Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ದೋಸ್ತಿ ಕುಸ್ತಿ: ಕುಶ್ವಾಹ...

ಬಿಹಾರ ದೋಸ್ತಿ ಕುಸ್ತಿ: ಕುಶ್ವಾಹ ಸಿಡಿಸಿದ ಹೊಸ ಬಾಂಬ್

ವಾರ್ತಾಭಾರತಿವಾರ್ತಾಭಾರತಿ1 Nov 2018 9:32 AM IST
share
ಬಿಹಾರ ದೋಸ್ತಿ ಕುಸ್ತಿ: ಕುಶ್ವಾಹ ಸಿಡಿಸಿದ ಹೊಸ ಬಾಂಬ್

ಪಾಟ್ನಾ, ನ.1: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 2020ರ ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ಎನ್‌ಡಿಎ ಮಿತ್ರಪಕ್ಷವಾದ ಲೋಕ ಸಮತಾ ಪಕ್ಷದ ಮುಖಂಡ ಹಾಗೂ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಹೊಸ ಬಾಂಬ್ ಸಿಡಿಸಿದ್ದಾರೆ.

2020ರ ಬಳಿಕ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ನಿತೀಶ್ ಸ್ವತಃ ತಮ್ಮ ಬಳಿ ಹೇಳಿದ್ದಾಗಿ ಕೇಂದ್ರ ಸಚಿವರು ಹೇಳಿದ್ದಾರೆ.
"ನಾನು ಯಾವ ರಾಜಕೀಯವನ್ನೂ ಮಾಡುತ್ತಿಲ್ಲ ಅಥವಾ ಸಿಎಂ ಬಗೆಗೆ ಯಾವ ವಿಡಂಬನಾತ್ಮಕ ಹೇಳಿಕೆಯನ್ನೂ ನೀಡುತ್ತಿಲ್ಲ. ಆದರೆ 2020ರ ಬಳಿಕ ಸಿಎಂ ಹುದ್ದೆಯಲ್ಲಿ ಮುಂದುವರಿಯಬಾರದು ಎಂಬ ಅಪೇಕ್ಷೆಯನ್ನು ಸ್ವತಃ ಅವರೇ ವ್ಯಕ್ತಪಡಿಸಿದ್ದಾರೆ. ಈಗಾಗಲೇ 15 ವರ್ಷ ಕಾಲ ರಾಜ್ಯವಾಳಿದ್ದು, ಇನ್ನೂ ಎಷ್ಟು ವರ್ಷ ಮುಂದುವರಿಯಬೇಕು ಎಂಬುದಾಗಿ ಸಿಎಂ ಹೇಳಿದ್ದಾರೆ" ಎಂದು ಕುಶ್ವಾಹ ಸ್ಪಷ್ಟಪಡಿಸಿದರು. ಸರ್ದಾರ್ ಪಟೇಲ್ ಅವರ ಜನ್ಮದಿನಾಚರಣೆ ಅಂಗವಾಗಿ ಪಕ್ಷ ಆಯೋಜಿಸಿದ್ದ ಸಮಾರಂಭದಲ್ಲಿ ಸಚಿವರು ಈ ಹೇಳಿಕೆ ನೀಡಿದರು.

ಕೆಲ ತಿಂಗಳ ಹಿಂದೆ ನಿತೀಶ್ ಬಳಿ ಮಾತನಾಡಿದಾಗ ಅವರು ಭಾರವಾದ ಹೃದಯದಿಂದ ಈ ಮಾತು ಹೇಳಿದ್ದರು ಎಂದು ಕುಶ್ವಾಹ ಸ್ಪಷ್ಟಪಡಿಸಿದ್ದಾರೆ. ಆದರೆ ನಿತೀಶ್ ಕುಮಾರ್ ಅವರಾಗಲೀ, ಅವರ ಪಕ್ಷವಾದ ಸಂಯುಕ್ತ ಜನತಾದಳವಾಗಲೀ, ಸಿಎಂ ಅವರ ರಾಜಕೀಯ ನಿವೃತ್ತಿ ಬಗ್ಗೆ ಇದುವರೆಗೆ ಬಹಿರಂಗಪಡಿಸದ ಹಿನ್ನೆಲೆಯಲ್ಲಿ ಕುಶ್ವಾಹ ಹೇಳಿಕೆ ಅಚ್ಚರಿ ಮೂಡಿಸಿದೆ.

ಕುಶ್ವಾಹ ಹೇಳಿಕೆಯನ್ನು ತಳ್ಳಿಹಾಕಿರುವ ಜೆಡಿಯು ವಕ್ತಾರ ನೀರಜ್ ಕುಮಾರ್ ಅವರು, "ನಿತೀಶ್ ಕುಮಾರ್ ಜನ ನೀಡಿದ ತೀರ್ಪಿನ ಅನ್ವಯ ಸಿಎಂ ಆಗಿದ್ದಾರೆಯೇ ವಿನಃ ಶಾಸಕರು ಮಾಡಿರುವ ಆಯ್ಕೆಯಲ್ಲ" ಎಂದು ತಿರುಗೇಟು ನೀಡಿದ್ದಾರೆ.

ನಿತೀಶ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಕುಶ್ವಾಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. 2020ರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಸಿಎಂ ಅಭ್ಯರ್ಥಿಯಾಗಿ ನಿತೀಶ್ ಅವರನ್ನು ಏಕೆ ಬಿಂಬಿಸಬೇಕು ಎಂದು ಕಳೆದ ಜುಲೈನಲ್ಲಿ ಕುಶ್ವಾಹ ತಗಾದೆ ತೆಗೆದಿದ್ದರು. ಎನ್‌ಡಿಎ ಪಕ್ಷಗಳ ನಡುವಿನ ಸ್ಥಾನ ಹಂಚಿಕೆಯಲ್ಲಿ ಎಲ್‌ಎಸ್‌ಪಿ ಗೌರವಾರ್ಹ ಪ್ರಮಾಣದ ಸ್ಥಾನ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಕುಶ್ವಾಹ ಎನ್‌ಡಿಎ ಮುಖಂಡರ ವಿರುದ್ಧ ಗರಂ ಆಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X