Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರತ್ಕಲ್ ಟೋಲ್ ರದ್ದತಿ: ಕೇಂದ್ರಕ್ಕೆ...

ಸುರತ್ಕಲ್ ಟೋಲ್ ರದ್ದತಿ: ಕೇಂದ್ರಕ್ಕೆ ಶಿಫಾರಸು ಮಾಡಲು ಎನ್‌ಎಚ್‌ಎಐ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ2 Nov 2018 8:04 PM IST
share
ಸುರತ್ಕಲ್ ಟೋಲ್ ರದ್ದತಿ: ಕೇಂದ್ರಕ್ಕೆ ಶಿಫಾರಸು ಮಾಡಲು ಎನ್‌ಎಚ್‌ಎಐ ಒಪ್ಪಿಗೆ

ಮಂಗಳೂರು, ನ.2: ಸುರತ್ಕಲ್ ಟೋಲ್ ಕೇಂದ್ರವನ್ನು ರದ್ದುಪಡಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವಾಲಯಕ್ಕೆ ಶಿಫಾರಸು ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಮಂಗಳೂರು ಯೋಜನಾ ನಿರ್ದೇಶಕ ಸಾಮ್ಸನ್ ವಿಜಯ ಕುಮಾರ್ ಒಪ್ಪಿಗೆ ನೀಡಿದ್ದಾರೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಟೋಲ್‌ಗೇಟ್ ವಿರೋಧಿ ಹೋರಾಟಗಾರರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರವನ್ನು ತಕ್ಷಣ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಖಾದರ್ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಯೋಜನಾ ನಿರ್ದೇಶಕ ಸಾಮ್ಸನ್ ವಿಜಯ ಕುಮಾರ್ ಇಂದೇ ಪತ್ರ ಬರೆಯುವುದಾಗಿ ಸ್ಪಷ್ಪಪಡಿಸಿದರು.

ಸುರತ್ಕಲ್ ಸಮೀಪದ ಮುಕ್ಕ ಟೋಲ್ ಕೇಂದ್ರವನ್ನು ರದ್ದುಪಡಿಸುವಂತೆ ವರ್ಷದ ಹಿಂದೆಯೇ ರಾಜ್ಯ ಸರಕಾರಕ್ಕೆ ಪ್ರಸ್ತಾಪ ಮಾಡಲಾಗಿದೆ. ಪ್ರತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯ ಸರಕಾರ ಕೂಡ ಟೋಲ್ ರದ್ದುಪಡಿಸಲು ಒಪ್ಪಿಗೆ ನೀಡಿದೆ. ಇದೇ ಪರಿಸ್ಥಿತಿಯನ್ನು ಇನ್ನಷ್ಟು ಸಮಯ ಮುಂದುವರಿಯಲು ಅವಕಾಶ ನೀಡಬಾರದು. ತಕ್ಷಣ ಟೋಲ್ ಸಮಸ್ಯೆ ನಿಭಾಯಿಸಬೇಕು ಎಂದು ಸಚಿವ ಖಾದರ್ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಸುರತ್ಕಲ್‌ನಲ್ಲಿ 2015ರಲ್ಲಿ ತಾತ್ಕಾಲಿಕ ನೆಲೆಯಲ್ಲಿ ಟೋಲ್ ಸಂಗ್ರಹ ಕೇಂದ್ರವನ್ನು ತೆರೆಯಲಾಯಿತು. ವರ್ಷದ ಹಿಂದೆಯೇ ಸುರತ್ಕಲ್ ಟೋಲ್ ಕೇಂದ್ರವನ್ನು ಹೆಜಮಾಡಿ ಟೋಲ್ ಕೇಂದ್ರದ ಜತೆ ವಿಲೀನಗೊಳಿಸುವ ಪ್ರಸ್ತಾಪವನ್ನು ಎನ್‌ಎಚ್‌ಎಐ ಮಂಡಿಸಿತ್ತು. ಇದೀಗ ಪ್ರತಿ 6 ತಿಂಗಳಿಗೊಮ್ಮೆ ಟೋಲ್ ಸಂಗ್ರಹದ ಗುತ್ತಿಗೆಯನ್ನು ನವೀಕರಿಸಲಾಗುತ್ತಿದೆ. ತಾನು ಹೇಳಿದ ಮಾತಿಗೆ ಎನ್‌ಎಚ್‌ಎಐ ಬದ್ದವಾಗಿಲ್ಲ. ಹಳೆ ಗುತ್ತಿಗೆದಾರರೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂದು ಟೋಲ್‌ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.

ಹೆಜಮಾಡಿ ಟೋಲ್ ಕೇಂದ್ರದ ಜತೆ ಸುರತ್ಕಲ್ ಟೋಲ್ ಕೇಂದ್ರ ವಿಲೀನಗೊಳಿಸುವ ಪ್ರಸ್ತಾಪ ಬೇಡ. ನಮ್ಮದೇನಿದ್ದರೂ ಸುರತ್ಕಲ್ ಟೋಲ್ ರದ್ದುಪಡಿಸಬೇಕೆಂಬ ಸಿಂಗಲ್ ಅಜೆಂಡಾ (ಕಾರ್ಯಸೂಚಿ)ಬೇಡಿಕೆಯಾಗಿರಲಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

ಈ ಸಂದರ್ಭ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಮಿಥುನ್ ರೈ, ಕಾರ್ಪೊರೇಟರ್ ಪುರುಷೋತ್ತಮ ಚಿತ್ರಾಪುರ, ದಯಾನಂದ ಶೆಟ್ಟಿ, ರೇವತಿ, ಬಿ.ಕೆ. ಇಮ್ತಿಯಾಝ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X