Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ವಂಚನೆ...

ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ವಂಚನೆ ಸಲ್ಲ: ಮಾಜಿ ಶಾಸಕ ವೈ.ಎಸ್.ವಿ.ದತ್ತ

ವಾರ್ತಾಭಾರತಿವಾರ್ತಾಭಾರತಿ4 Nov 2018 8:52 PM IST
share
ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ವಂಚನೆ ಸಲ್ಲ: ಮಾಜಿ ಶಾಸಕ ವೈ.ಎಸ್.ವಿ.ದತ್ತ

ಬೆಂಗಳೂರು, ನ.4: ಎಪಿಎಂಸಿ, ಡಿಸಿಸಿ ಹಾಗೂ ಪಿಎಲ್‌ಡಿ ಬ್ಯಾಂಕುಗಳ ಚುನಾವಣೆಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆವರೆಗೂ ಮಹಿಳೆಯರಿಗೆ ಮೀಸಲಾತಿ ನೀಡಿ, ಶಾಸನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡದೇ ವಂಚಿಸಲಾಗುತ್ತಿದೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಬೇಸರ ವ್ಯಕ್ತಪಡಿಸಿದ್ದಾರೆ. 

ರವಿವಾರ ನಗರದ ಎಸ್‌ಸಿಎಂ ಹೌಸ್‌ನಲ್ಲಿ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ಆಯೋಜಿಸಿದ್ದ ‘ಚುನಾವಣೆ ಒಳ ಹೊರಗೆ’ ವಿಷಯ ಕುರಿತ ಸಂವಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ, ಶಾಸನಸಭೆ ಚುನಾವಣೆಯಲ್ಲಿ ಮೀಸಲಾತಿಯಿಂದ ದೂರವಿಡಲಾಗಿದೆ ಎಂದರು.

ಮಹಿಳೆಯರಿಗೆ ನ್ಯಾಯಯುತವಾಗಿ ಸಿಗಬೇಕಾದ ಹಕ್ಕು ಸಿಗುತ್ತಿಲ್ಲ ಎಂದ ಅವರು, ಪುರುಷ ಹಾಗೂ ಮಹಿಳೆಯರಿಗೆ ಸಮಾನವಾದ ಅವಕಾಶ ಸಿಗಬೇಕಾದರೆ ನಮ್ಮ ಇಂದಿನ ಚುನಾವಣಾ ವ್ಯವಸ್ಥೆ ಬದಲಾಗಬೇಕು. ಆದರೆ, ಇಂದಿನ ಚುನಾವಣಾ ವ್ಯವಸ್ಥೆ ಕೆಟ್ಟು ಹೋಗಿದೆ. ಹೀಗಾಗಿ, ಜನ ಬದಲಾವಣೆಯಾಗದಿದ್ದರೆ ನಮ್ಮ ವ್ಯವಸ್ಥೆಯೂ ಬದಲಾವಣೆ ಕಾಣಲು ಸಾಧ್ಯವಿಲ್ಲ ಎಂದರು.

ಭಾರತದಲ್ಲಿ 1949ರಲ್ಲಿ ಸ್ವಾತಂತ್ರ, 1950ರಲ್ಲಿ ಸಂವಿಧಾನವನ್ನು ಅಂಗೀಕಾರ ಮಾಡಿ, ಎಲ್ಲರಿಗೂ ಮತ ಹಾಕುವ ಹಕ್ಕನ್ನು ನೀಡಿದೆ. ಆದರೆ, ದೇಶದಲ್ಲಿ ಸಂವಿಧಾನಕ್ಕೂ ಮೊದಲು ಬಸವಣ್ಣ ಜನತಂತ್ರ ಪರಿಕಲ್ಪನೆಯನ್ನು, ಪ್ರಜಾಪ್ರಭುತ್ವದ ವ್ಯಾಖ್ಯಾನವನ್ನು ನೀಡಿದ್ದರು. ನಾನೊಬ್ಬನೇ ಭಕ್ತ ಉಳಿದವರೆಲ್ಲರೂ ಜಂಗಮಧಾರಿಗಳು ಎಂದಿದ್ದ ಎಂದು ದತ್ತ ಅವರು ನುಡಿದರು.

ಇಡೀ ವಿಶ್ವದಲ್ಲಿ ಸ್ತ್ರೀಯರಿಗೆ ಮೊಟ್ಟ ಮೊದಲ ಬಾರಿಗೆ ಮತದಾನ ಹಕ್ಕು ನೀಡಿದ್ದು ನಮ್ಮ ದೇಶದಲ್ಲಿ ಮಾತ್ರ. ಅಭಿವೃದ್ಧಿಶೀಲ ರಾಷ್ಟ್ರಗಳ ಇತಿಹಾಸವನ್ನು ಪರಿಶೀಲಿಸಿದರೆ ಇದು ತಿಳಿಯುತ್ತದೆ. ಆದರೆ, ಬೇರೆ ದೇಶಗಳಿಗಿಂತ ಮೊದಲೇ ಮತದಾನ ಹಕ್ಕನ್ನಷ್ಟೇ ನೀಡಲಾಗಿದೆ. ಮಹಿಳೆಯರ ಸ್ಥಿತಿ ಇಂದಿಗೂ ಅಭಿವೃದ್ಧಿಗೊಂಡಿಲ್ಲ ಎಂದರು.

ಹಿಂದಿನ ದಿನಗಳಲ್ಲಿ ದೇಶದಲ್ಲಿ ಅನಕ್ಷರಸ್ಥರು, ಜಾಗೃತಿಯಿಲ್ಲದ ಜನರು ಮತದಾನ ಮಾಡುತ್ತಿದ್ದರು. ಆಗ ವಿಧಾನಸೌಧದಲ್ಲಿ ರೈತರ, ಕಾರ್ಮಿಕರ ಧ್ವನಿಯಾಗಿ ಒಂದಷ್ಟು ಜನಪ್ರತಿನಿಧಿಗಳಿರುತ್ತಿದ್ದರು. ಈಗ ಎಲ್ಲರಿಗೂ ಶಿಕ್ಷಣ, ಸಾಮಾಜಿಕ ನ್ಯಾಯ, ಮೀಸಲಾತಿ ಸಿಕ್ಕಿದೆ, ಆಧುನೀಕರಣಗೊಂಡಿದೆ. ಆದರೆ, ಶಾಸನಸಭೆಗಳಿಗೆ ಯಾರು ಆಯ್ಕೆಯಾಗುತ್ತಿದ್ದಾರೆ ಎಂದು ಪ್ರಶ್ನಿಸಿಕೊಳ್ಳಬೇಕಿದೆ ಎಂದರು.

ಚುನಾವಣಾ ವ್ಯವಸ್ಥೆ ಬಂದ ದಿನಗಳಲ್ಲಿ ತಾತ್ವಿಕ ನೆಲೆಯ ಆಧಾರದ ಮೇಲೆ ನಡೆಯುತ್ತಿದ್ದ ಅನೇಕ ಜನಪ್ರತಿನಿಧಿಗಳು, ಮಹಿಳೆಯರಿದ್ದರು. ಇಂದು ಎಷ್ಟು ಜನರಿದ್ದಾರೆ ಎಂದ ಅವರು, ಹಣಬಲ, ತೋಳುಬಲ ಇರುವವವರು ಅಧಿಕಾರಕ್ಕೆ ಬರುತ್ತಿದ್ದಾರೆ. ಶಾಂತವೇರಿ ಗೋಪಾಲಗೌಡರಂತಹ ಜನ ನಾಯಕರನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೂ ಹೆಚ್ಚು ಭ್ರಷ್ಟರಾಗುತ್ತಿದ್ದಾರೆ. ಹಣ, ಹೆಂಡಕ್ಕಾಗಿ ತಮ್ಮ ಮತಗಳನ್ನು ಮಾರಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ಯಾವ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಸಾಧ್ಯವಾಗುತ್ತದೆ ಎಂದ ಅವರು, ಎಲ್ಲಿಯವರೆಗೂ ಮಹಿಳೆಯು ತಮ್ಮ ಕುಟುಂಬದಲ್ಲಿನ ಪುರುಷರನ್ನು ಹತೋಟಿಯಲ್ಲಿ ಇಡುವುದಿಲ್ಲವೊ ಅಲ್ಲಿಯವರೆಗೂ ಸಮಾಜದ ಬದಲಾವಣೆ ಆಗಲ್ಲ ಎಂದು ನುಡಿದರು.

ನಮ್ಮ ದೇಶದಲ್ಲಿ ಆತ್ಮವಂಚನೆ ಮಾಡಿಕೊಂಡರೆ ಎಷ್ಟು ದಿನ ಬೇಕಾದರೂ ಅಧಿಕಾರದಲ್ಲಿ ಇರಬಹುದು. ಆದರೆ, ನ್ಯಾಯಯುತವಾಗಿ, ಪ್ರಾಮಾಣಿಕವಾಗಿ ನಡೆದುಕೊಂಡರೆ ಅಧಿಕಾರ ಸಿಗುವುದಿಲ್ಲ. ಹೀಗಾಗಿ, ಜನರು ಆಯ್ಕೆ ಮಾಡುವ ಸಂದರ್ಭದಲ್ಲಿಯೇ ಯೋಗ್ಯವಾದ, ನಿಷ್ಠ, ಪ್ರಾಮಾಣಿಕ ಜನ ನಾಯಕರನ್ನು ನೋಡಬೇಕು. ದುಡ್ಡಿಗೆ ಮತ ಮಾರಿಕೊಂಡರೆ ನಮ್ಮ ವ್ಯವಸ್ಥೆಯನ್ನು ಬದಲಿಸಲು ಕಷ್ಟ ಎಂದು ವೈ.ಎಸ್.ವಿ.ದತ್ತ ಅಭಿಪ್ರಾಯಿಸಿದರು.

ಮಾಜಿ ಸಚಿವೆ ರಾಣಿ ಸತೀಶ್ ಮಾತನಾಡಿ, ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಪುರುಷ ಮತ್ತು ಮಹಿಳೆ ಸಮಾನರು ಎಂಬ ಸಂವಿಧಾನ ಬದ್ಧವಾದ ಹಕ್ಕುಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಮಹಿಳೆಯರು ಇಂದು ತಮ್ಮ ಹಕ್ಕುಗಳಿಗಾಗಿ ಬೀದಿಗೆ ಬಂದು ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ದೇಶದಲ್ಲಿನ ರಾಜಕೀಯ ಪಕ್ಷಗಳು ಪುರುಷರಿಗೆ ಸಮಾನವಾಗಿ ಅರ್ಹ ಮಹಿಳೆರನ್ನು ಗುರುತಿಸಿ ರಾಜಕೀಯವಾಗಿ ಸ್ಥಾನಮಾನ ನೀಡಬೇಕಾಗಿರುವುದು ಅವರ ಕರ್ತವ್ಯ. ಆದರೆ, ಅದನ್ನು ಕೆಲವು ಬಲಿಷ್ಠ ಶಕ್ತಿಗಳು ನಿಯಂತ್ರಣ ಮಾಡುತ್ತಿವೆ. ಹೀಗಾಗಿ, ಸಂವಿಧಾನ ಬದ್ಧವಾಗಿ ಮೀಸಲಾತಿ ಅನುಷ್ಠಾನವಾದರೆ ಅಷ್ಟೇ ಮಹಿಳೆಯರಿಗೆ ಸಮಾನ ಅವಕಾಶ ಸಿಗಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ರಾಜಕಾರಣಗಳ ಅಕ್ಕ, ತಂಗಿ, ಹೆಂಡತಿ, ಸಂಬಂಧಿಕರ ನಡುವೆಯೇ ಗಿರಕಿ ಹೊಡೆಯುತ್ತದೆ ಎಂದರು. ಸಾಹಿತಿ ವಿಜಯಮ್ಮ, ರೈತ ಮುಖಂಡರಾದ ಅನುಸೂಯಮ್ಮ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X