Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐದನೇ ಏಕದಿನ: ಭಾರತಕ್ಕೆ 9 ವಿಕೆಟ್ ಜಯ:...

ಐದನೇ ಏಕದಿನ: ಭಾರತಕ್ಕೆ 9 ವಿಕೆಟ್ ಜಯ: ಸರಣಿ ಕೈವಶ

ಜಡೇಜ ಸ್ಪಿನ್ ಜಾದೂವಿಗೆ ವಿಂಡೀಸ್ ತತ್ತರ: ರೋಹಿತ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ1 Nov 2018 5:17 PM IST
share
ಐದನೇ ಏಕದಿನ: ಭಾರತಕ್ಕೆ 9 ವಿಕೆಟ್ ಜಯ: ಸರಣಿ ಕೈವಶ

ತಿರುವನಂತಪುರ, ನ.1: ಎಡಗೈ ಸ್ಪಿನ್ನರ್ ರವೀಂದ್ರ ಜಡೇಜರ ಸ್ಪಿನ್ ಮೋಡಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಅವರ 37ನೇ ಅರ್ಧಶತಕದ ಕೊಡುಗೆ ನೆರವಿನಿಂದ ಭಾರತ ತಂಡ ವೆಸ್ಟ್‌ಇಂಡೀಸ್ ತಂಡ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು 9 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದೆ.

ಈ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ಪಡೆ 5 ಪಂದ್ಯಗಳ ಏಕದಿನ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಸ್ವದೇಶದಲ್ಲಿ ಸತತ ಆರನೇ ಏಕದಿನ ಸರಣಿ ಗೆದ್ದ ಸಾಧನೆ ಮಾಡಿದೆ.

ಇಲ್ಲಿ ಗುರುವಾರ ನಡೆದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಜಯಿಸಿದ ವೆಸ್ಟ್‌ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.  ಎಡಗೈ ಸ್ಪಿನ್ನರ್ ರವೀಂದ್ರ ಜಡೇಜ(4-34)ನೇತೃತ್ವದ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ವೆಸ್ಟ್‌ಇಂಡೀಸ್ ತಂಡ ಕೇವಲ 104 ರನ್ ಗೆ ಆಲೌಟಾಯಿತು. 

ಗೆಲ್ಲಲು 105 ರನ್  ಸುಲಭ ಗುರಿ ಪಡೆದ ಭಾರತ ಎರಡನೇ ಓವರ್‌ನಲ್ಲಿ ಶಿಖರ್ ಧವನ್(6) ವಿಕೆಟನ್ನು ಕಳೆದುಕೊಂಡಿತು. ಆಗ 2ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 99 ರನ್ ಸೇರಿಸಿದ ರೋಹಿತ್ (ಔಟಾಗದೆ 63 ರನ್,56 ಎಸೆತ,5 ಬೌಂಡರಿ, 4 ಸಿಕ್ಸರ್)ಹಾಗೂ ಕೊಹ್ಲಿ(ಔಟಾಗದೆ 33,29 ಎಸೆತ, 6 ಬೌಂಡರಿ)ತಂಡಕ್ಕೆ 14.5 ಓವರ್‌ಗಳಲ್ಲಿ ಗೆಲುವು ತಂದುಕೊಟ್ಟರು.

ರೋಹಿತ್ ಕೇವಲ 45 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 50 ರನ್ ಪೂರೈಸಿದರು. ವಿಂಡೀಸ್ 104/10: ಇದಕ್ಕೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ವಿಂಡೀಸ್ ಇನಿಂಗ್ಸ್‌ನ ನಾಲ್ಕನೇ ಎಸೆತದಲ್ಲಿ ಆರಂಭಿಕ ಆಟಗಾರ ಪೊವೆಲ್(0) ವಿಕೆಟನ್ನು ಕಳೆದುಕೊಂಡಿತು. ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳಲು ವಿಫಲವಾಗಿ 31.5 ಓವರ್‌ಗಳಲ್ಲಿ 104 ರನ್‌ಗೆ ಆಲೌಟಾಯಿತು.

ನಾಯಕ ಜೇಸನ್ ಹೋಲ್ಡರ್(25) ಹಾಗೂ ಮರ್ಲಾನ್ ಸ್ಯಾಮುಯೆಲ್ಸ್(24), ಆರ್.ಪೊವೆಲ್(16) ಎರಡಂಕೆಯ ಸ್ಕೋರ್ ಗಳಿಸಿದರು. ಉಳಿದವರು ಬೇಗನೆ ಔಟಾಗಿ ನಿರಾಸೆಗೊಳಿಸಿದರು.

ಭಾರತದ ಪರ ರವೀಂದ್ರ ಜಡೇಜ(4-34) ಯಶಸ್ವಿ ಬೌಲರ್ ಎನಿಸಿಕೊಂಡರು. ಜಸ್‌ಪ್ರಿತ್ ಬುಮ್ರಾ(2-11) ಹಾಗೂ ಖಲೀಲ್ ಅಹ್ಮದ್(2-29)ತಲಾ ಎರಡು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X