Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹೊಣೆಗಾರಿಕೆ ಮರೆತ ಮಾಧ್ಯಮಗಳು

ಹೊಣೆಗಾರಿಕೆ ಮರೆತ ಮಾಧ್ಯಮಗಳು

-ಮನ್ಸೂರ್ ಅಹ್ಮದ್, ಮಂಗಳೂರು-ಮನ್ಸೂರ್ ಅಹ್ಮದ್, ಮಂಗಳೂರು1 Nov 2018 11:48 PM IST
share

ಮಾನ್ಯರೇ,

ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ಹೊಣೆಗಾರಿಕೆಗಳನ್ನು ಹೇಗೆ ನಿರ್ವಹಿಸುತ್ತಿವೆ ಎನ್ನುವುದು ಅವುಗಳು ಎಂತಹ ಸುದ್ದಿಗಳಿಗೆ ಪ್ರಾಮುಖ್ಯತೆ ಮತ್ತು ಪ್ರಾಶಸ್ತ್ಯ ಕೊಡುತ್ತವೆ ಎನ್ನುವುದರ ಮೇಲೆ ಅವಲಂಬಿತವಾಗಿರುತ್ತದೆ. ಯಾರೋ ಒಬ್ಬ ನಟ ಗಡ್ಡ ಬೋಳಿಸಿದ್ದನ್ನು, ಇನ್ನೊಬ್ಬ ನಟನ ನಿಶ್ಚಿತಾರ್ಥ ಮುರಿದು ಬಿದ್ದಿದ್ದನ್ನು ತಮ್ಮ ಪತ್ರಿಕೆಯ ಮುಖಪುಟದಲ್ಲಿ ಪ್ರಕಟಿಸುವ, ತಮ್ಮ ಚಾನಲ್‌ಗಳಲ್ಲಿ ಗಂಟೆ ಗಟ್ಟಲೆ ಕೊರೆಯುವ ಮನಃಸ್ಥಿತಿಯುಳ್ಳ ಮಾಧ್ಯಮಗಳಿಂದಾಗಿ, ಅವುಗಳಿಗೆ ತಮ್ಮ ಹೊಣೆಗಾರಿಕೆಯ, ಮಹತ್ತರ ಜವಾಬ್ದಾರಿಗಳ ಕಿಂಚಿತ್ತೂ ಅರಿವಿಲ್ಲ ಎಂಬುದನ್ನು ಅವುಗಳು ಖುದ್ದಾಗಿ ಜಗಜ್ಜಾಹೀರುಗೊಳಿಸುತ್ತಿವೆ ಎಂದು ಭಾವಿಸಬೇಕಷ್ಟೇ!..

ಒಂದೆಡೆ ಕೋಟಿಗಟ್ಟಲೆ ಹಣ ಲೂಟಿ ಮಾಡಿ, ಹಗರಣಗಳಲ್ಲಿ ಪಾಲ್ಗೊಂಡು, ದೇಶದ ಖಜಾನೆಯನ್ನೇ ಬರಿದಾಗಿಸುತ್ತಿರುವವರನ್ನೇ ಹಾಡಿಹೊಗಳಿ ಬರೆಯುತ್ತಿರುವ ಇವುಗಳು, ಇನ್ನೊಂದೆಡೆ ದೇಶದ ಬೆನ್ನೆಲುಬು ಎಂದು ಗುರುತಿಸಿಕೊಂಡ ಬಡರೈತನ ಆತ್ಮಹತ್ಯೆಯನ್ನು ಅದೆಲ್ಲೋ ಒಳಪುಟಗಳ ಸಂದಿಯಲ್ಲಿ ಪ್ರಕಟಿಸಿ ಕೃತಾರ್ಥವೆನಿಸಿಕೊಳ್ಳುತ್ತಿವೆ.

ಮಾಧ್ಯಮಗಳ ಈ ದಾಸ್ಯ ಹೀಗೆ ಮುಂದುವರಿದದ್ದೇ ಆದರೆ ಸ್ವಾತಂತ್ರ ಪೂರ್ವಕ್ಕಿಂತ ಹೀನಾಯ ಸ್ಥಿತಿಗೆ ದೇಶ ತಲುಪಲೂ ಬಹುದು. ಮೊದಲು ಬ್ರಿಟಿಷರು ದೇಶವನ್ನು ಕೊಳ್ಳೆ ಹೊಡೆದರು. ಈಗ ನಮ್ಮ ಹೆಬ್ಬೆಟ್ಟು ರಾಜಕಾರಣಿಗಳು ಕೊಳ್ಳೆ ಹೊಡೆಯುತ್ತಿದ್ದಾರೆ; ಇವೆಲ್ಲವನ್ನೂ ತಿಳಿದ ಮಾಧ್ಯಮದ ಮಂದಿಗಳನೇಕರು ತಮ್ಮ ಸ್ವಾರ್ಥಕ್ಕಾಗಿ ಆ ರಾಜಕಾರಣಿಗಳನ್ನು ಸಮರ್ಥಿಸುವುದು ಸುಳ್ಳಲ್ಲ.

ಮಾಧ್ಯಮಗಳು ತಮ್ಮ ಜವಾಬ್ದಾರಿಗಳನ್ನು ನಿಜವಾದ ಅರ್ಥದಲ್ಲಿ ಅರಿತುಕೊಂಡು; ಜನರಲ್ಲಿ ಜಾಗೃತಿ ಮೂಡಿಸಿ, ದೇಶಾದ್ಯಂತ ನಿಷ್ಠಾವಂತ ಪ್ರತಿನಿಧಿಗಳನ್ನು ಆರಿಸಲು ತಮ್ಮ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯತ್ತ ದಾಪುಗಾಲು ಹಾಕುವಂತಾಗಬಹುದು.

share
-ಮನ್ಸೂರ್ ಅಹ್ಮದ್, ಮಂಗಳೂರು
-ಮನ್ಸೂರ್ ಅಹ್ಮದ್, ಮಂಗಳೂರು
Next Story
X