ಕೊಣಾಜೆ, ಅ. 31: ಕೊಣಾಜೆ ಠಾಣೆ ವ್ಯಾಪ್ತಿಯ ದೇರಳಕಟ್ಟೆ ಬಳಿ ತೌಸಿಫ್ ಎಂಬಾತನಿಗೆ ಮಾರಣಾಂತಿಕವಾಗಿ ಹಲ್ಲೆಗೈದು, ಕೊಲೆ ಯತ್ನ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ತೌಡುಗೋಳಿ ಕ್ರಾಸ್ನ ಸಫಾಝ್ ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬುಧವಾರ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.