Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಜೇನು ನೊಣಗಳಿಗೆ 'ಥಾಯಿ ಶ್ಯಾಕ್...

ಮಡಿಕೇರಿ: ಜೇನು ನೊಣಗಳಿಗೆ 'ಥಾಯಿ ಶ್ಯಾಕ್ ಬ್ರೂಡ್' ಕಾಯಿಲೆ; ನಿಯಂತ್ರಣ ಕ್ರಮಗಳಿಗೆ ಸಲಹೆ

ವಾರ್ತಾಭಾರತಿವಾರ್ತಾಭಾರತಿ2 Nov 2018 11:55 PM IST
share
ಮಡಿಕೇರಿ: ಜೇನು ನೊಣಗಳಿಗೆ ಥಾಯಿ ಶ್ಯಾಕ್ ಬ್ರೂಡ್ ಕಾಯಿಲೆ; ನಿಯಂತ್ರಣ ಕ್ರಮಗಳಿಗೆ ಸಲಹೆ

ಮಡಿಕೇರಿ ನ.2 :ಪ್ರಕೃತಿ ವಿಕೋಪದ ಪರಿಣಾಮ ಜೇನು ನೊಣಗಳಿಗೆ ನೈಸರ್ಗಿಕ ಅಹಾರದ ಕೊರತೆ ಹಾಗೂ ಹೆಚ್ಚಾದ ಚಳಿಯಿಂದ ಕೊಡಗು ಜಿಲ್ಲೆಯಲ್ಲಿ ಜೇನು ಹುಳ ಕುಟುಂಬಗಳಲ್ಲಿ ಥಾಯಿ ಶ್ಯಾಕ್ ಬ್ರೂಡ್ ಕಾಯಿಲೆ ಕಾಣಿಸಿಕೊಂಡಿದ್ದು, ಜಿಲ್ಲೆಯ ಕೃಷಿ ಸಮಸ್ಯೆಗಳಿಗೆ ಹೊಸದೊಂದು ಸಮಸ್ಯೆ ಸೇರಿಕೊಂಡಂತಾಗಿದೆ.

ಜೇನುಗಾರಿಕೆ ತೋಟಗಾರಿಕೆ ಇಲಾಖೆಯ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದು. ಆಧುನಿಕ ಕೃಷಿ ಪದ್ಧ್ದತಿಯಲ್ಲಿ ಅಂತರಾಷ್ಟೀಯ ಮಾರುಕಟ್ಟೆಗೆ ಅನುಗುಣವಾಗಿ, ಗುಣಮಟ್ಟದ ಇಳುವರಿಯೊಂದಿಗೆ ಅತಿ ಹೆಚ್ಚು ಆದಾಯ ಪಡೆದು ಲಾಭಗಳಿಸಲು ಪರಾಗಸ್ಪರ್ಶ ಕ್ರಿಯೆ ಅತಿ ಮುಖ್ಯವಾಗಿದೆ. ಪ್ರಪಂಚದಲ್ಲಿ ನಡೆಯುವ ಪರಾಗಸ್ಪರ್ಶ ಕ್ರಿಯೆಗಳಲ್ಲಿ ಜೇನು ನೊಣಗಳ ಪಾತ್ರ ಪ್ರಮುಖವಾಗಿದ್ದು, ಇವುಗಳ ಅಭಿವೃದ್ದಿ ಹಾಗೂ ಸಂರಕ್ಷಣೆ ಆಗಬೇಕಾಗಿದೆ.

ರೋಗ ನಿಯಂತ್ರಣ ಕ್ರಮಗಳು
ಥಾಯಿ ಶ್ಯಾಕ್ ಬ್ರೂಡ್ ರೋಗ ವೈರಸ್‍ನಿಂದ ಬರುವ ರೋಗವಾಗಿರುವುದರಿಂದ ನಿಯಂತ್ರಣ ಸ್ವಲ್ಪ ಕಷ್ಟ. ಆದರೂ ಸಂಶೋಧಕರು ಹಾಗೂ ರೈತರ ಸತತ ಪ್ರಯತ್ನ ಹಾಗೂ ಸಹಕಾರದಿಂದ ಕೃಷಿ ಪದ್ಧತಿ ಅಳವಡಿಕೆಯಲ್ಲಿ ಬದಲಾವಣೆ ಮಾಡಿಕೊಂಡು ವೈಜ್ಞಾನಿಕ ಪದ್ಧ್ದತಿ ಅಳವಡಿಸುವುದರೊಂದಿಗೆ ನಿಯಂತ್ರಿಸಬಹುದು ಎಂದು ತೋಟಗಾರಿಕೆ ಇಲಾಖೆ ಮಡಿಕೇರಿಯ ಹಾರ್ಟಿ ಕ್ಲಿನಿಕ್ ಅಧಿಕಾರಿಗಳು ಹಾಗೂ ಜೇನು ಕೃಷಿ ಪ್ರದರ್ಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯವಾಗಿ ಯಾವುದೇ ರೀತಿಯ ರೋಗ, ಅದರಲ್ಲಿಯೂ ವೈರಸ್ ನಿಂದ ಬರುವ ರೋಗ ನಿಯಂತ್ರಿಸಲು ಶುದ್ಧತೆ ಅತೀ ಮುಖ್ಯ. ಆದ್ದರಿಂದ ಜೇನು ಗೂಡಿನ ಹಾಗೂ ಸುತ್ತಲ್ಲಿನ ವಾತವರಣದ ಶುದ್ಧತೆ ಕಾಪಾಡುವುದು, ಕಾಯಿಲೆ ಬಂದಿರುವ ಭಾಗವನ್ನು ಕತ್ತರಿಸಿ ಬೇರ್ಪಡಿಸಿ ಸುಡುವುದು, ಕಾಯಿಲೆ ಬಂದ ಎರಿ ಇರುವ ಪೆಟ್ಟಿಗೆಯಿಂದ ಜೇನು ಕುಟುಂಬವನ್ನು ಬೇರೆ ಪೆಟ್ಟಿಗೆಗೆ ವರ್ಗಾಯಿಸಿ ಅದನ್ನು ಶುದ್ಧ್ದ/ ಪ್ರಶಾಂತ ವಾತಾವರಣದಲ್ಲಿ ಇಡುವುದು, ಜೇನು ಕುಟುಂಬಕ್ಕೆ  ಅಹಾರದ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು. ಹೂ ಕಡಿಮೆಯಾಗಿ ಮಕರಂದ ಕೊರತೆ ಇದ್ದಲ್ಲಿ ಕೃತಕ ಅಹಾರ ಕೊಡುವುದು, ಕಾಯಿಲೆ ಬಂದ ಜೇನು ಪೆಟ್ಟಿಗೆಯಲ್ಲಿನ ಕುಟುಂಬ ಹಾಗೂ ಭಾಗವನ್ನು ಬೇರೆ ಕಡೆ ಬದಲಾಯಿಸಿದ ನಂತರ ಖಾಲಿಯಾದ ಪೆಟ್ಟಗೆಯನ್ನು ಬಿಸಿ ನೀರಿನಿಂದ ತೊಳೆದು ಸಂರಕ್ಷಿಸಬೇಕು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಮಡಿಕೇರಿಯ ಹಾರ್ಟಿ ಕ್ಲಿನಿಕ್ 9448401087 ಹಾಗೂ ಜೇನು ಕೃಷಿ ಪ್ರದರ್ಶಕರು 9449075077 ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X