Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಡ್ ಜಾನ್, ಮರ್ಜಿನ್ ನನ್ನ ವೃತ್ತಿ...

ಡೇವಿಡ್ ಜಾನ್, ಮರ್ಜಿನ್ ನನ್ನ ವೃತ್ತಿ ಜೀವನಕ್ಕೆ ಮಾರಕವಾದರು:ವೌನಮುರಿದ ಸರ್ದಾರ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ3 Nov 2018 11:58 PM IST
share
ಡೇವಿಡ್ ಜಾನ್, ಮರ್ಜಿನ್ ನನ್ನ ವೃತ್ತಿ ಜೀವನಕ್ಕೆ ಮಾರಕವಾದರು:ವೌನಮುರಿದ ಸರ್ದಾರ್ ಸಿಂಗ್

ಭುವನೇಶ್ವರ, ನ.3: ಈ ವರ್ಷಾರಂಭದಲ್ಲಿ ಏಶ್ಯನ್ ಗೇಮ್ಸ್ ಕೊನೆಗೊಂಡ ಬಳಿಕ ನಿವೃತ್ತಿ ಘೋಷಿಸಿದ್ದ ಭಾರತದ ಮಾಜಿ ನಾಯಕ ಸರ್ದಾರ್ ಸಿಂಗ್, ತನ್ನ ನಿರ್ಧಾರಕ್ಕೆ ಕಾರಣ ಏನೆಂಬ ಬಗ್ಗೆ ಇದೀಗ ಬಹಿರಂಗಪಡಿಸಿದ್ದಾರೆ.

ತಾನು ವೃತ್ತಿಜೀವನವನ್ನು ದಿಢೀರ್ ಕೊನೆಗೊಳಿಸಲು ಹಾಕಿ ಇಂಡಿಯಾದ ಉನ್ನತ ಪ್ರದರ್ಶನ ನಿರ್ದೇಶಕ ಡೇವಿಡ್ ಜಾನ್ ಹಾಗೂ ಕೋಚ್ ಜೊಯೆರ್ಡ್ ಮರ್ಜಿನ್ ಕಾರಣ ಎಂದು ಆರೋಪಿಸಿದ್ದಾರೆ.

ಜಕಾರ್ತದಲ್ಲಿ ನಡೆದ ಏಶ್ಯನ್ ಗೇಮ್ಸ್‌ನ ಸೆಮಿ ಫೈನಲ್‌ನಲ್ಲಿ ಸೋತಿದ್ದ ಭಾರತ ಮೂರನೇ ಸ್ಥಾನಕ್ಕಾಗಿ ನಡೆದ ಪ್ಲೇ-ಆಫ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿ ಕಂಚು ಜಯಿಸಿತ್ತು. ಆದರೆ ಕಳೆದ ಒಂದು ವರ್ಷದಿಂದ ನಡೆದ ಘಟನೆಗಳು ಸರ್ದಾರ್ ನಿವೃತ್ತಿ ನಿರ್ಧಾರಕ್ಕೆ ಕಾರಣವಾಗಿದೆ.

ಹಾಕಿ ಇಂಡಿಯಾ ರೊಲ್ಯಾಂಟ್ ಒಲ್ಟಮನ್ಸ್‌ರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸಿದ ಬಳಿಕ ತಾನು ಸಮಸ್ಯೆ ಎದುರಿಸಲಾರಂಭಿಸಿದ್ದೆ. ನನ್ನ ನಿವೃತ್ತಿಯ ಹಿಂದೆ ಹಲವಾರು ಕಾರಣಗಳಿವೆ. ಒಲ್ಟಮನ್ಸ್‌ರನ್ನು ಕೋಚ್ ಹುದ್ದೆಯಿಂದ ತೆಗೆದುಹಾಕಿದ ಬಳಿಕ ಹಲವು ಘಟನೆಗಳು ನಡೆದವು. ಜಾನ್ ಹಾಗೂ ಇನ್ನೋರ್ವ ವಿದೇಶಿ ಕೋಚ್(ಮರ್ಜಿನ್)ಹೊಸ ಆಟಗಾರರಿಗೆ ಅವಕಾಶ ನೀಡಲು ಯತ್ನಿಸಿದರು. ನಾವು 2017ರಲ್ಲಿ ಏಶ್ಯಾಕಪ್‌ನ್ನು ಜಯಿಸಿದ್ದೆವು. ನಾನು ಹಾಕಿಯಲ್ಲಿ ಮುಂದುವರಿಯುವ ವಿಶ್ವಾಸದಲ್ಲಿದ್ದೆ. ಆದರೆ, ಯಾವುದೇ ಚರ್ಚೆಯಿಲ್ಲದೆ ನನ್ನನ್ನು ತಂಡದಿಂದ ಕೈಬಿಡಲಾಯಿತು. ಆ ಬಳಿಕ ನನ್ನನ್ನು ಕೆಲವು ಜೂನಿಯರ್ ಆಟಗಾರರೊಂದಿಗೆ ಈ ವರ್ಷ ನಡೆದ ಸುಲ್ತಾನ್ ಅಝ್ಲಾನ್ ಹಾಕಿ ಕಪ್ ಟೂರ್ನಿಗೆ ಕಳುಹಿಸಿಕೊಡಲಾಗಿತ್ತು. ಆ ಟೂರ್ನಿಯಿಂದ ವಾಪಸಾದ ಬಳಿಕ ನನ್ನನ್ನು ಮತ್ತೊಮ್ಮೆ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಕಡೆಗಣಿಸಲಾಯಿತು. ನಾನು ಫಿಟ್ ಆಗಿದ್ದರೂ ತಂಡಕ್ಕೆ ಆಯ್ಕೆಯಾಗದೇ ಇದ್ದ ಸಂದರ್ಭದಲ್ಲಿ ನಾನು ನನ್ನ ಬಗ್ಗೆಯೇ ಸಂಶಯಪಡಲಾರಂಭಿಸಿದ್ದೆ, ಪ್ರಶ್ನಿಸಿಕೊಳ್ಳಲಾರಂಭಿಸಿದ್ದೆ ಎಂದು ಭಾರತ ಕಂಡ ಶ್ರೇಷ್ಠ ಮಿಡ್‌ಫೀಲ್ಡರ್ ಸರ್ದಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X