Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೀಪಾವಳಿ ಶಬ್ದ-ನೋವುರಹಿತ ಉತ್ಸವವಾಗಿರಲಿ:...

ದೀಪಾವಳಿ ಶಬ್ದ-ನೋವುರಹಿತ ಉತ್ಸವವಾಗಿರಲಿ: ಡಾ.ಭುಜಂಗಶೆಟ್ಟಿ

ನಾರಾಯಣ ನೇತ್ರಾಲಯದಲ್ಲಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ3 Nov 2018 8:29 PM IST
share

ಬೆಂಗಳೂರು, ನ. 3: ‘ಬೆಳಕಿನ ಹಬ್ಬ ದೀಪಾವಳಿಯನ್ನು ಶಬ್ದರಹಿತ ಹಾಗೂ ನೋವುರಹಿತ ಉತ್ಸವವನ್ನಾಗಿ ಆಚರಿಸೋಣ. ಪರಸರ ಮತ್ತು ಶಬ್ದಮಾಲಿನ್ಯಕ್ಕೆ ಕಾರಣವಾಗುವ ಪಟಾಕಿಗಳಿಂದ ದೂರವಿರೋಣ’ವೆಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಭುಜಂಗಶೆಟ್ಟಿ ಮನವಿ ಮಾಡಿದ್ದಾರೆ.

ಪಟಾಕಿಗಳಿಂದ ಉಂಟಾಗುವ ಶಬ್ದಮಾಲಿನ್ಯವೂ ಅಷ್ಟೇ ಹಾನಿಕಾರಕ. ಮಾನವರು 60 ಡೆಸಿಬಲ್ ವರೆಗಿನ ಶಬ್ದವನ್ನು ತಡೆದುಕೊಳ್ಳಬಲ್ಲರು. ಅದನ್ನು ಮೀರಿದ ಶಬ್ದವು ತಾತ್ಕಾಲಿಕ ಶ್ರವಣ ನಷ್ಟವನ್ನುಂಟು ಮಾಡಬಲ್ಲದು. ಕೈ ಮತ್ತು ಮುಖಕ್ಕೆ ಸುಟ್ಟ ಗಾಯಗಳು ಸಾಮಾನ್ಯವಾಗಿದ್ದು ಗಂಭೀರ ಅಂಗವೈಕಲ್ಯಗಳಿಗೆ ಕಾರಣವಾಗುತ್ತವೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರತಿ ದೀಪಾವಳಿಯಲ್ಲೂ ಪಟಾಕಿಯಿಂದ ಗಾಯಗೊಂಡ ಜನರನ್ನು ಕಾಣುತ್ತೇವೆ. ಆ ಪೈಕಿ ಬಹುತೇಕ ಮಕ್ಕಳಿಗೆ ಹಾನಿಯುಂಟಾಗುತ್ತದೆ. ಬಹಳಷ್ಟು ಪ್ರಕರಣಗಳಲ್ಲಿ ಬಲಿಪಶುಗಳಾಗುವವರು ಹಾದಿಯಲ್ಲಿ ಸಂಚರಿಸುವ ಮುಗ್ಧರು ಅಥವಾ ಪಟಾಕಿ ಸಿಡಿಸುವುದನ್ನು ವೀಕ್ಷಿಸುತ್ತಿರುವ ಮಕ್ಕಳಾಗಿರುತ್ತಾರೆಂದು ಅವರು ಹೇಳಿದ್ದಾರೆ.

ಪಟಾಕಿಯಿಂದ ಗಾಯಗೊಂಡರೆ ಗಾಯ ಸಣ್ಣದಾಗಿದ್ದರೂ ಕೂಡಲೇ ನಿಮ್ಮ ಕಣ್ಣುಗಳನ್ನು ನೀರಿನಲ್ಲಿ ತೊಳೆಯಿರಿ ಮತ್ತು ಕೂಡಲೇ ಆಸ್ಪತ್ರೆಗೆ ಧಾವಿಸಿ, ಚಿಕಿತ್ಸೆ ಅಗತ್ಯವಾಗಿದ್ದು ರಾಸಾಯನಿಕಗಳು ನಿಮ್ಮ ಕಣ್ಣುಗಳ ಪದರಗಳ ಒಳಗಡೆ ಸೇರಿಕೊಂಡು ಪರಿಸ್ಥಿತಿ ಗಂಭೀರಗೊಳಿಸುವುದನ್ನು ತಪ್ಪಿಸಬಹುದು ಎಂದು ಅವರು ಸೂಚಿಸಿದ್ದಾರೆ.

ಹಿರಿಯರ ಮೇಲ್ವಿಚಾರಣೆಯಲ್ಲಿ ಮಾತ್ರ ಪಟಾಕಿ ಹಚ್ಚುವಂತೆ ನೋಡಿಕೊಳ್ಳಬೇಕು. ಕಿರಿದಾದ ಸ್ಥಳಗಳಲ್ಲಿ ಪೋಷಕರ ಮೇಲ್ವಿಚಾರಣೆಯಿಲ್ಲದೆ ಪಟಾಕಿ ಹಚ್ಚುವುದು ಮತ್ತು ರಸ್ತೆಗಳ ಮೇಲೆ ಪಟಾಕಿ ಹಚ್ಚುವಾಗ ಮೇಲ್ವಿಚಾರಣೆ ವಹಿಸದೆ ಇರುವುದು ಗಾಯಗಳ ಪ್ರಮಾಣ ಹೆಚ್ಚಾಗಲು ಕಾರಣವಾಗುತ್ತದೆ. ಪಟಾಕಿಗಳನ್ನು ಮಕ್ಕಳಿಗೆ ದೊರೆಯದಂತೆ ಸಂಗ್ರಹಿಸಿ ಮತ್ತು ಅವುಗಳನ್ನು ಪೂಜೆ ಅಥವಾ ಅಡುಗೆ ಮನೆಯಲ್ಲಿ ಸಂಗ್ರಹಿಸಿಡಬೇಡಿ ಎಂದು ಅವರು ಸಲಹೆ ಮಾಡಿದ್ದಾರೆ.

ಪಟಾಕಿ ಸುಡುವ ವೇಳೆ ಬೆಂಕಿಯ ಮೇಲೆ ಬಾಗದಿರಿ, ಬೆಂಕಿ ಹಚ್ಚಿದ ಪಟಾಕಿಗಳನ್ನು ಪರಸ್ಪರ ಎಸೆದಾಡಬೇಡಿ, ಕೈಗಳಲ್ಲಿ ಪಟಾಕಿ ಹಚ್ಚಿಕೊಂಡು ಅವುಗಳನ್ನು ಎಸೆಯಬೇಡಿ, ಏಕೆಂದರೆ ಅವು ಪಟಾಕಿ ಹೊತ್ತಿಸುವವರಿಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಜನರಿಗೂ ತೊಂದರೆ ಉಂಟು ಮಾಡುತ್ತವೆ ಎಂದು ಅವರು ಸೂಚಿಸಿದ್ದಾರೆ.

ಯಾವುದೇ ಪಟಾಕಿಯ ಗಾಯಗಳಿಗೆ ಕೂಡಲೇ ಈ ಕೆಳಕಂಡ ಸಹಾಯವಾಣಿ ಸಂಖ್ಯೆಗಳಿಗೆ-99025 46046 ಮತ್ತು 99028 21128ಕ್ಕೆ ಕರೆ ಮಾಡಬಹುದು. ರಾಜಾಜಿನಗರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಸ್ತೆ ಸೇರಿದಂತೆ ನಾರಾಯಣ ನೇತ್ರಾಲಯದಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X