Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾದ ಈ ನೀತಿಯಿಂದ ಭಾರತದ ಹುಲಿ,...

ಚೀನಾದ ಈ ನೀತಿಯಿಂದ ಭಾರತದ ಹುಲಿ, ಖಡ್ಗಮೃಗಗಳಿಗೆ ಕುತ್ತು!

ವಾರ್ತಾಭಾರತಿವಾರ್ತಾಭಾರತಿ4 Nov 2018 7:41 PM IST
share
ಚೀನಾದ ಈ ನೀತಿಯಿಂದ ಭಾರತದ ಹುಲಿ, ಖಡ್ಗಮೃಗಗಳಿಗೆ ಕುತ್ತು!

ಹೊಸದಿಲ್ಲಿ,ನ.4: ಹುಲಿಗಳು ಮತ್ತು ಖಡ್ಗಮೃಗಗಳ ಅಂಗಾಂಗಗಳ ಮಾರಾಟದ ಮೇಲಿನ 25ವರ್ಷಗಳ ಹಿಂದಿನ ನಿಷೇಧವನ್ನು ಚೀನಾ ಸಡಿಲಿಸಿರುವ ಹಿನ್ನೆಲೆಯಲ್ಲಿ ಈ ಪ್ರಾಣಿಗಳ ಕಳ್ಳಬೇಟೆಯ ವಿರುದ್ಧ ಕಟ್ಟೆಚ್ಚರವನ್ನು ವಹಿಸುವಂತೆ ಸರಕಾರವನ್ನು ಆಗ್ರಹಿಸಿರುವ ಭಾರತೀಯ ವನ್ಯಜೀವಿ ತಜ್ಞರು, ಭಾರತವು ಈ ಬಗ್ಗೆ ತನ್ನ ಕಳವಳವನ್ನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಚೀನಾದ ಜೊತೆ ಪ್ರಸ್ತಾಪಿಸಬೇಕು ಎಂದು ಹೇಳಿದ್ದಾರೆ.

ಚೀನಾದ ಈ ನಿರ್ಧಾರವು ಈ ಪ್ರಾಣಿಗಳ ಸಂಖ್ಯೆ ಕುಸಿಯಲು ಕಾರಣವಾಗುವ ಸಾಧ್ಯತೆಯಿದೆ ಮತ್ತು ಭಾರತದಲ್ಲಿ ಹುಲಿ ಹಾಗೂ ಖಡ್ಗಮೃಗಗಳ ಸಂರಕ್ಷಣೆಯ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಔಷಧೀಯ ಬಳಕೆಗಾಗಿ ಹುಲಿಯ ಮೂಳೆಗಳು ಮತ್ತು ಖಡ್ಗಮೃಗಗಳ ಕೊಂಬುಗಳ ಮೇಲಿನ ನಿಷೇಧವನ್ನು ಚೀನಾ ಭಾಗಶಃ ಹಿಂದೆಗೆದುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಳಿವಿನಂಚಿಲ್ಲಿರುವ ಈ ಪ್ರಾಣಿಗಳ ರಕ್ಷಣೆಗಾಗಿ ಚೀನಾ 1993ರಲ್ಲಿ ನಿಷೇಧವನ್ನು ಹೇರಿತ್ತು.

ನಿಷೇಧವನ್ನು ಹಿಂದೆಗೆದುಕೊಂಡಿರುವ ಕ್ರಮವು ವಿಶ್ವಾದ್ಯಂತ ಇವೆರಡು ವನ್ಯಪ್ರಾಣಿಗಳ ಸಂಖ್ಯೆ ಕಡಿವೆುಯಾಗಲು ಕಾರಣವಾಗುವ ಸಾಧ್ಯತೆಗಳಿವೆ ಎಂದು ಡಬ್ಲುಡಬ್ಲುಎಫ್-ಇಂಡಿಯಾ ಸೆಕ್ರೆಟರಿಯೇಟ್‌ನ ನಿರ್ದೇಶಕ ದೀಪಂಕರ್ ಘೋಷ್ ಅವರು ಹೇಳಿದರು.

ಇತ್ತೀಚಿನ ಸಮೀಕ್ಷೆಯಂತೆ ಭಾರತದಲ್ಲಿ 2,226 ಹುಲಿಗಳಿವೆ ಮತ್ತು ಭಾರತ ಹಾಗೂ ನೇಪಾಳದಲ್ಲಿ ಒಟ್ಟು 3,500 ಖಡ್ಗಮೃಗಗಳು ಉಳಿದುಕೊಂಡಿವೆ.

 ಹುಲಿಯ ಮೂಳೆಗಳು ಮತ್ತು ಖಡ್ಗಮೃಗಗಳ ಕೊಂಬುಗಳ ಅಕ್ರಮ ವ್ಯಾಪಾರದಲ್ಲಿ ತೊಡಗಿರುವ ಜನರು ಭಾರತದಲ್ಲಿ ವನ್ಯಜೀವಿಗಳನ್ನು ತಮ್ಮ ಗುರಿಯಾಗಿಸಿಕೊಳ್ಳಬಹುದು. ವಿಶ್ವದ ಶೇ.60ರಷ್ಟು ಹುಲಿಗಳು ಮತ್ತು ಶೇ.85ರಷ್ಟು ಖಡ್ಗಮೃಗಳನ್ನು ಹೊಂದಿರುವ ನಮ್ಮ ದೇಶವು ಕಳ್ಳ ಬೇಟೆಯ ಬೆದರಿಕೆಗೊಳಗಾಗಲಿದೆ ಎಂದ ಘೋಷ್,ಭಾರತ ಮತ್ತು ಇತರ ರಾಷ್ಟ್ರಗಳು ಜಾಗತಿಕ ಹುಲಿ ಚೇತರಿಕೆ ಕಾರ್ಯಕ್ರಮದಡಿ 2022ರ ವೇಳೆಗೆ ಹುಲಿಗಳ ಸಂಖ್ಯೆಯನ್ನು ದುಪ್ಪಟ್ಟುಗೊಳಿಸುವ ಗುರಿಯನ್ನು ಹೊಂದಿವೆ. ಚೀನಾ ನಿಷೇಧವನ್ನು ಹಿಂದೆಗೆದುಕೊಂಡಿರುವುದು ಈ ಗುರಿಸಾಧನೆಯ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X