Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಡ್ತಿ ಹೊಂದದ ಸೇನಾಧಿಕಾರಿಗಳಿಗೆ...

ಭಡ್ತಿ ಹೊಂದದ ಸೇನಾಧಿಕಾರಿಗಳಿಗೆ ಪ್ರತ್ಯೇಕ ಮೌಲ್ಯಮಾಪನ ಅರ್ಜಿ: ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ3 Nov 2018 9:48 PM IST
share
ಭಡ್ತಿ ಹೊಂದದ ಸೇನಾಧಿಕಾರಿಗಳಿಗೆ ಪ್ರತ್ಯೇಕ ಮೌಲ್ಯಮಾಪನ ಅರ್ಜಿ: ಆಕ್ರೋಶ

ಹೊಸದಿಲ್ಲಿ,ನ.3: ಭಡ್ತಿ ಹೊಂದದಿರುವ ಲೆಫ್ಟಿನೆಂಟ್ ಕರ್ನಲ್ ದರ್ಜೆಯ ಅಧಿಕಾರಿಗಳಿಗೆ ಪ್ರತ್ಯೇಕ ಮೌಲ್ಯಮಾಪನ ಅರ್ಜಿ ನೀಡುವ ಬಗ್ಗೆ ಭಾರತೀಯ ಸೇನೆಯ ಪ್ರಸ್ತಾಪದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸೇನಾಧಿಕಾರಿಗಳು, ಇದು ತಾರತಮ್ಯ ಮತ್ತು ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ. ಕ

ಳೆದ ತಿಂಗಳು ನಡೆದ ಸೇನಾ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾರತೀಯ ಸೇನೆಯ ಸೂಚನ ನಿರ್ದೇಶನಾಲಯ ಪ್ರಸ್ತಾಪಿಸಿದ್ದ ಈ ಸಲಹೆಯು, ಹುದ್ದೆಯ ಕೊರತೆ ಮುಂತಾದ ತಮ್ಮ ನಿಯಂತ್ರಣದಲ್ಲಿರದ ಕಾರಣಗಳಿಂದ ಭಡ್ತಿ ವಂಚಿತರಾಗಿರುವ ಅಧಿಕಾರಿಗಳ ಮೇಲೆ ಹೇರಲಾದ ಎರಡನೇ ಶಿಕ್ಷೆಯಾಗಿದೆ ಎಂದು ವಿಮರ್ಶಕರು ದೂರಿದ್ದಾರೆ. ಭಡ್ತಿ ಹೊಂದದ ಅಧಿಕಾರಿಗಳಿಗೆ ನೀಡಲು ಉದ್ದೇಶಿಸಲಾಗಿರುವ ಪ್ರತ್ಯೇಕ ರಹಸ್ಯ ವರದಿ (ಸಿಆರ್) ಅರ್ಜಿಯ ಅಗತ್ಯತೆಯ ಬಗ್ಗೆ ಎಲ್ಲ ಸೇನಾ ಕಮಾಂಡ್‌ಗಳ ಮುಖ್ಯಕಚೇರಿಗಳು ನವೆಂಬರ್ 16ರ ಒಳಗೆ ತಮ್ಮ ಪ್ರತಿಕ್ರಿಯೆ ನೀಡುವಂತೆ ಸೇನಾ ಕಾರ್ಯದರ್ಶಿ ವಿಭಾಗ ತಿಳಿಸಿದೆ. ಈವರೆಗೆ, ಮೇಜರ್‌ರಿಂದ ಲೆಫ್ಟಿನೆಂಟ್ ಕರ್ನಲ್‌ಗೆ ಮತ್ತು ಕರ್ನಲ್ ಪದವಿಗೆ ಭಡ್ತಿ ಹೊಂದುವ ಅಧಿಕಾರಿಗಳಿಗೆ ನೀಡಲಾಗುತ್ತಿದ್ದ ವೌಲ್ಯಮಾಪನಾ ಅರ್ಜಿ ಒಂದೇ ಆಗಿರುತ್ತಿತ್ತು. ಕರ್ನಲ್‌ನಿಂದ ಬ್ರಿಗೇಡಿಯರ್ ಹಂತಕ್ಕೆ ಬಡ್ತಿ ಹೊಂದುವ ವೇಳೆ ಮಾತ್ರ ಪ್ರತ್ಯೇಕ ಅರ್ಜಿಯನ್ನು ನೀಡಲಾಗುತ್ತಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ಈ ಕ್ರಮವು ಸೇನೆಯ ಒಳಗೆ ಅಸಮಾಧಾನವನ್ನು ಉಂಟು ಮಾಡಿದ್ದು ಹಾಲಿ ಮತ್ತು ನಿವೃತ್ತ ಸೇನಾಧಿಕಾರಿಗಳು ಈ ಕ್ರಮವನ್ನು ಟೀಕಿಸಿದ್ದಾರೆ. ಈ ಕುರಿತು ಲೆ.ಕರ್ನಲ್ ಒಬ್ಬರು 10 ಕಾರ್ಪ್ಸ್ ಮುಖ್ಯಕಚೇರಿಗೆ ಬರೆದ ಪತ್ರದಲ್ಲಿ ಈ ನಡೆಯು ತಾರತಮ್ಯದಿಂದ ಕೂಡಿದೆ ಮತ್ತು ಅಕ್ರಮವಾಗಿದೆ ಎಂದು ದೂರಿದ್ದಾರೆ. ನ್ಯಾಯಾಲಯ ಕೂಡಾ ಒಬ್ಬ ಅಪರಾಧಿಗೆ ಒಂದು ತಪ್ಪಿಗೆ ಎರಡು ಬಾರಿ ಶಿಕ್ಷೆ ನೀಡುವುದಿಲ್ಲ. ಆದರೆ ಒಬ್ಬ ಸೇನಾಧಿಕಾರಿ ತನ್ನ ಅಸಾಮರ್ಥ್ಯದ ಕಾರಣದಿಂದಲ್ಲದೆ, ಕೇವಲ ಹುದ್ದೆ ಖಾಲಿಯಿಲ್ಲ ಎಂಬ ಕಾರಣಕ್ಕೆ ಭಡ್ತಿಯಿಂದ ವಂಚಿತನಾದಾಗ ಸದ್ಯ ಪ್ರಸ್ತಾಪಿಸಲಾಗಿರುವ ಕ್ರಮವು ಆತನನ್ನು ಹಲವು ಬಾರಿ ಶಿಕ್ಷೆಗೆ ಗುರಿ ಮಾಡಲಿದೆ ಎಂದು ಲೆ.ಕ. ಸಮಿರನ್ ರಾಯ್ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X