ಮಟ್ಕಾ ದಂಧೆ: ಇಬ್ಬರ ಸೆರೆ
ಮಂಗಳೂರು, ನ.4: ತೊಕ್ಕೊಟ್ಟು ಒಳಪೇಟೆ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಜೆಪ್ಪಿನಮೊಗರು ನಿವಾಸಿ ಗಣೇಶ್ ಶೆಟ್ಟಿ (59), ಉಳ್ಳಾಲ ನಿವಾಸಿ ವಿನಯ್(57) ಬಂಧಿತ ಆರೋಪಿಗಳು.
ನ.3ರಂದು ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಆರೋಪಿಗಳಿಂದ ಮಟ್ಕಾ ಆಟಕ್ಕೆ ಬಳಸಿದ 11,016 ರೂ. ನಗದು, ಮಟ್ಕಾ ನಂಬರ್ ಬರೆದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈಗಳಾದ ಶ್ಯಾಮ್ ಸುಂದರ್ ಎಚ್.ಎಂ., ಕಬ್ಬಾಳ್ರಾಜ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Next Story





