Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ಅಧಿಕಾರದಲ್ಲಿದ್ದಾಗ ದ.ಕ....

ಬಿಜೆಪಿ ಅಧಿಕಾರದಲ್ಲಿದ್ದಾಗ ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಸೃಷ್ಟಿಯಾಗಿದೆ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ2 Nov 2018 5:41 PM IST
share
ಬಿಜೆಪಿ ಅಧಿಕಾರದಲ್ಲಿದ್ದಾಗ ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಸೃಷ್ಟಿಯಾಗಿದೆ: ರಮಾನಾಥ ರೈ

ಬಂಟ್ವಾಳ, ನ. 2: 94ಸಿ ಯೋಜನೆ ಜಾರಿ ಮಾಡಲು ಯೋಗ್ಯತೆ ಇಲ್ಲದವರು ಹಕ್ಕುಪತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಅದಲ್ಲದೆ, ಬಿಜೆಪಿ ಅಧಿಕಾರ ದಲ್ಲಿದ್ದಾಗ ಜಿಲ್ಲೆಯಲ್ಲಿ ಮರಳು ಸಮಸ್ಯೆ ಸೃಷ್ಟಿಯಾಗಿದ್ದು, ಈಗ ಅವರೇ ಪ್ರತಿಭಟನೆಗೆ ಮುಂದಾಗಿರುವುದು ದುರದೃಷ್ಟಕರ ಎಂದು ತಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿವವರಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿರುಗೇಟು ನೀಡಿದ್ದಾರೆ.

ಶುಕ್ರವಾರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಳು ನೀತಿ ಜಾರಿಗೆ ತನ್ನಷ್ಟ ಪ್ರಯತ್ನ ಯಾರು ಮಾಡಿಲ್ಲ. ಗಣಿ ಇಲಾಖೆಯ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರು ಈ ಇಲಾಖೆಯಿಂದ ಹೋಗದೆ ಮರಳು ಸಮಸ್ಯೆ ಬಗೆಹರಿಯಲು ಸಾಧ್ಯವಿಲ್ಲ. ಇವರಲ್ಲಿ ಹಲವು ಬಾರಿ ಜಿಲ್ಲೆಯ ಮರಳು ಸಮಸ್ಯೆಯನ್ನು ತರಲಾಗಿತ್ತಾದರೂ ಯಾವುದೇ ಸ್ಪಂದನ ನೀಡಲಿಲ್ಲ. ಇವರು ಇಲ್ಲಿಂದ ಹೋಗದ ಹೊರತು ಮರಳು ಸಮಸ್ಯೆ ಮುಗಿಯುವುದಿಲ್ಲ ಎಂದರು.

ನಿಗದಿಯಾಗಿದ್ದ ಕಾರ್ಯಕ್ರಮ ತಡೆಯಲು ತಾನು ಹೇಳಿಲ್ಲ: ರೈ

ಎರಡು ದಿನಗಳ ಹಿಂದೆ ಸರಪಾಡಿ, ಮಣಿನಾಲ್ಕೂರು ಗ್ರಾಮಗಳ ಹಕ್ಕುಪತ್ರ ವಿತರಣೆಯಲ್ಲಾದ ಗೊಂದಲಕ್ಕೆ ಪ್ರತಿಕ್ರಿಯಿಸಿದ ಅವರು, ರಮಾನಾಥ ರೈ ಕೀಳು ಮಟ್ಟದ ರಾಜಕೀಯ ಮಾಡುವವನಲ್ಲ. ನವಂಬರ್ ಮೊದಲ ವಾರದಲ್ಲಿ ಕಂದಾಯ ಸಚಿವರು ಜಿಲ್ಲೆಗೆ ಭೇಟಿ ನೀಡುವ ಸಂದರ್ಭ ಬಾಕಿ ಉಳಿದಿರುವ ಎಲ್ಲ ಹಕ್ಕುಪತ್ರಗಳ ವಿತರಣೆಗೆ ವ್ಯವಸ್ಥೆಗೊಳಿಸುವಂತೆ ಅಧಿಕಾರಿಗಳಿಗೆ ಕರೆಮಾಡಿ ಸೂಚಿಸಿದ್ದೇನೆ. ಆದರೆ, ನಿಗದಿಯಾಗಿದ್ದ ಕಾರ್ಯಕ್ರಮ ತಡೆಯಲು ತಾನು ಹೇಳಿಲ್ಲ. ಅಧಿಕಾರಿಗಳ ತಪ್ಪು ಮಾಹಿತಿಯಿಂದ ತನ್ನ ಮೇಲೆ ತಪ್ಪಾಭಿಪ್ರಾಯ ಬಂದಿದೆ. ಬಿಜೆಪಿ ಇದನ್ನೇ ತನ್ನ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಆರೋಪಿಸಿದರು.

ನಾನು ಸಚಿವನಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ 20 ಸಾವಿರಕ್ಕೂ ಹೆಚ್ಚು ಅರ್ಜಿ ಸ್ವೀಕರಿಸಿ, ಕಂದಾಯ ಸಚಿವರನ್ನು ಕರೆಸಿ 94ಸಿ ಹಕ್ಕಪತ್ರ ವಿತರಿಸಲಾಗಿದೆ. ಹಕ್ಕುಪತ್ರವನ್ನು ಶಾಸಕರೇ ವಿತರಿಸಬೇಕೆಂಬ ಯಾವ ನಿಯಮವು ಇಲ್ಲ ಎಂದರು.

ಅಪಪ್ರಚಾರವೇ ಬಿಜೆಪಿ ಉದ್ಯೋಗ

ಅಪಪ್ರಚಾರ ಮಾಡುವುದೇ ಬಿಜೆಪಿಯವರ ಉದ್ಯೋಗ. ಬಡವರಿಗೆ ತೊಂದರೆ ಕೊಡುವ ಕೆಲಸ ತಾನೆಂದು ಮಾಡುವುದಿಲ್ಲ. ತಾನು ಸಚಿವನಾಗಿದ್ದಾಗ, ಕ್ಷೇತ್ರದ ಮತದಾರರಲ್ಲದ ರಾಜೇಶ್ ನಾಯ್ಕ್ ಹಾಗೂ ಜನಪ್ರತಿನಿಧಿಯಲ್ಲದ ಪದ್ಮನಾಭ ಕೊಟ್ಟಾರಿ ಅವರು ಕೇಂದ್ರ ಸರಕಾರದ ಉಜ್ವಲ ಯೋಜನೆಯ ಗ್ಯಾಸ್ ಸಿಲಿಂಡರ್, ಸ್ಟೌವ್ ವಿತರಣೆಯ ಸಂದರ್ಭವೇ ತಡೆವೊಡ್ಡಲು ಅವಕಾಶವಿತ್ತು. ಆದರೆ, ತಾನು ಇಂತಹ ಚಿಲ್ಲರೆ ರಾಜಕೀಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೆ ಕಾಂಗ್ರೆಸ್ ಸ್ಪರ್ಧಿಸಲಿದೆ

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೆ ಕಾಂಗ್ರೆಸ್ ಸ್ಪರ್ಧಿಸಲಿದೆ. ಚುನಾವಣಾ ಪೂರ್ವದಲ್ಲಿ ತಿಳಿಸಿದಂತೆ ಕಾಂಗ್ರೆಸ್ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಪ.ಜಾತಿಗೆ ಪ್ರಕಟವಾದ ಮೀಸಲಾತಿಗೆ ಬಿಜೆಪಿ ಕೋಟ್9 ಮೋರೆ ಹೋಗಿದ್ದು. ದುರ್ಬಲ ವರ್ಗದವರನ್ನು ಅಧಿಕಾರ ವಂಚಿತರ ನ್ನಾಗಿಸುವುದೇ ಅವರ ಅಜೆಂಡ ಎಂದರು.

ಮೌಲ್ಯಮಾಪನಕ್ಕೆ ಇನ್ನಷ್ಟು ಸಮಯವಿದೆ

ಸಂಗಬೆಟ್ಟು ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭಾ ಚುನಾವಣೆ ನಡೆದು ಕಳೆದ ಐದು ತಿಂಗಳಿನಲ್ಲಿ ಸಂಗಬೆಟ್ಟು ಉಪಚುನಾವಣೆಯಲ್ಲಿ 700 ಹಾಗೂ ಪುರಸಭಾ ಚುನಾವಣೆಯಲ್ಲಿ 1,500 ಮತಗಳನ್ನು ಹೆಚ್ಚು ಪಡೆದಿದೆ. ಜನರ ಮೌಲ್ಯಮಾಪನಕ್ಕೆ ಇನ್ನಷ್ಟು ಸಮಯವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿಕುಂದರ್, ಸುದೀಪ್ ಶೆಟ್ಟಿ ಮಾಣಿ, ಮಾಜಿ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಅಲಿ, ಹಿರಿಯರಾದ ಬಿ.ಎಚ್.ಖಾದರ್, ಬಿ.ಕೆ.ಇದ್ದಿನಬ್ಬ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಜಿಪಂ ಸದಸ್ಯ ಪದ್ಮಶೇಖರ ಜೈನ್, ಪಕ್ಷದ ಮುಖಂಡರಾದ  ಪದ್ಮನಾಭ ರೈ, ಸಂಜೀವ ಪೂಜಾರಿ, ಜನಾರ್ದನ ಚಂಡ್ತಿಮಾರ್ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X