Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಭಕ್ಕಾಗಿ ಅಂಬೇಡ್ಕರ್ ಹೆಸರು ಬಳಕೆ...

ಲಾಭಕ್ಕಾಗಿ ಅಂಬೇಡ್ಕರ್ ಹೆಸರು ಬಳಕೆ ಸಲ್ಲ: ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ2 Nov 2018 9:22 PM IST
share
ಲಾಭಕ್ಕಾಗಿ ಅಂಬೇಡ್ಕರ್ ಹೆಸರು ಬಳಕೆ ಸಲ್ಲ: ಬರಗೂರು ರಾಮಚಂದ್ರಪ್ಪ

ಬೆಂಗಳೂರು, ನ.2: ಯಾವುದೇ ತತ್ವ ಸಿದ್ಧಾಂತ ಇಲ್ಲದವರೂ ಅಂಬೇಡ್ಕರ್ ಅವರ ಹೆಸರನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ನೈತಿಕವಾಗಿ ಅವರನ್ನು ಗೌರವಿಸಬೇಕಾದರೆ, ಸಾಮಾಜಿಕ ಪ್ರಜಾಪ್ರಭುತ್ವದ ಲಕ್ಷಣಗಳಾದ ಸ್ವಾತಂತ್ರ, ಸಹಿಷ್ಣುತೆ ಹಾಗೂ ಸಹೋದರತ್ವವನ್ನು ರೂಢಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. 

ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್‌ನ ಅಕ್ಕಮಹಾದೇವಿ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಗಳು ಹಾಗೂ ಇತರ ಮಹಾಪುರುಷರ ತತ್ವಗಳ ತೌಲನಿಕ ಅಧ್ಯಯನ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆ, ಅನಿಷ್ಟ ಪದ್ಧತಿಗಳು, ಮೂಢನಂಬಿಕೆಗಳನ್ನು ಹೋಗಲಾಡಿಸುವುದಕ್ಕಾಗಿ ಸಂವಿಧಾನವನ್ನು ರಚಿಸಿದರು. ಆದರೆ, ಇಂದು ತತ್ವ, ಸಿದ್ಧಾಂತಗಳು ಇಲ್ಲದವರೂ ಅಂಬೇಡ್ಕರ್ ಅವರ ಹೆಸರನ್ನು ಹೇಳಿಕೊಂಡು ಲಾಭ ಮಾಡಿಕೊಳ್ಳುತ್ತಿದ್ದು, ಜನರು ಇಂಥವರಿಗೆ ಮಣೆ ಹಾಕದೆ, ಸಾಮಾಜಿಕ ಪ್ರಜಾಪ್ರಭುತ್ವದ ಕಡೆಗೆ ಗಮನ ಹರಿಸಬೇಕೆಂದು ಹೇಳಿದರು.

ಅಂಬೇಡ್ಕರ್ ಅವರು ಯಾವುದೇ ನಿರ್ದಿಷ್ಟ ಸಮುದಾಯ ಅಥವಾ ವರ್ಗಕ್ಕೆ ಸೇರದ ಪ್ರತಿಭಾನ್ವಿತ ದೇಶಪ್ರೇಮಿ. ಸಾರ್ವಜನಿಕ ಆಸ್ತಿ, ಅಸ್ಪಶ್ಯತೆಯ ನೋವು ಅನುಭವಿಸಿ ಅದನ್ನೇ ತಮ್ಮ ಶಕ್ತಿಯನ್ನಾಗಿ ಮಾಡಿಕೊಂಡ ಅಂಬೇಡ್ಕರ್ ಅವರನ್ನು, ಒಬ್ಬ ಸುಶಿಕ್ಷಿತ, ಹೋರಾಟಗಾರ, ಪತ್ರಕರ್ತ, ವಿಮೋಚನಾವಾದಿ, ಸಂವಿಧಾನ ರಚನೆಕಾರ ಈ ಎಲ್ಲ ನೆಲೆಯಲ್ಲಿ ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ನುಡಿದರು.

ಅಂಬೇಡ್ಕರ್ ಅವರಿಗೆ ಮಾರ್ಕ್ಸ್ ಅಥವಾ ಕಮ್ಯುನಿಸ್ಟ್‌ರ ನಡವಳಿಕೆ ಬಗ್ಗೆ ವಿರೋಧ ಇತ್ತೇ ಹೊರತು ಅವರ ಆರ್ಥಿಕ ನೀತಿಗಳ ಬಗ್ಗೆ ಇರಲಿಲ್ಲ. ಅದೇ ರೀತಿ, ಗಾಂಧಿಯವರ ಬಗ್ಗೆಯೂ ವೈಯಕ್ತಿಕ ದ್ವೇಷ ಅಂಬೇಡ್ಕರ್ ಅವರಿಗೆ ಇರಲಿಲ್ಲ. ಯಾರೇ ಇರಲಿ ಸೃಜನಶೀಲ ಸಿದ್ಧಾಂತ ಬಿಡಬಾರದು ಎಂದು ತಿಳಿಸಿದರು. ಮಹಾತ್ಮಗಾಂಧೀಜಿಯವರು ಹಿಂದೂ ಧರ್ಮದ ಒಳಗಿನಿಂದಲೇ ತಮ್ಮ ಚಿಂತನೆಯನ್ನು ಪ್ರತಿಪಾದಿಸಿದ್ದರು. ಅಂಬೇಡ್ಕರ್ ಅವರು ಹಿಂದೂ ಧರ್ಮದ ಹೊರಗಿನಿಂದ ತಮ್ಮ ಚಿಂತನೆಯನ್ನು ಪ್ರತಿಪಾದಿಸಿದರು. ಅಂಬೇಡ್ಕರ್ ಅವರದು ಸಾಮಾಜಿಕ ಪರಿಭಾಷೆ, ಗಾಂಧೀಜಿಯವರದು ಆಧ್ಯಾತ್ಮಿಕ ಪರಿಭಾಷೆ ಎಂದು ಪ್ರತಿಪಾದಿಸಿದರು. 

ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಗುಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಭಾರತ ಕಂಡ ಅಪರೂಪದ ವ್ಯಕ್ತಿಯಾಗಿದ್ದ ಡಾ.ಅಂಬೇಡ್ಕರ್ ಆಗಿನ ಸಂದರ್ಭದಲ್ಲೂ ಸಾಕಷ್ಟು ಅಧ್ಯಯನ ಮಾಡಿ ಮೇಲ್ಮಟ್ಟಕ್ಕೆ ಬಂದವರಾಗಿದ್ದಾರೆ. ಅವರ ವ್ಯಕ್ತಿತ್ವ, ಬದುಕು, ಬೆಳವಣಿಗೆ ಯುವ ಪೀಳಿಗೆಗೆ ಯಾವತ್ತೂ ದಾರಿ ದೀಪ ಎಂದು ನುಡಿದರು. ಕಾರ್ಯಕ್ರಮದಲ್ಲಿ ಸಂಸ್ಕೃತ ವಿವಿ ಕುಲಪತಿ ಪದ್ಮಾಶೇಖರ್, ಡಾ.ನಂಜುಂಡಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಛಲವಾದಿ, ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಸಂತೋಷ್ ಹಾನಗಲ್ ಉಪಸ್ಥಿತರಿದ್ದರು. 

‘ರಾಜಕಾರಣದಲ್ಲಿ ಬೌದ್ಧಿಕ ಕೊರತೆ ಮಾತ್ರವಲ್ಲದೆ, ಭಾಷಾ ಭ್ರಷ್ಟಾಚಾರತೆಯೂ ಹೆಚ್ಚಾಗುತ್ತಿದೆ. ಟೀಕೆಗಳಿಗೆ ರಾಜಕಾರಣ ಸೀಮಿತವಾದರೆ, ಮುಂದಿನ ದಿನಗಳಲ್ಲಿ ಅವರಿಂದ ಈ ಸಮಾಜ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ.’

-ಡಾ.ಬರಗೂರು ರಾಮಚಂದ್ರಪ್ಪ, ಬಂಡಾಯ ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X