವತಃ ರಂಗಾಸಕ್ತರಾಗಿರುವ ಮಾಲತಿ ಅವರು, ಅಭಿನಯ, ನಿರ್ದೇಶನ ಮೊದಲಾದ ಕ್ಷೇತ್ರಗಳಲ್ಲಿ ಅನುಭವವನ್ನು ಹೊಂದಿದವರು. ಆದುದರಿಂದ, ಈ ಕೃತಿ ರಂಗಭೂಮಿ ವಿದ್ಯಾರ್ಥಿಗಳಿಗೆ ಒಂದು ಪುಟ್ಟ ಕೈ ಮರವಾಗಿದೆ. ಕೃತಿಯಲ್ಲಿ ಒಟ್ಟು ನಾಲ್ಕು ಅಧ್ಯಾಯಗಳಿವೆ. ಮೊದಲ ಅಧ್ಯಾಯದಲ್ಲಿ ಯಕ್ಷಗಾನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ರಂಗಕಲೆಯಲ್ಲಿ ಆಂಗಿಕ, ವಾಚಿಕಗಳ ಮಹತ್ವವನ್ನು ವಿವರಿಸಲಾಗಿದೆ. ಹಾಗೆಯೇ, ರಂಗಭೂಮಿಗೆ ಯೋಗ, ಪ್ರಾಣಾಯಾಮ ಮತ್ತು ಇತರ ಕಸರತ್ತುಗಳು ಹೇಗೆ ಪೂರಕವಾಗಿವೆ ಎನ್ನುವುದನ್ನೂ ವಿವರಿಸುತ್ತಾರೆ. ಎರಡನೆ ಅಧ್ಯಾಯದಲ್ಲಿ ರಂಗಭೂಮಿಯಲ್ಲಿ ಹೊಸ ಪ್ರಯೋಗಳನ್ನು ನಡೆಸಿದ ಮಹತ್ವ ಪೂರ್ಣ ನಿರ್ದೇಶಕರ ಪರಿಚಯ ಮತ್ತು ವಿವರಗಳಿವೆ. ಮೂರನೇ ಅಧ್ಯಾಯದಲ್ಲಿ ಇತಿಹಾಸದಲ್ಲಿ ಆಗಿ ಹೋದ ಮಹತ್ವದ ರಂಗಭೂಮಿ ಚಿಂತಕರ ಬಗ್ಗೆ ಚರ್ಚಿಸಲಾಗಿದೆ. ನಾಲ್ಕನೇ ಅಧ್ಯಾಯದಲ್ಲಿ ಕನ್ನಡ ಸಾಹಿತ್ಯದಲ್ಲಿ ನಾಟಕಗಳನ್ನು ಬರೆದವರ ಪರಿಚವಿದೆ. ಹಾಗೆಯೇ ಅವರ ನಾಟಕ ಸಾಹಿತ್ಯಗಳ ಕುರಿತಂತೆ ವಿಶ್ಲೇಷಣೆಗಳಿವೆ.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 136. ಮುಖಬೆಲೆ 125.

share
-ಕಾರುಣ್ಯ
-ಕಾರುಣ್ಯ
Next Story
X