Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ತಾನಾ ವಿರುದ್ಧ ಕಾನೂನುಕ್ರಮ ಕುರಿತು...

ಅಸ್ತಾನಾ ವಿರುದ್ಧ ಕಾನೂನುಕ್ರಮ ಕುರಿತು ಯಥಾಸ್ಥಿತಿ ಆದೇಶ ನ.14ರವರೆಗೆ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ1 Nov 2018 7:32 PM IST
share
ಅಸ್ತಾನಾ ವಿರುದ್ಧ ಕಾನೂನುಕ್ರಮ ಕುರಿತು ಯಥಾಸ್ಥಿತಿ ಆದೇಶ ನ.14ರವರೆಗೆ ವಿಸ್ತರಣೆ

ಹೊಸದಿಲ್ಲಿ,ನ.1: ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವನ್ನು ಹೊತ್ತಿರುವ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ಕಾನೂನು ಕ್ರಮ ಕುರಿತು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸಿಬಿಐಗೆ ಸೂಚಿಸಿರುವ ತನ್ನ ಆದೇಶವನ್ನು ಗುರುವಾರ ದಿಲ್ಲಿ ಉಚ್ಚ ನ್ಯಾಯಾಲಯವು ನ.14ರವರೆಗೆ ವಿಸ್ತರಿಸಿದೆ.

ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಮತ್ತು ಅಸ್ತಾನಾ ಅವರ ನಡುವಿನ ಕಲಹದ ಹಿನ್ನೆಲೆಯಲ್ಲಿ ದಿಲ್ಲಿಯಿಂದ ಜಬಲಪುರಕ್ಕೆ ವರ್ಗಾವಣೆಗೊಂಡಿರುವ ಹೆಚ್ಚುವರಿ ಎಸ್‌ಪಿ ಎಸ್.ಎಸ್.ಗುರಮ್ ಅವರು ಈ ವಿಷಯದಲ್ಲಿ ತನ್ನ ಅಹವಾಲು ಆಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಸಿಬಿಐ ಮತ್ತು ಅಸ್ತಾನಾ ಪರ ವಕೀಲರು ವಿರೋಧಿಸಿದರು.

ಗುರುವಾರದ ಕಲಾಪವು ಇಬ್ಬರು ವಕೀಲರು ತಾವು ಸಿಬಿಐ ಅನ್ನು ಪ್ರತಿನಿಧಿಸುತ್ತಿದ್ದೇವೆ ಎಂದು ಹೇಳಿಕೊಂಡು ಸೃಷ್ಟಿಸಿದ ವಿವಾದಕ್ಕೆ ಸಾಕ್ಷಿಯಾಯಿತು.

ಅಸ್ತಾನಾ ಪ್ರಕರಣವು ಆ.23ರಂದು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದ ನಂತರ ಗುರುವಾರ ಮೊದಲ ಬಾರಿಗೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ವಿಕ್ರಮ ಬ್ಯಾನರ್ಜಿ ಅವರು ಸಿಬಿಐ ಪರ ಹಾಜರಾಗುವಂತೆ ತನಗೆ ಸೂಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸಿಬಿಐ ಪರ ನ್ಯಾಯಾಲಯದಲ್ಲಿ ಹಾಜರಾಗುತ್ತಿರುವ ವಕೀಲ ಕೆ.ರಾಘವಾಚಾರ್ಯುಲು ಅವರು ಬ್ಯಾನರ್ಜಿಯವರ ಹಾಜರಾತಿಯನ್ನು ವಿರೋಧಿಸಿ,ಅಸ್ತಾನಾ ಅರ್ಜಿ ಸಲ್ಲಿಸಿದಾಗಿನಿಂದಲೂ ತಾನು ಸಿಬಿಐ ಪರ ವಕೀಲನಾಗಿ ನೇಮಕಗೊಂಡಿದ್ದೇನೆ. ಪ್ರಕರಣದಲ್ಲಿ ತನ್ನನ್ನು ವಿಶೇಷ ಸರಕಾರಿ ಅಭಿಯೋಜಕನನ್ನಾಗಿ ನಿಯೋಜಿಸಲಾಗಿದೆ ಎಂದು ವಾದಿಸಿದರು.

ಬಳಿಕ,ಬ್ಯಾನರ್ಜಿ ತಾನು ಸಕ್ಷಮ ಪ್ರಾಧಿಕಾರದಿಂದ ಸೂಚನೆಯನ್ನು ಪಡೆದುಕೊಂಡು ಇಬ್ಬರಲ್ಲಿ ಯಾರು ಸಿಬಿಐನ್ನು ಪ್ರತಿನಿಧಿಸುತ್ತಾರೆ ಎನ್ನುವುದನ್ನು ತಿಳಿಸುವುದಾಗಿ ನ್ಯಾಯಾಲಯಕ್ಕೆ ನಿವೇದಿಸಿಕೊಂಡರು.

ಅಸ್ತಾನಾ ವಿರುದ್ಧ ಕಾನೂನು ಕ್ರಮ ಕುರಿತು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಅ.23ರಂದು ಸಿಬಿಐಗೆ ಆದೇಶಿಸಿದ್ದ ಉಚ್ಚ ನ್ಯಾಯಾಲಯವು ಅ.29ರಂದು ಅದನ್ನು ನ.1ರವರೆಗೆ ವಿಸ್ತರಿಸಿತ್ತು.

ಇದಕ್ಕೂ ಮುನ್ನ,ತನ್ನ ವಿರುದ್ಧದ ಎಫ್‌ಐಆರ್ ರದ್ದತಿಯನ್ನು ಕೋರಿ ಅಸ್ತಾನಾ ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿದ ಸಿಬಿಐ,ಅವರ ಮತ್ತು ಇತರರ ವಿರುದ್ಧದ ಆರೋಪಗಳು ಸಂಜ್ಞೇಯ ಅಪರಾಧ(ದಂಡಾಧಿಕಾರಿಯ ಅನುಮತಿಯಿಲ್ಲದೆ ಪೊಲೀಸರು ಬಂಧಿಸಬಹುದಾದ ಅಪರಾಧ)ಗಳನ್ನು ಸೂಚಿಸುತ್ತಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X