Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಡಿಎ ಭೂ ಸರ್ವೆಗೆ ಆದೇಶ:...

ಬಿಡಿಎ ಭೂ ಸರ್ವೆಗೆ ಆದೇಶ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ3 Nov 2018 8:39 PM IST
share
ಬಿಡಿಎ ಭೂ ಸರ್ವೆಗೆ ಆದೇಶ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ನ. 3: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ವ್ಯಾಪ್ತಿಯಲ್ಲಿನ ಆಸ್ತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಭೂ ಸರ್ವೆ ನಡೆಸುವಂತೆ ಸೂಚನೆ ನೀಡಿದ್ದು, ಮಾರ್ಚ್ ಒಳಗೆ ಸಮೀಕ್ಷೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದೇನೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ ಬಿಡಿಎ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಬಹಳ ವರ್ಷಗಳ ಹಿಂದೆ ಬಿಡಿಎ ಭೂ ಸರ್ವೆ ನಡೆದಿತ್ತು. ಪ್ರಸ್ತುತ ಬಿಡಿಎ ವ್ಯಾಪ್ತಿಯಲ್ಲಿ ಎಷ್ಟು ಎಕರೆ ಭೂಮಿ ಇದೆ ಎಂಬ ಸ್ಪಷ್ಟ ಚಿತ್ರಣವಿಲ್ಲ. ಹೀಗಾಗಿ ಹೊಸದಾಗಿ ಸರ್ವೆ ನಡೆಸಲು ಸೂಚಿಸಿದ್ದು, ಮೂರು ತಿಂಗಳೊಳಗೆ ಸಮೀಕ್ಷೆ ನಡೆಸಲು ಗಡುವು ನೀಡಿದ್ದೇನೆ ಎಂದು ಹೇಳಿದರು.

ಶಿವರಾಂ ಕಾರಂತ್ ಲೇಔಟ್‌ನಲ್ಲಿ ನೋಟಿಫಿಕೇಷನ್ ಮಾಡಿ, ಮೂರು ತಿಂಗಳಲ್ಲಿ ನಿವೇಶನ ಹಂಚಿಕೆ ಮಾಡುವಂತೆ ನ್ಯಾಯಾಲಯ ತೀರ್ಪು ನೀಡಿದೆ. ಒಟ್ಟು 3546 ಎಕರೆ ಭೂಮಿ ಇದ್ದು, ಇದರಲ್ಲಿ ನಮಗೆ 800 ಎಕರೆ ಸಂದಾಯವಾಗಿದೆ. ಉಳಿದ ಜಾಗವನ್ನು ನೋಟಿಫೈ ಮಾಡಿ, ವಹಿಸಿಕೊಳ್ಳಬೇಕು. ಈಗಿನ ಮಾರುಕಟ್ಟೆ ಆಧಾರದ ಮೇಲೆ ಪರಿಹಾರ ನೀಡಬೇಕಿದೆ. ಅಧಿಕಾರಿಗಳಿಗೆ ಶೀಘ್ರವೇ ಹಂಚಿಕೆ ಮಾಡುವಂತೆ ಸೂಚಿಸಿದ್ದೇನೆ ಎಂದು ಪರಮೇಶ್ವರ್ ತಿಳಿಸಿದರು.

ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಮಾಡುವುದರಲ್ಲಿ ಯಾವುದೇ ಗೊಂದಲ ಬೇಡ. 65 ಕಿ.ಮೀ. ರಸ್ತೆ ನಿರ್ಮಾಣಕ್ಕೆ 17 ಸಾವಿರ ಕೋಟಿ ರೂ.ವೆಚ್ಚವಾಗಲಿದೆ. ಭೂ ಸ್ವಾದೀನಕ್ಕೆ 6,200 ಕೋಟಿ ರೂ.ಗಳಾಗಲಿದೆ. ಎಂಟು ಪಥದ ರಸ್ತೆಯ ಮಧ್ಯ ಭಾಗದಲ್ಲಿ ಮೆಟ್ರೋ ಲೈನ್ ತರಲೂ ಪ್ರಸ್ತಾವಿಸಲಾಗಿದೆ. ಬಿಡಿಎ ಹಂತದಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು ಶೀಘ್ರವೇ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು.

ಕೆಂಪೇಗೌಡ ಬಡಾವಣೆಯಲ್ಲಿ 5 ಸಾವಿರ ನಿವೇಶನಗಳ ಪೈಕಿ 4971 ಸೈಟುಗಳಿಗೆ ಹಕ್ಕು ಪತ್ರ ನೀಡಿದ್ದೇವೆ. ಅವರಿಗೆ ಹಣ ಕಟ್ಟಲು 3 ತಿಂಗಳು ಅವಕಾಶವಿದೆ. ಮೂರು ತಿಂಗಳ ಬಳಿಕ ಶೇ.18ರಷ್ಟು ದಂಡ ಕಟ್ಟಬೇಕು. ದಂಡವಿಲ್ಲದೆ ಇನ್ನೊಂದು ತಿಂಗಳು ವಿಸ್ತರಿಸಲು ಅವಕಾಶ ಕೇಳಿದ್ದು, ಸಿಎಂ ಜತೆ ಚರ್ಚೆ ಮಾಡಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

ಅರ್ಕಾವತಿ ಬಡಾವಣೆಯಲ್ಲಿನ 3,600ಜನರು ಪರ್ಯಾಯ ನಿವೇಶನ ಕೇಳಿದ್ದರು, ಅವರಿಗೆ ಕೆಂಪೇಗೌಡದಲ್ಲಿ ನೀಡಿದ್ದೇವೆ. ಇದರಿಂದ ಬಿಡಿಎಗೆ ಕೊಂಚ ನಷ್ಟವಾಗಿದೆ ಎಂದು ಪರಮೇಶ್ವರ್ ಇದೇ ವೇಳೆ ಮಾಹಿತಿ ನೀಡಿದರು.

ಟೌನ್‌ಶಿಪ್ ನಿರ್ಮಾಣ: ‘ವಿಷನ್ ಬೆಂಗಳೂರು-2050’ ಯೋಜನೆ ಸಿದ್ಧಪಡಿಸಲು ತೀರ್ಮಾನ ಮಾಡಿದ್ದೇವೆ. ಹೊಸಕೋಟೆ, ದೊಡ್ಡಬಳ್ಳಾಪುರ, ಆನೇಕಲ್, ದಾಬಸ್‌ಪೇಟೆ ಈ ಪ್ರದೇಶಗಳಿಗೆ ಲಿಂಕ್ ಮಾಡಲು ಬಿಎಂಆರ್‌ಡಿಎ ವತಿಯಿಂದ ಯೋಜನೆ ಸಿದ್ಧಪಡಿಸಿದ್ದೇವೆ. ಪೆರಿಫೆರಲ್ ರಿಂಗ್ ರಸ್ತೆ ಮೂಲಕ ಈ ಭಾಗಗಳಿಗೆ ಸಂಪರ್ಕ ಕಲ್ಪಿಸಲು ಇಲ್ಲಿ ಟೌನ್‌ಶಿಪ್ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಿಂದ ನಗರವನ್ನೇ ಅವಲಂಬನೆ ಮಾಡುವುದು ಕಡಿಮೆಯಾಗಲಿದೆ ಎಂದರು.

ಈ ಮೊದಲು 2031 ವಿಷನ್ ಸಿದ್ಧಪಡಿಸಲಾಗಿತ್ತು. ಇದೆ ಯೋಜನೆಯನ್ನು ಪರಿಷ್ಕರಿಸಿದ್ದು, ಅದನ್ನು ವಿಸ್ತರಿಸಿ 2050 ವಿಷನ್‌ಗೆ ಮಾಡಲಿದ್ದೇವೆ. ಈ ಯೋಜನೆ ಪ್ರಾರಂಭ ಹಂತದಲ್ಲಿದ್ದು ಸರಕಾರದ ಹಂತದಲ್ಲಿ ತೀರ್ಮಾನ ಮಾಡಿದ್ದೇವೆ ಎಂದು ಅವರು ಹೇಳಿದರು.

ಬಿಡಿಎ ಭವನ ನಿರ್ಮಾಣ: ಬಿಡಿಎ ಕಚೇರಿಯಲ್ಲಿ ಸಾಕಷ್ಟು ಪ್ರಮುಖ ಕಡತಗಳು ಸಣ್ಣ ಕಟ್ಟಡದಲ್ಲಿ ಇರುವುದು ಹೆಚ್ಚು ಸುರಕ್ಷಿತವಲ್ಲ. ಈ ದೃಷ್ಟಿಯಿಂದ ಬಿಡಿಎ ಭವನ ನಿರ್ಮಾಣದ ಚಿಂತನೆ ಮಾಡಿದ್ದು, ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಪರಮೇಶ್ವರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X