Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕವಿತೆಗಳಲ್ಲಿ ಮೌನದ ಹುಡುಕಾಟ ಮುಖ್ಯ:...

ಕವಿತೆಗಳಲ್ಲಿ ಮೌನದ ಹುಡುಕಾಟ ಮುಖ್ಯ: ಸುಬ್ರಾಯ ಚೊಕ್ಕಾಡಿ

ಲಿಟ್‌ಫೆಸ್ಟ್‌ನಲ್ಲಿ ಕವಿಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ4 Nov 2018 6:58 PM IST
share
ಕವಿತೆಗಳಲ್ಲಿ ಮೌನದ ಹುಡುಕಾಟ ಮುಖ್ಯ: ಸುಬ್ರಾಯ ಚೊಕ್ಕಾಡಿ

ಮಂಗಳೂರು, ನ.4: ಮಾತಿನ ವಿಜೃಂಭಣೆಯ ಮಧ್ಯೆ ತಲೆಮರೆಸಿಕೊಂಡಿರುವ ಮೌನವನ್ನು ಹಿಡಿಯುವ ಕೆಲಸ ಕವಿಯಾದವ ಮಾಡಬೇಕಾಗಿದೆ. ಆದರೆ ಕೆಲವು ಕಾರಣಗಳಿಂದ ಕವಿಗಳಿಗಿದು ಕ್ಲಿಷ್ಟ ಕಾಲವಾಗಿದೆ. ಕವಿತೆಗಳಲ್ಲಿ ವೌನದ ಹುಡುಕಾಟ ಮುಖ್ಯವಾಗಿದೆ. ಈ ವೌನವನ್ನು ಕವಿಗೋಷ್ಠಿಯಲ್ಲಿ ಮಂಡಿಸ ಲಾದ ಕವಿತೆಗಳಲ್ಲಿ ಕಾಣಬಹುದಾಗಿದೆ ಎಂದು ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿ ಅಭಿಪ್ರಾಯಪಟ್ಟರು.

ಮಂಗಳೂರು ಲಿಟ್‌ಫೆಸ್ಟ್ ನಗರದ ಟಿಎಂಎ ಪೈ ಹಾಲ್‌ನಲ್ಲಿ ರವಿವಾರ ಆಯೋಜಿಸಲಾದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತದ ಪರಿಕಲ್ಪನೆಯಲ್ಲಿ ಏಕತೆ ಮತು ಅನೇಕತೆ ನಡುವೆ ನಿರಂತರ ಸಂಘರ್ಷ ನಡೆಯುತ್ತಿದೆ. ಏಕತೆ ಗಟ್ಟಿಯಾದ ಹಾಗೆ ಅನೇಕತೆ ಅದರ ವಿರುದ್ಧ ಸಡ್ಡು ಹೊಡೆಯುತ್ತಿದೆ. ಜತೆಗೆ ಅಖಂಡ ಭಾರತ ಎಂದು ಹೇಳುತ್ತಿರುವಾಗಲೇ ಖಂಡ ಭಾರತದ ಚಿಂತನೆಗಳೂ ಅಲ್ಲಲ್ಲಿ ನಡೆಯಲು ಆರಂಭವಾಗಿದೆ. ಖಂಡ ಭಾರತದ ಶಕ್ತಿ ಹೆಚ್ಚಾಗುತ್ತಲೇ ಅಖಂಡ ಭಾರತ ಬೇಕು ಎಂಬ ಚಿಂತನೆಗಳನ್ನು ನಾವು ಮಾಡುತ್ತಿದ್ದೇವೆ. ಈ ಖಂಡ-ಅಖಂಡದ ಚಿಂತನೆಯ ನಡುವೆ ದೇಶ ಅವ್ಯಕ್ತ ಭಾರತವಾಗಿ ಬಿಡುತ್ತೋ ಎಂಬ ಭಯ ನಮ್ಮನ್ನು ಕಾಡುತ್ತಿದೆ ಎಂದು ಸುಬ್ರಾಯ ಚೊಕ್ಕಾಡಿ ನುಡಿದರು.

ಇದೇ ವೇಳೆ ಸುಬ್ರಾಯ ಚೊಕ್ಕಾಡಿ ತನಗೆ ಬಹಳವಾಗಿ ಕಾಡುವ ಹಕ್ಕಿ ಹಾಗೂ ಮರದ ಕುರಿತು ರಚಿಸಿದ ‘ಹಂಗು’ ಕವನ ವಾಚಿಸಿದರು. ಹಾಗೇ ‘ಬೆಳಕ ಭ್ರೂಹಿತ ನೆನಪು’ ಕವನದಲ್ಲಿ ಕಳೆದ ದೀಪಾವಳಿಯಲ್ಲಿ ಬೆಳಕು ಮತ್ತು ಕತ್ತಲೆಯ ನಡುವೆ ಹೇಗೆ ಸಂಘರ್ಷ ನಡೆಯಿತು ಎಂಬುದನ್ನು ವಿವರಿಸಿದರು.

ಕವಿಗೋಷ್ಠಿಯಲ್ಲಿ ಕವಿಗಳಾದ ಪೂರ್ಣಿಮಾ ಸುರೇಶ್ ಅವರ ‘ಮೀನ್ಮನೆಯ ಮೀನಿನ ಹಾಗೆ’, ‘ಗಂಡಾಗುವುದು ಕಲಿತಿಲ್ಲ’, ‘ಸಂವಿಧಾನ ಶಿಲ್ಪಿ ನೀವು ನೆನಪಾಗುತ್ತೀರಿ’ ಕವನಗಳು ಪ್ರಸ್ತುತ ಸನ್ನಿವೇಶಗಳು ಕುರಿತು ಮಾತನಾಡಿತು. ಡಾ.ಧನಂಜಯ ಕುಂಬ್ಳೆ ಅವರ ‘ಕೆಂಪುದೀಪದಡಿ ಮೀಟೂ ರೋಧನ’, ‘ಕೂಗಿದರೂ ದನಿ ಕೇಳಲಿಲ್ಲವೇ’, ನಂದಿನಿ ಹೆಗ್ಗುರ್ದ ಅವರ ‘ನೀಲಿ’, ‘ಬಹುರೂಪಿ’, ‘ನೀನು’, ಡಾ. ವಸಂತ ಕುಮಾರ್ ಪೆರ್ಲ ಅವರ ‘ದಂಡಯಾತ್ರೆ’, ಭೋಜರಾಜನ ‘ಸಿಂಹಾಸನ’, ‘ಮಂತ್ರವಾಗಲಿ ಮಾತು’ ಕವನಗಳು ಗಮನ ಸೆಳೆಯಿತು. ಹಿರಿಯ ಸಾಹಿತಿ ಬಿ.ಆರ್.ಲಕ್ಷ್ಮಣ ರಾವ್ ಅವರ ‘ನವಿಲು ಮತ್ತು ಮುಳ್ಳುಹಂದಿ’, ‘ಅಂಕಲ್ ಮತ್ತು ಟ್ವಿಂಕಲ್ ನಡುವಿನ ಸಂಭಾಷಣೆ’, ಭಾರತದ ಪರಿಕಲ್ಪನೆ ಕುರಿತು ‘ಹಿಂದುತ್ವ ಎಂದರೇನು’ ಕವನಗಳು ಸಾಹಿತ್ಯಾಸಕ್ತರನ್ನು ಸೆಳೆಯಿತು.

ಹನಿಗವಿ ಎಚ್.ಡುಂಡಿರಾಜ್ ಕಾರ್ಯಕ್ರಮ ನಿರೂಪಿಸಿ, ಹನಿಗವನಗಳನ್ನು ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X