Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಳವು ಪ್ರಕರಣ: 9 ಜನರ ಬಂಧನ, 2.4 ಕೋಟಿ...

ಕಳವು ಪ್ರಕರಣ: 9 ಜನರ ಬಂಧನ, 2.4 ಕೋಟಿ ರೂ. ಮೌಲ್ಯದ ಮಾಲು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ3 Nov 2018 7:16 PM IST
share
ಕಳವು ಪ್ರಕರಣ: 9 ಜನರ ಬಂಧನ, 2.4 ಕೋಟಿ ರೂ. ಮೌಲ್ಯದ ಮಾಲು ಜಪ್ತಿ

ಬೆಂಗಳೂರು, ನ.3: ಕಳವು ಇನ್ನಿತರೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಕಾರ್ಯಾಚರಣೆ ನಡೆಸಿರುವ ಪಶ್ಚಿಮ ವಿಭಾಗದ ಪೊಲೀಸರು 9 ಜನರನ್ನು ಬಂಧಿಸಿ, 2.4 ಕೋಟಿ ರೂ. ಮೌಲ್ಯದ ಮಾಲು ಜಪ್ತಿ ಮಾಡಿದ್ದಾರೆ.

ಆರೋಪಿಗಳಿಂದ, 801 ಗ್ರಾಂ. ಚಿನ್ನಾಭರಣ, 31 ಕಾರುಗಳು, ಒಂದು ಟೆಂಪೋ ಟ್ರಾವಲರ್, 3 ಬೈಕ್ ಹಾಗೂ 2 ಎಲ್‌ಇಡಿ ಟಿವಿಗಳನ್ನು ಜಪ್ತಿ ಮಾಡಿ, 21 ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿನ್ನಾಭರಣ ಜಪ್ತಿ: ಕಳವು ಪ್ರಕರಣ ಸಂಬಂಧ ಐವರನ್ನು ಬಂಧಿಸಿರುವ ಚಂದ್ರಾ ಲೇಔಟ್ ಠಾಣಾ ಪೊಲೀಸರು, ಚಿನ್ನಾಭರಣ ಸೇರಿ 40 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ ಮಾಡಿದ್ದಾರೆ.

ಕೋಲಾರದ ಮಾಲೂರಿನ ವಾಟರ್ ಟ್ಯಾಂಕ್ ಹತ್ತಿರದ ಮಾರಮ್ಮ ದೇವಸ್ಥಾನ ರಸ್ತೆ 2ನೆ ಕ್ರಾಸ್ ನಿವಾಸಿ ಸುಬ್ರಮಣಿ(32), ಮಂಡ್ಯ ತಾಲೂಕಿನ ದುದ್ದ ಹೋಬಳಿಯ ಹೊಳಲು ಗ್ರಾಮ ನಿವಾಸಿ ರಾಜ(31), ಮಂಡ್ಯ ಜಿಲ್ಲೆಯ ದೇವಲಾಪುರ ಹೋಬಳಿಯ ಕೋಟೆಬೆಟ್ಟ ಗ್ರಾಮದ ನಿವಾಸಿ ಶ್ರೀಕಾಂತ್(26), ಲಗ್ಗೆರೆಯ ಪೊಲೀಸ್ ಚೌಕಿ ಹತ್ತಿರದ ಚೌಡೇಶ್ವರಿನಗರ 3ನೆ ಕ್ರಾಸ್ ನಿವಾಸಿ ಅಜಯ್(32), ಆನೇಕಲ್ ನಿವಾಸಿ ಗಿರೀಶ್(34) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಚಂದ್ರಾ ಲೇಔಟ್, ತ್ಯಾಗರಾಜನಗರ, ಅತ್ತಿಬೆಲೆ, ಸೂರ್ಯನಗರ, ಜ್ಞಾನಭಾರತಿ, ರಾಜಾಜಿನಗರ, ಮಾದನಾಯಕನಹಳ್ಳಿ, ಯಶವಂತಪುರ, ಪುಟ್ಟೇನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಇವರೆಲ್ಲಾ ಜೈಲು ಶಿಕ್ಷೆ ಅನುಭವಿಸಿ ಇತ್ತೀಚಿಗೆ ಬಿಡುಗಡೆಯಾಗಿದ್ದರು. ಪುನಃ ಇದೇ ಪ್ರವೃತ್ತಿಯನ್ನು ಮುಂದುವರಿಸಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಕುಣಿಗಲ್ ಪೊಲೀಸ್ ಠಾಣೆಯ ಒಂದು ದರೋಡೆ, ಚಂದ್ರಾ ಲೇಔಟ್‌ನ 11 ಕನ್ನಗಳವು, ಒಂದು ಮನೆಗಳವು, ಹುಳಿಮಾವು ಠಾಣೆಯ ಒಂದು ಕನ್ನಗಳವು, ಸೇರಿ ಒಟ್ಟು 20 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

23 ಕಾರು ವಶಕ್ಕೆ: ಬಾಡಿಗೆ ನೀಡುವುದಾಗಿ ವಿವಿಧ ನಮೂನೆಯ 23 ಕಾರುಗಳು ಹಾಗೂ ಒಂದು ಟೆಂಪೋ ಟ್ರಾವಲರ್ ವಾಹನ ಪಡೆದು, ಬಾಡಿಗೆಯನ್ನೂ ನೀಡದೆ, ವಾಹನಗಳನ್ನೂ ಹಿಂದಿರುಗಿಸದೆ ವಂಚಿಸಿದ್ದ ಆರೋಪದಡಿ ಇಲ್ಲಿನ ಜ್ಞಾನಭಾರತಿ ಠಾಣಾ ಪೊಲಿಸರು ವ್ಯಕ್ತಿಯೋರ್ವನನ್ನು ಬಂಧಿಸಿ 1.50 ಕೋಟಿ ರೂ.ಬೆಲೆಬಾಳುವ 23 ಕಾರುಗಳು ಹಾಗೂ ಒಂದು ಟೆಂಪೋ ಟ್ರಾವಲರ್ ವಾಹನವನ್ನು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

ಮಂಡ್ಯ ತಾಲೂಕಿನ ದುದ್ದ ಹೋಬಳಿಯ ಗಾಣದಾಳು ಗ್ರಾಮದ ನಿವಾಸಿ ಚೇತನ್ ಕುಮಾರ್(25) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಕಾರುಗಳು ಮತ್ತು ಟೆಂಪೋ ಪಡೆದು ವಂಚಿಸಿದ್ದ ಬಗ್ಗೆ ಸುನೀಲ್ ಕುಮಾರ್ ನೀಡಿದ ದೂರಿನ ಆಧಾರದಲ್ಲಿ ಆರೋಪಿಯನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಚೇತನ್ ಕುಮಾರ್, ಕಲಾಸಿಪಾಳ್ಯದ ರುಕ್ಕಮ್ಮ ಟೂರ್ಸ್‌ ಆಂಡ್ ಟ್ರಾವೆಲ್ಸ್‌ನಲ್ಲಿ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಮೂವರ ಸೆರೆ: ಓಎಲ್‌ಎಕ್ಸ್‌ನಲ್ಲಿ ಜಾಹೀರಾತು ನೀಡಿ ಕಾರುಗಳನ್ನು ಬಾಡಿಗೆ ಪಡೆದು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಕೆ.ಪಿ.ಅಗ್ರಹಾರ ಪೊಲೀಸರು, 50 ಲಕ್ಷ ರೂ. ಬೆಲೆ ಬಾಳುವ 6 ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿದ್ದಾರೆ.

ಕೆ.ಜಿ.ಹಳ್ಳಿಯ ವೆಂಕಟೇಶ್‌ಪುರ ಬಳಿಯ ಕುಶಾಲನಗರದ ನಿವಾಸಿ ನಾಸಿರ್ ಅಹ್ಮದ್ (30), ದಾವಣಗೆರೆಯ ದೇವರಾಜನಗರ ಕ್ವಾಟ್ರಸ್ ನಿವಾಸಿ ಇಮ್ತಿಯಾಝ್ (38) ಹಾಗೂ ಆರ್.ಟಿ.ನಗರ ಕಾವಲ್‌ಭೈರಸಂದ್ರದ ಇಮ್ಮಾಮ್ ಖಾನ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಓಎಲ್‌ಎಕ್ಸ್‌ನಲ್ಲಿ ಜಾಹೀರಾತು ನೀಡಿ ಕಾರುಗಳನ್ನು ಬಾಡಿಗೆಗೆ ಪಡೆದುಕೊಂಡು ಬಾಡಿಗೆ ನೀಡದೆ, ವಾಹನಗಳನ್ನೂ ಹಿಂದಿರುಗಿಸದೆ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇವರ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ.

ಆರೋಪಿಗಳು ಕಾರುಗಳನ್ನು ಶಿವಮೊಗ್ಗದ ಆದಿಲ್ ಅಹ್ಮದ್ ಮತ್ತು ಚೆನ್ನೈನ ಸುಧಾಕರ್ ಎಂಬವರಿಗೆ ಮಾರಾಟ ಮಾಡಿದ್ದರು. ಆರೋಪಿಗಳು ನೀಡಿದ್ದ ಮಾಹಿತಿ ಮೇರೆಗೆ ಸುಮಾರು 50 ಲಕ್ಷ ರೂ. ಮೌಲ್ಯದ 6 ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X