Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶಬರಿಮಲೆ ಭಕ್ತನ ಎದೆಗೆ ತುಳಿದ ಪೊಲೀಸ್:...

ಶಬರಿಮಲೆ ಭಕ್ತನ ಎದೆಗೆ ತುಳಿದ ಪೊಲೀಸ್: ವೈರಲ್ ಆದ ಫೋಟೊ ಹಿಂದಿನ ವಾಸ್ತವ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ4 Nov 2018 2:53 PM IST
share
ಶಬರಿಮಲೆ ಭಕ್ತನ ಎದೆಗೆ ತುಳಿದ ಪೊಲೀಸ್: ವೈರಲ್ ಆದ ಫೋಟೊ ಹಿಂದಿನ ವಾಸ್ತವ ಇಲ್ಲಿದೆ

ಹೊಸದಿಲ್ಲಿ, ನ.4: ದಿಲ್ಲಿ ಶಾಸಕ ಕಪಿಲ್ ಮಿಶ್ರಾ ನವೆಂಬರ್ 2ರಂದು ಒಂದು ಫೋಟೊ ಟ್ವೀಟ್ ಮಾಡಿದ್ದರು. ಅಯ್ಯಪ್ಪ  ಭಕ್ತನೊಬ್ಬ ಕೈಯಲ್ಲಿ ಮೂರ್ತಿ ಹಿಡಿದುಕೊಂಡಿದ್ದು, ಪೊಲೀಸ್ ಪೇದೆಯೊಬ್ಬ ಆತನ ಎದೆಗೆ ತುಳಿಯುತ್ತಿರುವ ದೃಶ್ಯದ ಚಿತ್ರ ಅದು. "ಈ ಭಕ್ತನ ಕಣ್ಣಿನಲ್ಲಿ ಕ್ರೌರ್ಯಕ್ಕೆ ತುತ್ತಾದ ಭೀತಿ ಇಲ್ಲ; ದಬ್ಬಾಳಿಕೆಯ ಭಯ ಇಲ್ಲ; ಇದು ನಂಬಿಕೆಯ ಶಕ್ತಿ. #ಶಬರಿಮಲೆ#ಅಯ್ಯಪ್ಪ" ಎಂಬ ಬರಹದೊಂದಿಗೆ ಪೋಸ್ಟ್ ಮಾಡಿದ ಈ ಚಿತ್ರ ವೈರಲ್ ಆಗಿತ್ತು. ಶಬರಿಮಲೆ ಭಕ್ತ ಕ್ರೌರ್ಯಕ್ಕೆ ಒಳಗಾಗಿದ್ದಾನೆ ಎಂದು ಬಿಂಬಿಸುತ್ತಿತ್ತು. ಇದನ್ನು 2,700 ಮಂದಿ ಶೇರ್ ಮಾಡಿದ್ದು, 1,400 ಬಾರಿ ಮರುಟ್ವೀಟ್ ಆಗಿತ್ತು.

ಈ ಚಿತ್ರವನ್ನು Squint Woke Neon (@squintneon)  ಮತ್ತು ಹಿಂದೂ ಮಹಾಸಭಾ ಕಾರ್ಯಕರ್ತ ಕಮಲೇಶ್ ತಿವಾರಿ ಮೊದಲು ಟ್ವೀಟ್ ಮಾಡಿದ್ದರು. "ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ದೌರ್ಜನ್ಯ ನೋಡಿ" ಎಂದು ಅವರು ಶೀರ್ಷಿಕೆ ಹಾಕಿದ್ದರು. ಇದು 1,300 ಬಾರಿ ಮರುಟ್ವೀಟ್ ಆಗಿತ್ತು.

ಹಲವು ಬಲಪಂಥೀಯ ಹ್ಯಾಂಡಲ್‍ಗಳು ಟ್ವಿಟರ್ ಹಾಗೂ ಫೇಸ್‍ಬುಕ್‍ ನಲ್ಲಿ ಇದನ್ನು ಟ್ವೀಟ್ ಮಾಡಿದ್ದವು. ಆದರೆ ಇದು ಫೋಟೊ ಶೂಟ್ ಆಗಿದ್ದು, ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ ಎನ್ನುವುದು ಇದೀಗ ಬಹಿರಂಗವಾಗಿದೆ. ರಜನೀಶ್ ಕುರುಪ್ ಎಂಬ ವ್ಯಕ್ತಿಯ ಈ ಫೋಟೊಶೂಟ್ ಅನ್ನು ಕೇರಳ ಪೊಲೀಸರ ದೌರ್ಜನ್ಯ ಎಂದು ಬಿಂಬಿಸಿ ಹರಡಲಾಗುತ್ತಿದೆ ಎಂದು ಪತ್ರಕರ್ತ ಬೊಬಿನ್ಸ್ ಅಬ್ರಹಾಂ ಪತ್ತೆ ಮಾಡಿದ್ದಾರೆ.

ಕುರುಪ್ ಅವರ ಮತ್ತೊಂದು ಚಿತ್ರವನ್ನು ಅಬ್ರಹಾಂ ಪೋಸ್ಟ್ ಮಾಡಿದ್ದು, ಅದರಲ್ಲಿ ಫೋಟೊಗ್ರಾಫರ್‍ನ ಮಧುಕೃಷ್ಣ ಫೋಟೊಗ್ರಫಿ ಎಂಬ ವಾಟರ್ ಮಾರ್ಕ್ ಇರುವುದನ್ನು ಕಾಣಬಹುದು. ಶಾಸಕರು ಶೇರ್ ಮಾಡಿರುವ ಫೋಟೊ ನಾಲ್ಕು ದಿನಗಳ ಹಿಂದಿನ ಫೋಟೊಶೂಟ್ ಎನ್ನುವುದನ್ನು ಸ್ವತಃ ರಾಜೇಶ್ ಕುರುಪ್ ಅವರೇ ಸ್ಪಷ್ಟಪಡಿಸಿದ್ದಾರೆ.

ಎರಡನೇ ಚಿತ್ರದ ಬಗ್ಗೆ ಮಧುಕೃಷ್ಣ ಸ್ಪಷ್ಟನೆ ನೀಡಿದ್ದು, ಇದು ಅಕ್ಟೋಬರ್ 6ರಂದು ತೆಗೆದ ಚಿತ್ರ. ಪ್ರತಿಭಟನೆ ಆರಂಭವಾಗಿರುವುದು ಅಕ್ಟೋಬರ್ 17ರಂದು ಎಂದು ಅವರು ಹೇಳಿದ್ದಾರೆ.

ಕೃಪೆ: altnews.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X