Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಪಾದ ಮತ್ತು ಕಣಕಾಲಿನಲ್ಲಿ ಕಂಡುಬರುವ ಮೂಳೆ...

ಪಾದ ಮತ್ತು ಕಣಕಾಲಿನಲ್ಲಿ ಕಂಡುಬರುವ ಮೂಳೆ ಕ್ಯಾನ್ಸರ್‌ನ ಈ ಲಕ್ಷಣಗಳನ್ನು ಕಡೆಗಣಿಸಬೇಡಿ

ವಾರ್ತಾಭಾರತಿವಾರ್ತಾಭಾರತಿ1 Nov 2018 3:36 PM IST
share
ಪಾದ ಮತ್ತು ಕಣಕಾಲಿನಲ್ಲಿ ಕಂಡುಬರುವ ಮೂಳೆ ಕ್ಯಾನ್ಸರ್‌ನ ಈ ಲಕ್ಷಣಗಳನ್ನು ಕಡೆಗಣಿಸಬೇಡಿ

ಕ್ಯಾನ್ಸರ್‌ನಿಂದ ಸಂಭವಿಸುವ ಹೆಚ್ಚಿನ ಸಾವುಗಳಲ್ಲಿ ಮೂಳೆ ಕ್ಯಾನ್ಸರ್‌ನ ಪಾಲು ಬಹಳಷ್ಟಿದೆ. ಮೂಳೆ ಕ್ಯಾನ್ಸರ್‌ನಲ್ಲಿ ಪ್ರೈಮರಿ ಮತ್ತು ಸೆಕಂಡರಿ ಹೀಗೆ ಎರಡು ವಿಧಗಳಿವೆ. ಮೊದಲನೆಯ ವಿಧದಲ್ಲಿ ಕ್ಯಾನ್ಸರ್ ಕೋಶಗಳು ಮೂಳೆಯ ಒಳಗೇ ಸೃಷ್ಟಿಯಾದರೆ,ಎರಡನೇ ವಿಧದಲ್ಲಿ ಕ್ಯಾನ್ಸರ್ ಕೋಶಗಳು ರಕ್ತದ ಮೂಲಕ ಸ್ಥಾನಾಂತರಗೊಂಡು ಮೂಳೆಗಳ ಅಂಗಾಂಶಗಳು ಮತ್ತು ನರಗಳಿಗೆ ಹಾನಿಯನ್ನುಂಟು ಮಾಡುತ್ತವೆ. ಮೂಳೆ ಕ್ಯಾನ್ಸರ್‌ನ ಹೆಚ್ಚಿನ ಲಕ್ಷಣಗಳು ವಿಶೇಷವಾಗಿ ಪಾದ ಮತ್ತು ಕಣಕಾಲುಗಳಲ್ಲಿ ಕಾಣಿಸಿಕೊಳ್ಳುತ್ತವೆ.

► ಗಂಟು ಮತ್ತು ಊತಗಳು

ಇವು ಪಾದ ಮತ್ತು ಕಣಕಾಲುಗಳಲ್ಲಿ ಕಾಣಿಸಿಕೊಳ್ಳುವ ಮೂಳೆ ಕ್ಯಾನ್ಸರ್‌ನ ಅತ್ಯಂತ ಸಾಮಾನ್ಯ ಲಕ್ಷಣಗಳಾಗಿವೆ. ಪಾದ ಅಥವಾ ಕಣಕಾಲಿನಲ್ಲಿ ಉಂಟಾಗುವ ಊತವು ಕಾಲಕ್ರಮೇಣ ಹೆಚ್ಚುತ್ತಲೇ ಹೋಗುತ್ತದೆ. ಪ್ರೈಮರಿ ಅಥವಾ ಸೆಕಂಡರಿ ಕ್ಯಾನ್ಸರ್ ಕೋಶಗಳು ಮೂಳೆಯ ಕೋಶಗಳನ್ನು ಆಕ್ರಮಿಸಿ ಅಸ್ಥಿಮಜ್ಜೆಯನ್ನು ಪ್ರವೇಶಿಸಿ ಕೆಂಪು ರಕ್ತಕಣಗಳ ಉತ್ಪಾದನೆಗೆ ಅಥವಾ ಬಿಳಿಯ ರಕ್ತಕಣಗಳ ಪ್ರತಿರೋಧವನ್ನೊಡ್ಡುವ ಕಾರ್ಯಕ್ಕೆ ವ್ಯತ್ಯಯಗಳನ್ನುಂಟು ಮಾಡುವುದು ಇದಕ್ಕೆ ಕಾರಣವಾಗಿದೆ. ದೇಹದ ನಿರೋಧಕ ಶಕ್ತಿ ದುರ್ಬಲಗೊಂಡಾಗ ಕ್ಯಾನ್ಸರ್ ಕೋಶಗಳ ಶಕ್ತಿಯು ಹೆಚ್ಚುತ್ತದೆ ಮತ್ತು ಪಾದಗಳಲ್ಲಿ ಗಂಟು ಅಥವಾ ಊತವನ್ನು ಹೆಚ್ಚಿಸುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಈ ಗಂಟುಗಳು ಇತರ ಯಾವುದೋ ಕಾರಣದಿಂದ ಉಂಟಾಗಿರಬಹುದೆಂದು ತಪ್ಪಾಗಿ ಗ್ರಹಿಸಲಾಗುತ್ತದೆ. ಈ ಗಂಟುಗಳನ್ನೆಂದಿಗೂ ಕಡೆಗಣಿಸಬಾರದು ಮತ್ತು ತಕ್ಷಣ ವೈದ್ಯರನ್ನು ಭೇಟಿಯಾಗಿ ಅದಕ್ಕೆ ಕಾರಣಗಳನ್ನು ತಿಳಿದುಕೊಳ್ಳುವುದು ಅಗತ್ಯವಾಗುತ್ತದೆ.

► ಮೂಳೆ ಮುರಿತ ಮತ್ತು ಕೀಲುಗಳಲ್ಲಿ ಮೃದುತ್ವ

ಮೂಳೆ ಮುರಿತಗಳು ಸಹ ಮೂಳೆ ಕ್ಯಾನ್ಸರ್‌ನ್ನು ಸೂಚಿಸುವ ಮಹತ್ವದ ಲಕ್ಷಣವಾಗಬಹುದು. ಕ್ಯಾನ್ಸರ್ ಕೋಶಗಳು ಮೂಳೆಗಳನ್ನು ದುರ್ಬಲಗೊಳಿಸುವ ಸಾಮರ್ಥ್ಯವನ್ನು ಹೊಂದಿರುತ್ತವೆ ಮತ್ತು ಮೂಳೆ ಮುರಿತಕ್ಕೆ ಕಾರಣವಾಗುತ್ತವೆ. ಹೊರಗಿನ ಯಾವುದೇ ಒತ್ತಡವಿಲ್ಲದಿದ್ದರೂ ಅಥವಾ ಬಿದ್ದು ಪೆಟ್ಟಾಗಿರದಿದ್ದರೂ ಕ್ಯಾನ್ಸರ್ ಕೋಶಗಳು ಹೇರುವ ತೀವ್ರ ಒತ್ತಡದಿಂದಾಗಿ ಮೂಳೆಗಳಲ್ಲಿ ಮುರಿತವುಂಟಾಗಬಹುದು. ಅಲ್ಲದೆ ಮೂಳೆಗಳು,ವಿಶೇಷವಾಗಿ ಕೀಲುಗಳ ಸುತ್ತ ತಮ್ಮ ನಮ್ಯತೆಯನ್ನು ಕಳೆದುಕೊಳ್ಳುತ್ತವೆ. ಸ್ನಾಯುಗಳು ಮತ್ತು ಅಸ್ಥಿರಜ್ಜು ನಿಯಂತ್ರಣ ಮೀರಿ ಸೆಟೆದುಕೊಳ್ಳುತ್ತವೆ ಮತ್ತು ಮೂಳೆಗಳನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ.

► ನೋವು

ಮೂಳೆಗಳ ಮುರಿತ ಮತ್ತು ನಿಶ್ಶಕ್ತಿಯಿಂದಾಗಿ ರೋಗಿಯು ತೀವ್ರ ನೋವನ್ನು ಅನುಭವಿಸಬಹುದು. ರಾತ್ರಿಗಳಲ್ಲಿ ಅಥವಾ ವಿಶೇಷವಾಗಿ ದೈಹಿಕ ಶ್ರಮದ ಕೆಲಸಗಳಲ್ಲಿ ತೊಡಗಿಕೊಂಡಾಗ ಕಾಲುಗಳಲ್ಲಿ ನೋವುಂಟಾಗುವ ಹೆಚ್ಚಿನ ಸಾಧ್ಯತೆಗಳಿರುತ್ತವೆ. ಕಾಲವು ಸರಿದಂತೆ ಕಾಲುಗಳಲ್ಲಿ ನೋವು ಹೆಚ್ಚುತ್ತ ಹೋಗುತ್ತದೆ ಮತ್ತು ಕ್ಯಾನ್ಸರ್ ಬೆಳೆಯುತ್ತಲೇ ಹೋಗುತ್ತದೆ. ಹೀಗಾಗಿ,ನಿರಂತರವಾಗಿ ಹಲವಾರು ವಾರಗಳ ಕಾಲ ಕಾಲುಗಳು ನೋಯುತ್ತಿದ್ದರೆ ವೈದ್ಯರನ್ನು ಭೇಟಿಯಾಗುವುದು ಒಳ್ಳೆಯದು. ದುರದೃಷ್ಟವಶಾತ್ ಹೆಚ್ಚಿನವರು ಬೇರೆ ಯಾವುದೋ ಕಾರಣದಿಂದ ಕಾಲುಗಳು ನೋಯುತ್ತಿರಬಹುದು ಎಂದು ತಪ್ಪಾಗಿ ಭಾವಿಸಿರುತ್ತಾರೆ. ಕ್ಯಾನ್ಸರ್ ಮೂರು ಅಥವಾ ನಾಲ್ಕನೇ ಹಂತವನ್ನು ತಲುಪಿದರೆ ಕ್ಯಾನ್ಸರ್ ಕೋಶಗಳು ಶ್ವಾಸಕೋಶಗಳು ಅಥವಾ ಎದೆಗೆ ವ್ಯಾಪಿಸತೊಡಗುವುದರಿಂದ ನೋವು ಇನ್ನಷ್ಟು ಹೆಚ್ಚುತ್ತದೆ ಮತ್ತು ಬದುಕುಳಿಯುವ ಸಾಧ್ಯತೆ ಕಡಿಮೆಯಾಗುತ್ತದೆ. ಹೀಗಾಗಿ ನೋವು ಹೆಚ್ಚುತ್ತಲೇ ಇದ್ದರೆ ಅದಕ್ಕೆ ಏನು ಕಾರಣ ಎನ್ನುವುದನ್ನು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X