Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಳೆಯರಲ್ಲಿ, ಯುವ ಜನರಲ್ಲಿ ಓದುವ...

ಎಳೆಯರಲ್ಲಿ, ಯುವ ಜನರಲ್ಲಿ ಓದುವ ಹವ್ಯಾಸಕ್ಕೆ ಪ್ರೋತ್ಸಾಹಿಸಬೇಕು: ಕೆ.ಟಿ.ಗಟ್ಟಿ

ವಾರ್ತಾಭಾರತಿವಾರ್ತಾಭಾರತಿ1 Nov 2018 8:22 PM IST
share
ಎಳೆಯರಲ್ಲಿ, ಯುವ ಜನರಲ್ಲಿ ಓದುವ ಹವ್ಯಾಸಕ್ಕೆ ಪ್ರೋತ್ಸಾಹಿಸಬೇಕು: ಕೆ.ಟಿ.ಗಟ್ಟಿ

ಮಂಗಳೂರು, ನ.1: ಓದುವ ಹವ್ಯಾಸ ಕಡಿಮೆಯಾಗುತ್ತಿರುವುದು ಸಾಹಿತ್ಯದ ಬೆಳವಣಿಗೆಯ ದೃಷ್ಟಿಯಿಂದ ಆಶಾದಾಯಕವಲ್ಲ ಎಂದು ಎಳೆಯರಲ್ಲಿ ಮತ್ತು ಯುವ ಜನರಲ್ಲಿ ಓದುವ ಹವ್ಯಾಸ ಕುಂಠಿತವಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿ ಕೆ.ಟಿ.ಗಟ್ಟಿ ತಿಳಿಸಿದ್ದಾರೆ.

ಸಾಹಿತ್ಯ ರಂಗ ಬೆಳೆಯಬೇಕಾದರೆ ಹೊಸ ಕೃತಿಗಳು ರಚನೆಯಾಗಬೇಕಾದರೆ ಹೆಚ್ಚು ಹೆಚ್ಚು ಓದಬೇಕಾಗಿದೆ. ಕನ್ನಡದಲ್ಲಿ ವ್ಯಕ್ತಿತ್ವವನ್ನು ಅರಳಿಸುವ ಕೃತಿಗಳು ಬರಹಗಾರನ ಸಾಮಾಜಿಕ ಪ್ರಜ್ಞೆಯಿಂದ ಬಂದಿದೆ. ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚುತ್ತಿರು ವಂತೆ ಮಾನವೀಯ ಸಂಬಂಧ ಶಿಥಿಲಗೊಳ್ಳುತ್ತಿರುವುದು ಕಂಡು ಬರುತ್ತಿದೆ. ನಾವೆಲ್ಲರು ಚೆನ್ನಾಗಿ ಬದುಕಬೇಕು, ನೆಮ್ಮದಿಯಿಂದ ಸಾಯಬೇಕು ಎಂದು ಅಪೇಕ್ಷೆ ಪಡುತ್ತೇವೆ. ಆದರೆ ಇತ್ತೀಚಿನ ಬೆಳೆದ ತಂತ್ರಜ್ಞಾನ ಹಿಂದೆ ಬಿದ್ದಿರುವ ಎಳೆಯರು ಮೊಬೈಲ್, ಇಂಟರ್‌ನೆಟ್‌ ಗಳಿಗೆ ಅಂಟಿಕೊಂಡಿರುವುದು ಕಳವಳವನ್ನುಂಟು ಮಾಡುತ್ತದೆ. ಹಿರಿಯರು ಮತ್ತು ಕಿರಿಯರ ನಡುವಿನ ಸಂಭಾಷಣೆಗೆ ಅವಕಾಶವಿಲ್ಲದಂತಾಗಿದೆ. ಇದರಿಂದ ಹಿರಿಯ ಜ್ಞಾನ ಕಿರಿಯರಿಗೆ ಲಭಿಸದಂತಾಗಿದೆ. ಇದು ಒಂದುರೀತಿ ಮಕ್ಕಳನ್ನು ಹಾಳು ಮಾಡುವಂತೆ ತೋರುತ್ತದೆ. ನಮಗೆ ಹೆಚ್ಚು ನೆಮ್ಮದಿಯಿಂದ ಸಾಯಲು ಸಾಧ್ಯವಾಗುವು ದಿಲ್ಲವೇನೋ ಎಂಬ ಸಂದೇಹ ಕಾಡುತ್ತಿದೆ. ಇಂತಹ ಸನ್ನಿವೇಶದಲ್ಲಿ ಅಮ್ಮ ಅಪ್ಪಂದಿರು ಮಕ್ಕಳಿಗೆ ಬದುಕಿನ ಬಗೆಗಿನ ಪ್ರೀತಿಯನ್ನು ತಿಳಿಸಿಕೊಡ ಬೇಕಾಗಿದೆ. ನಮ್ಮ ಸುತ್ತ ಮುತ್ತಲ ಪ್ರಕೃತಿಯನ್ನು ಮರವನ್ನು ಪ್ರೀತಿಸಲು ಕಲಿಸಬೇಕಾಗಿದೆ ಎಂದು ಕೆ.ಟಿ.ಗಟ್ಟಿ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರರು ಮಾತನಾಡುತ್ತಾ, ಕನ್ನಡದ ಪ್ರಮುಖ ಕವಿಗಳು ತಮ್ಮ ಕಾವ್ಯ, ಕೃತಿಗಳ ಮೂಲಕ ನಾಡಿನ ಮತ್ತು ನುಡಿಯ ಬಗ್ಗೆ ಸಾಕಷ್ಟು ಕೃತಿಗಳನ್ನು ರಚಿಸಿ ಕೊಡುಗೆಯಾಗಿ ನೀಡಿದ್ದಾರೆ. ಕವಿ ಪಂಜೆ ಮಂಗೇಶರಾಯರ ಬ್ರಿಟೀಷ್ ಸಾಮ್ರಾಜ್ಯದ ವಿರುದ್ಧ ನಾಗರ ಹಾವೆ ಹಾವೊಳು ಹೂವೆ ಎನ್ನುವ ಹಾಡಿನಲ್ಲಿ ಬಂಡಾಯದ ಧ್ವನಿಯನ್ನು ದೇಶದಲ್ಲಿ ಬ್ರಿಟೀಷರ ವಿರುದ್ಧ ಹೋರಾಟ ನಡೆಯುವ ಮೊದಲೆ ಪ್ರಕಟಿಸಿದ್ದಾರೆ ಎಂದು ತಿಳಿಸಿದರು.

ಕನ್ನಡ ರಾಜೋತ್ಸವದ ಸಂದರ್ಭದಲ್ಲಿ ನಾಡಿನ ಹಾಗೂ ಪರವೂರ ಕನ್ನಡ ಸಾಹಿತ್ಯದ ಬಾಲ ಪ್ರತಿಭೆಗಳನ್ನು ಗೌರವಿಸುವ ಕೆಲಸ ಮಾಡಲಾಗುತ್ತಿದೆ. ಇದರಿಂದ ಕನ್ನಡ ಭಾಷೆಯ ಬಗ್ಗೆ ಹೊರನಾಡ ಕನ್ನಡಿಗರು ಅಭಿ ಮಾನ ಪಡುವಂತಾಗುತ್ತದೆ ಎಂದು ತಿಳಿಸಿದರು. ಸಮಾರಂಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೈ ಶಿವರಾಮಯ್ಯ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಇ .ರಾಜೇಶ್, ಉಪಸ್ಥಿತರಿದ್ದರು.

ದಯಾನಂದ ಕಟೇಲ್, ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕವಿಗೋಷ್ಠಿಯ:- ಬಿ.ಎನ್.ಪುಷ್ಪರಾಜ್ ಅಧ್ಯಕ್ಷತೆಯಲ್ಲಿ ರಾಜೋತ್ಸವದ ಕವಿಗೊಷ್ಠಿ ನಡೆಯಿತು. ಕವಿಗೋಷ್ಠಿಯಲ್ಲಿ ಮಮ್ತಾಝ್ ಬೇಗಂ ಸುಖಿ ಕುಟುಂಬ , ನೀರಜ ಓಕುಡ ಅಜ್ಜರ ಕಾಡು ಎನ್ನೊಡತಿ, ವಿಶ್ವ ನಾಥ ನೇರಳಕಟ್ಟೆ ಯುದ್ಧ -ಬುದ್ಧ,ಹರಿಣಾಕ್ಷಿ ಉಪ್ಪಿನಂಗಡಿ ಜಲಕನ್ಯೆ,ಜಯರಾಮ ಡೆಂಬಳ ಕರಗುತಿದೆ ಭಾಷೆ, ಸುಮಂಗಲಾ ಗಿರಿಧರ್ ಕರುನಾಡ ಒಡಲ ಆಕ್ರಂದನ ಕವನ ವಾಚನ ಮಾಡಿದರು. ಇದೆ ಸಂದರ್ಭದಲ್ಲಿ ಪೊಲೀಸ್ ಬ್ಯಾಂಡ್ ಕಾರ್ಯಕ್ರಮ, ಹೊರನಾಡ ಪ್ರತಿಭೆಗಳಿಗೆ ಸನ್ಮಾನ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಯಿತು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X