Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರ-ಪಾಲಿಕೆ ಸಹಯೋಗದಿಂದ ಸುಸ್ಥಿರ ನಗರ...

ಜನರ-ಪಾಲಿಕೆ ಸಹಯೋಗದಿಂದ ಸುಸ್ಥಿರ ನಗರ ನಿರ್ಮಾಣ ಸಾಧ್ಯ: ಮೇಯರ್ ಗಂಗಾಂಬಿಕೆ

ವಾರ್ತಾಭಾರತಿವಾರ್ತಾಭಾರತಿ3 Nov 2018 8:32 PM IST
share
ಜನರ-ಪಾಲಿಕೆ ಸಹಯೋಗದಿಂದ ಸುಸ್ಥಿರ ನಗರ ನಿರ್ಮಾಣ ಸಾಧ್ಯ: ಮೇಯರ್ ಗಂಗಾಂಬಿಕೆ

ಬೆಂಗಳೂರು, ನ.3 : ನಗರ ವಾಸಿಗಳು ಬಿಬಿಎಂಪಿಯೊಂದಿಗೆ ಜೊತೆಗೂಡಿ ಕೆಲಸ ಮಾಡಿದಾಗಲೇ ಸುಸ್ಥಿರ ಬೆಂಗಳೂರು ನಗರ ನಿರ್ಮಾಣ ಸಾಧ್ಯ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಶನಿವಾರ ನಗರದ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ‘ಸುಸ್ಥಿರ ಬೆಂಗಳೂರು’ ಯೋಜನೆಗಳು ವಿಷಯ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರು ನಗರವನ್ನು ಅತ್ಯುತ್ತಮ, ಸ್ವಚ್ಛ, ಸುಂದರ ಹಾಗೂ ಅಭಿವೃದ್ಧಿಶೀಲ ನಗರವನ್ನಾಗಿ ಮಾಡುವಲ್ಲಿ ವಿಶೇಷವಾದ ಪಾತ್ರವನ್ನು ಅಪಾರ್ಟ್‌ಮೆಂಟ್‌ಗಳು ವಹಿಸುತ್ತವೆ ಎಂದರು.

ಹಿಂದಿನ ದಿನಗಳಲ್ಲಿ ಹಲವು ಪ್ರಮುಖ ಬಡಾವಣೆಗಳಲ್ಲಿನ ಅಪಾರ್ಟ್‌ಮೆಂಟ್‌ಗಳ ಜನರು ನಮಗೆ ಎಲ್ಲ ಸೌಲಭ್ಯಗಳು ಸಿಕ್ಕಿವೆ ಎಂದು ಯಾರೂ ಹೊರಗಡೆ ಬರುತ್ತಿರಲಿಲ್ಲ. ಆದರೆ, ಪರಿಸ್ಥಿತಿ ಬದಲಾದಂತೆ ಇದೀಗ ಎಲ್ಲರೂ ಸಂಘಟಿತರಾಗುತ್ತಿರುವುದು ಉತ್ತಮ ಬೆಳವಣಿಗೆ. ಅಪಾರ್ಟ್‌ಮೆಂಟ್‌ಗಳ ನಿವಾಸಿಗಳು ಹಾಗೂ ಪಾಲಿಕೆ ಜೊತೆ ಜೊತೆಗೆ ಕೆಲಸ ಮಾಡಿದರೆ ಕಸ ಸಂಸ್ಕರಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆ ಎಂದು ಹೇಳಿದರು.

ನಗರದಲ್ಲಿ 29 ಲಕ್ಷ ಮನೆಗಳಿದ್ದು, 1.30 ಕೋಟಿ ಜನಸಂಖ್ಯೆಯಿದೆ. ಹೀಗಾಗಿ, ದಿನದಿಂದ ದಿನಕ್ಕೆ ಎಲ್ಲ ರೀತಿಯ ಸಮಸ್ಯೆಗಳು ಅಧಿಕವಾಗುತ್ತಿವೆ. ಜನರ ಹೊಂದಾಣಿಕೆ ಕೊರತೆಯಿಂದಲೂ ಸಮಸ್ಯೆಗಳು ಜಟಿಲವಾಗುತ್ತಿವೆ. ಹೀಗಾಗಿ, ನಗರ ವಾಸಿಗಳು ಪಾಲಿಕೆಯಲ್ಲಿನ ಏನೇ ಸಮಸ್ಯೆಯಿದ್ದರೂ ನೇರವಾಗಿ ನನ್ನನ್ನು ಸಂಪರ್ಕ ಮಾಡಬಹುದು. ಪರಸ್ಪರ ಹೊಂದಾಣಿಕೆ ಮೂಲಕ ನಗರ ನಿರ್ಮಾಣ ಮಾಡಲು ಮುಂದಾಗೋಣ ಎಂದು ತಿಳಿಸಿದರು.

ಫೆಡರೇಷನ್‌ನ ರವಿಚಂದನ್ ಮಾತನಾಡಿ, ನಗರದಲ್ಲಿ ತ್ಯಾಜ್ಯ ಸಂಸ್ಕರಣೆಗಾಗಿ ಸರಕಾರ ಹಲವು ವಿಭಿನ್ನವಾದ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ರೂಪಿಸಬೇಕು. ತ್ಯಾಜ್ಯ ವಿಲೇವಾರಿಗಾಗಿ ಸುಲಭ ಮಾರ್ಗಗಳನ್ನು ಆಯ್ದುಕೊಂಡು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಫೆಡರೇಷನ್ ಸದಸ್ಯ ಶ್ರೀಕಾಂತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X