Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಲಭೂತ ಸೌಕರ್ಯ ಕಲ್ಪಿಸಲು 20 ಕೋ.ರೂ....

ಮೂಲಭೂತ ಸೌಕರ್ಯ ಕಲ್ಪಿಸಲು 20 ಕೋ.ರೂ. ಮಂಜೂರು: ಸಚಿವ ಕೆ.ಜೆ.ಜಾರ್ಜ್

ಬೈಕಂಪಾಡಿ ಕೈಗಾರಿಕಾ ವಲಯ

ವಾರ್ತಾಭಾರತಿವಾರ್ತಾಭಾರತಿ3 Nov 2018 8:27 PM IST
share
ಮೂಲಭೂತ ಸೌಕರ್ಯ ಕಲ್ಪಿಸಲು 20 ಕೋ.ರೂ. ಮಂಜೂರು: ಸಚಿವ ಕೆ.ಜೆ.ಜಾರ್ಜ್

ಮಂಗಳೂರು, ನ.3: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು 20 ಕೋ.ರೂ. ಮಂಜೂರು ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಕ್ಕರೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಬೈಕಂಪಾಡಿಯ ಕೆನರಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು ಸಂಘವು ಮೂಲಭೂತ ಅಭಿವೃದ್ಧಿಗಾಗಿ 59 ಕೋ.ರೂ.ನ ಬೇಡಿಕೆಯನ್ನು ಮುಂದಿಟ್ಟಿವೆ. ಈ ಹಿಂದಿನ ಸರಕಾರದಲ್ಲಿ ಬೃಹತ್ ಕೈಗಾರಿಕಾ ಸಚಿವರಾಗಿದ್ದ ಆರ್.ವಿ.ದೇಶಪಾಂಡೆ ಅವರು 10 ಕೋ.ರೂ. ಬಿಡುಗಡೆಗೊಳಿಸಿದ್ದಾರೆ. ಇದೀಗ ರಸ್ತೆ, ಒಳಚರಂಡಿ ಸಹಿತ ವಿವಿಧ ಅಭಿವೃದ್ಧಿಗಾಗಿ 20 ಕೋ.ರೂ. ಅನುದಾನ ಬಿಡುಗಡೆಗೊಳಿಸಲಾಗುವುದು ಎಂದರು.

ಪ್ಲಾಸ್ಟಿಕ್ ಪಾರ್ಕ್ ವಿಸ್ತೃತ ಯೋಜನಾ ವರದಿ ಸಲ್ಲಿಕೆ

ಗಂಜಿಮಠದಲ್ಲಿ 100 ಎಕರೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್‌ಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು ವಾರದೊಳಗೆ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಕೆ.ಜೆ.ಜಾರ್ಜ್ ನುಡಿದರು.

ಲಾಜಿಸ್ಟಿಕ್ ಪಾರ್ಕ್‌ಗೆ ಜಾಗ ಗುರುತು: ಲಾಜಿಸ್ಟಿಕ್ ಪಾರ್ಕ್‌ಗೆ ಎನ್‌ಎಂಪಿಟಿ 5 ಎಕರೆ ಜಾಗ ನೀಡುವುದಾಗಿ ಹೇಳಿದೆ. ಇನ್ನೂ 5 ಎಕರೆ ಜಾಗ ಬೇಕಾಗಿದ್ದು, ಜೆಸ್ಕೊ ಜಮೀನಿನಲ್ಲಿ ಸ್ಥಾಪಿಸಲು ಯಾರಾದರೂ ಮುಂದಾದರೆ ಅಲ್ಲೂ ಜಾಗ ನೀಡಲಾಗುವುದು ಎಂದು ಸಚಿವ ಜಾರ್ಜ್ ಹೇಳಿದರು.

ಜೆಸ್ಕೋ ಜಮೀನು ಮರುಸ್ವಾಧೀನ: 30 ವರ್ಷಗಳ ಹಿಂದೆ ಜೆಸ್ಕೊ ಕಂಪೆನಿಗಾಗಿ ಜಮೀನು ಸ್ವಾಧೀನ ಮಾಡಿದ್ದರೂ ಕೂಡಾ ಕಂಪೆನಿಯು ಯಾವುದೇ ಕೈಗಾರಿಕೆ ಆರಂಭಿಸದ ಕಾರಣ ಖಾಲಿ ಉಳಿದಿರುವ 543 ಎಕರೆ ಪ್ರದೇಶವನ್ನು ಇತರ ಉದ್ದೇಶಗಳಿಗೆ ಬಳಕೆ ಮಾಡಲು ಸರ್ಕಾರ ಉದ್ದೇಶಿಸಿದೆ. ಈ ಜಾಗದ ಪ್ರಕರಣವೀಗ ಹೈಕೋರ್ಟ್‌ನಲ್ಲಿದೆ. ಇದರಲ್ಲಿ 160 ಎಕರೆ ಜಾಗ ಕೋರಿ ಕೋಸ್ಟ್ ಗಾರ್ಡ್‌ನವರು ವಿವರವಾದ ಪ್ರಸ್ತಾವನೆ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ಕೋರಿಕೆಯಷ್ಟು ಜಾಗ ಹಂಚಿಕೆ ಮಾಡಲು ಒಪ್ಪಿಗೆ ಸೂಚಿಸಿದೆ. ಉಳಿದ 383 ಎಕರೆ ಜಾಗದಲ್ಲಿ ವಿವಿಧ ಬಗೆಯ ಕೈಗಾರಿಕೆಗಳನ್ನು ಸ್ಥಾಪಿಸಲು ಕೆನರಾ ಸಣ್ಣ ಕೈಗಾರಿಕಾ ಸಂಘ ಮನವಿ ಸಲ್ಲಿಸಿದ್ದು, ಖಾಸಗಿಯವರು ಈ ಕೈಗಾರಿಕೆಗಳನ್ನು ನಡೆಸಲು ಮುಂದೆ ಬರುವುದಾದರೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಿದರೆ ನ್ಯಾಯಾಲಯದ ಮೂಲಕ ಆ ಜಾಗವನ್ನು ಹಂಚಿಕೆ ಮಾಡಲಾಗುವುದು ಎಂದು ಕೆ.ಜೆ. ಜಾರ್ಜ್‌ ಹೇಳಿದರು.

ಜೆಸ್ಕೊ ಭೂಮಿಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ (ಆರ್‌ಎಎಫ್) ಕೂಡ 50 ಎಕರೆ ಜಾಗದ ಬೇಡಿಕೆ ಸಲ್ಲಿಸಿದೆ. ಅವರಿಗೆ ಮುಡಿಪುವಿನಲ್ಲಿರುವ ಕೆನರಾ ಇಂಡಸ್ಟ್ರೀಸ್ ಭೂಮಿಯನ್ನೂ ತೋರಿಸುತ್ತೇವೆ. ಅವರಿಗೆ ಯಾವುದೇ ಬೇಕಾಗುವುದೋ ಅದನ್ನು ಪಡೆದುಕೊಳ್ಳಲು ಅವಕಾಶವಿದೆ ಎಂದರು.

ಅಭಿವೃದ್ಧಿ ಪ್ರಾಧಿಕಾರಕ್ಕೆ ಕಾನೂನು ತಿದ್ದುಪಡಿ: ಬೈಕಂಪಾಡಿ ಕೈಗಾರಿಕಾ ವಲಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರಕಾರ ಬದ್ಧವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯು ಅಭಿವೃದ್ಧಿ ಪ್ರಾಧಿಕಾರ ರಚಿಸಲು ಒಪ್ಪಿಗೆ ನೀಡಿದರೂ ಕೂಡಾ ಕಾನೂನು ಸಮಸ್ಯೆ ಇದೆ. ಹಾಗಾಗಿ ಸಚಿವ ಸಂಪುಟದ ಮುಂದಿಟ್ಟು ಕಾನೂನಿಗೆ ತಿದ್ದುಪಡಿ ತಂದು ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಕೆ.ಜೆ.ಜಾರ್ಜ್ ಹೇಳಿದರು.

ಕೌಶಲ್ಯಾಭಿವೃದ್ಧಿಗೆ ಆದ್ಯತೆ: ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳು ಸ್ಥಳೀಯರಿಗೆ ಭರವಸೆ ನೀಡಿದಷ್ಟು ಉದ್ಯೋಗ ಕೊಟ್ಟಿಲ್ಲ ಎಂಬ ಬಗ್ಗೆ ದೂರುಗಳು ಬಂದಿದೆ. ಕೈಗಾರಿಕೋದ್ಯಮಿಗಳ ಪ್ರಮುಖರಲ್ಲಿ ಕೇಳಿದರೆ ಕೈಗಾರಿಕೆಗೆ ಅಗತ್ಯವುಳ್ಳ ವಿದ್ಯಾರ್ಹತೆಯುಳ್ಳವರ ಕೊರತೆ ಇದೆ ಎನ್ನುತ್ತಾರೆ.

ಹಾಗಾಗಿ ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ದೊರೆಯುವಂತಾಗಲು ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾಗಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಕ್ರಮ ವಹಿಸಲಾಗುವುದು ಎಂದು ಜಾರ್ಜ್ ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X