Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಪ.ಪೂ.ಕಾಲೇಜುಗಳ ರಜಾ ವ್ಯವಸ್ಥೆ ಹಳೆ...

'ಪ.ಪೂ.ಕಾಲೇಜುಗಳ ರಜಾ ವ್ಯವಸ್ಥೆ ಹಳೆ ಮಾದರಿಯಲ್ಲೇ ಮುಂದುವರಿಸಿ'

ಶೈಕ್ಷಣಿಕ ಸಂವಾದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರ ಸಂಘ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Nov 2018 8:50 PM IST
share

ಮಂಗಳೂರು, ನ. 3: ಪದವಿಪೂರ್ವ ಕಾಲೇಜುಗಳ ರಜಾ ವ್ಯವಸ್ಥೆ ಅವೈಜ್ಞಾನಿಕವಾಗಿದೆ. ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೂ ಇದರಿಂದ ತೊಡಕುಂಟಾಗಿದೆ. ಹಾಗಾಗಿ ಈ ಹಿಂದಿನಂತೆಯೇ ಏಕರೂಪದ ರಜಾ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಇಲ್ಲದಿದದ್ರೆ ರಜಾ ರಹಿತ ಇಲಾಖೆಯೆಂದು ಪರಿಗಣಿಸಿ ಸಂಬಂಧಿಸಿದ ರಜಾ ಸೌಲಭ್ಯವನ್ನು ನೀಡಬೇಕು ಎಂದು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಆಗ್ರಹಿಸಿದೆ.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರೊಂದಿಗೆ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ದ.ಕ.ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಶನಿವಾರ ನಡೆದ ಶೈಕ್ಷಣಿಕ ಸಂವಾದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಹಲವು ಬೇಡಿಕೆಗಳನ್ನು ಮುಂದಿಟ್ಟರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜ.31ರಿಂದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳು ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ.1ರಿಂದ ನಡೆಸುವ ಅವೈಜ್ಞಾನಿಕ ತೀರ್ಮಾನವನ್ನು ಇಲಾಖೆ ಕೈಗೊಂಡಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಗೆ ಸಮಯವಕಾಶ ಇಲ್ಲದಂತಾಗಿದೆ. ತರಗತಿಗಳನ್ನು ಜೂ.1ರಿಂದ ಪ್ರಾರಂಭಿಸಬೇಕು. ಅಕ್ಟೋಬರ್‌ನಲ್ಲ ಕನಿಷ್ಠ 27 ದಿನಗಳಾದರೂ ರಜೆ ನೀಡಬೇಕು ಎಂದು ಸಂಘದ ಮುಖಂಡರು ಮನವಿ ಸಲ್ಲಿಸಿದರು.

ಕಳೆದ 25 ವರ್ಷಗಳಿಂದ ಪದವಿಪೂರ್ವ ಕಾಲೇಜು ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆಗೆ ಹೋರಾಟ ನಡೆಸಿದ್ದರೂ ಪರಿಹಾರವಾಗಿಲ್ಲ. ಕುಮಾರ ನಾಯಕ್ ವರದಿಯಂತೆ ಎಲ್ಲ ಉಪನ್ಯಾಸಕರಿಗೆ ಹಾಗೂ ಪ್ರಾಂಶುಪಾಲರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಪಡಿಸಬೇಕು. ಈಗಾಗಲೇ ನೀಡಿರುವ ಎರಡು ವೇತನ ಭಡ್ತಿಗಳನ್ನು 2008 ಆ.1ರ ನಂತರದ ಉಪನ್ಯಾಸಕರಿಗೂ ವಿಸ್ತರಿಸಿ, ಹೊಸ ವೇತನ ಶ್ರೇಣಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಕೇರಳ ಮಾದರಿಯಲ್ಲಿ ಶೈಕ್ಷಣಿಕ ವೇಳಾಪಟ್ಟಿ ನಿಗದಿಪಡಿಸಬೇಕು. ದಾಖಲಾತಿ ಸಂದರ್ಭ ದಂಡ ಶುಲ್ಕ ರದ್ದು ಮಾಡಬೇಕು. ವಿಷಯವಾರು ಉಪನ್ಯಾಸಕರಿಗೆ ಪುನಶ್ಚೇತನ ಕಾರ್ಯಾಗಾರ ಮಾಡಬೇಕು. ವಾರದಲ್ಲಿ ಮೂರು ದಿನ ಬೇರೆ ಕಾಲೇಜುಗಳಿಗೆ ಉಪನ್ಯಾಸಕರ ನಿಯೋಜನೆ ರದ್ದು ಮಾಡಬೇಕು. ಎಲ್ಲ ಕಾಲೇಜುಗಳಿಗೆ ದೈಹಿಕ ಶಿಕ್ಷಕರ ನೇಮಕ ಮಾಡಬೇಕು. 15 ವರ್ಷ ಮೇಲ್ಪಟ್ಟ ಕಾಲೇಜುಗಳಿಗೆ ಶಾಶ್ವತ ಮಾನ್ಯತೆ ನೀಡಬೇಕು. ವಿದ್ಯಾರ್ಥಿ ಸ್ನೇಹಿ ಪಠ್ಯಕ್ರಮ ಅನುಸರಿಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಬೇಕು ಮೊದಲಾದ ಬೇಡಿಕೆಗಳನ್ನು ಭೋಜೇಗೌಡರಿಗೆ ಸಲ್ಲಿಸಲಾಯಿತು.

ಉಪನ್ಯಾಸಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಭೋಜೇಗೌಡರು ಹಲವಾರು ಬೇಡಿಕೆಗಳು ಸಲ್ಲಿಕೆಯಾಗಿವೆ. ಪರಿಶೀಲಿಸಿ ತುರ್ತು ಆಗಬೇಕಾದ ಬೇಡಿಕೆಗಳನ್ನು ಈಡೇರಿಸಲು ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು. ಉಳಿದ ಬೇಡಿಕೆಗಳನ್ನೂ ಹಂತ ಹಂತವಾಗಿ ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಕೆ. ಉಪಾಧ್ಯಾಯ ಸ್ವಾಗತಿಸಿದರು. ಕೆ.ಎನ್.ಗಂಗಾಧರ ಆಳ್ವ ವಂದಿಸಿದರು. ಡಾ.ಕಿಶೋರ್ ಕುಮಾರ್ ರೈ ಶೇಣಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭ ಎಸ್.ಎಲ್.ಭೋಜೇಗೌಡ, ರಾಜ್ಯ ಪ್ರಶಸ್ತಿ ಪುರಸ್ಕೃತ ಅಶ್ಫಾಕ್ ಅಹ್ಮದ್ ಮ್ಯಾಗೇರಿ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ರಾವ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X