Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಿನ್ನದ ಸರ ಕಳವು ಪ್ರಕರಣ: ಮಹಿಳೆ ಸೆರೆ

ಚಿನ್ನದ ಸರ ಕಳವು ಪ್ರಕರಣ: ಮಹಿಳೆ ಸೆರೆ

ವಾರ್ತಾಭಾರತಿವಾರ್ತಾಭಾರತಿ2 Nov 2018 9:59 PM IST
share
ಚಿನ್ನದ ಸರ ಕಳವು ಪ್ರಕರಣ: ಮಹಿಳೆ ಸೆರೆ

ಬೆಂಗಳೂರು, ನ.2: ನಕಲಿ ಚಿನ್ನದ ಸರ ತೋರಿಸಿ, ಅಸಲಿ ಚಿನ್ನದ ಸರ ಕಳವು ಮಾಡಿದ್ದ ಆರೋಪದಡಿ ಮಹಿಳೆಯೊಬ್ಬಳನ್ನು ಬಂಧಿಸಿರುವ ಕೋರಮಂಗಳ ಠಾಣಾ ಪೊಲೀಸರು, 5 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಶಿವಾಜಿನಗರದ ತಿಮ್ಮಯ್ಯ ರಸ್ತೆಯ ನಿವಾಸಿ ಶಾಂತಿ (38) ಬಂಧಿತ ಆರೋಪಿ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.

ಶ್ರೀಮಂತರ ಮನೆಗಳಲ್ಲಿ ಮನೆಕೆಲಸಕ್ಕೆ ಸೇರಿಕೊಂಡು ನಂಬಿಕೆ ಗಳಿಸಿ, ಕಳವು ಮಾಡಿದ ಆರೋಪದಡಿ ಆರೋಪಿ ಶಾಂತಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಮೊದಲ ಪತಿ ಮೃತಪಟ್ಟ ನಂತರ, ವಿಲಾಸಿ ಜೀವನಕ್ಕೆ ಮಾರುಹೋಗಿದ್ದ ಆರೋಪಿಯು ಮನೆಕಳವು ಮಾಡುತ್ತಿದ್ದು, ಇತ್ತೀಚೆಗೆ ಆಂಧ್ರಪ್ರದೇಶ ಮೂಲದ ರವಿ ಎಂಬಾತನ ಪರಿಚಯ ಮಾಡಿಕೊಂಡು ಪ್ರೀತಿಸಿ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ.

ಕೋರಮಂಗಲದಲ್ಲಿ ಮನೆ ಮಾಡಿಕೊಂಡಿದ್ದ ಆರೋಪಿಯು ಜಿಮ್‌ಗಳಲ್ಲಿ, ಅಪಾರ್ಟ್‌ಮೆಂಟ್‌ಗಳಲ್ಲಿ ಮನೆಕೆಲಸ ಕೇಳುವ ನೆಪದಲ್ಲಿ ಹೋಗುತ್ತಿದ್ದಳು. ಈ ವೇಳೆ ಮನೆಗಳ ಬಾಗಿಲು ತೆಗೆದಿದ್ದರೆ, ಕ್ಷಣಾರ್ಧದಲ್ಲಿ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿ ನಾಪತ್ತೆಯಾಗುತ್ತಿದ್ದಳು. ಕೋರಮಂಗಲದ ಅಪಾರ್ಟ್‌ಮೆಂಟ್ ಒಂದರಲ್ಲಿ ಮನೆಗೆಲಸಕ್ಕೆ ಸೇರಿಕೊಂಡು ಮಾಲಕರ ನಂಬಿಕೆ ಗಳಿಸಿ, ಅವರು ಇಟ್ಟಿರುವ ಚಿನ್ನಾಭರಣಗಳನ್ನು ಗಮನಿಸಿ, ಅವುಗಳಲ್ಲಿ ದುಬಾರಿ ಚಿನ್ನದ ಸರ ಕಳಗೆ ಸಂಚು ರೂಪಿಸಿದ್ದಳು ಎನ್ನಲಾಗಿದೆ.

ನಕಲಿ ಸರ ಬೆಲೆ ಬಾಳುವ ಚಿನ್ನದ ಸರವನ್ನು ಹೋಲುವಂತೆ ನಕಲಿ ಚಿನ್ನದ ಸರವನ್ನು ಶಿವಾಜಿನಗರದಲ್ಲಿ ಮಾಡಿಸಿಕೊಂಡು ಮನೆಯ ಮಾಲಕರಿಗೆ ತಿಳಿಯದಂತೆ, ನಕಲಿ ಸರವನ್ನಿಟ್ಟು, ಅಸಲಿ ಸರವನ್ನು ಕಳವು ಮಾಡಿ, ಅದನ್ನು ಗಿರವಿ ಅಂಗಡಿಯಲ್ಲಿ ಮಾರಾಟ ಮಾಡಿ ಅದರಿಂದ ಬಂದ ಹಣದಿಂದ ವಿಲಾಸಿ ಜೀವನ ನಡೆಸುತ್ತಿದ್ದ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಡಾ. ಬೋರಲಿಂಗಯ್ಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X