Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಸಿಯಾ ವಿಮಾನ ಪ್ರಯಾಣ ನಿಷೇಧ...

ಅಸಿಯಾ ವಿಮಾನ ಪ್ರಯಾಣ ನಿಷೇಧ ಪಟ್ಟಿಯಲ್ಲಿ: ಖುಲಾಸೆ ಪ್ರಶ್ನಿಸುವ ಮೇಲ್ಮನವಿಯನ್ನು ವಿರೋಧಿಸದಿರಲು ಪಾಕ್ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ4 Nov 2018 9:48 PM IST
share
ಅಸಿಯಾ ವಿಮಾನ ಪ್ರಯಾಣ ನಿಷೇಧ ಪಟ್ಟಿಯಲ್ಲಿ: ಖುಲಾಸೆ ಪ್ರಶ್ನಿಸುವ ಮೇಲ್ಮನವಿಯನ್ನು ವಿರೋಧಿಸದಿರಲು ಪಾಕ್ ನಿರ್ಧಾರ

ಇಸ್ಲಾಮಾಬಾದ್, ನ. 4: ದೇವನಿಂದನೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಕ್ರೈಸ್ತ ಮಹಿಳೆ ಅಸಿಯಾ ಬೀಬಿ ಖುಲಾಸೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪ್ರತಿಭಟನಕಾರರಿಗೆ ಪಾಕಿಸ್ತಾನ ಸರಕಾರ ಶನಿವಾರ ಅನುಮತಿ ನೀಡಿದೆ ಹಾಗೂ ಅವರನ್ನು ‘ವಿಮಾನ ಪ್ರಯಾಣ ನಿಷೇಧ’ ಪಟ್ಟಿಯಲ್ಲಿರಿಸಿದೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ, ಅಸಿಯಾ ಬೀಬಿಯ ಭವಿಷ್ಯ ಡೋಲಾಯಮಾನವಾಗಿದೆ.

2010ರಿಂದ ಸೆರೆಮನೆಯಲ್ಲಿರುವ ಅಸಿಯಾರನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಬುಧವಾರ ದೋಷಮುಕ್ತಗೊಳಿಸಿತ್ತು. ಇದು ತೀವ್ರವಾದಿಗಳ ಕೆಂಗಣ್ಣಿಗೆ ಕಾರಣವಾಗಿದ್ದು, ಅವರು ದೇಶಾದ್ಯಂತ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ಅಸಿಯಾ ಬೀಬಿಯನ್ನು ‘ವಿಮಾನ ಪ್ರಯಾಣ ನಿಷೇಧ ಪಟ್ಟಿ’ಯಲ್ಲಿರಿಸುವ ಹಾಗೂ ತೀರ್ಪಿನ ವಿರುದ್ಧ ಸಲ್ಲಿಸಲಾಗುವ ಮೇಲ್ಮನವಿಯನ್ನು ವಿರೋಧಿಸದಿರುವ ಒಪ್ಪಂದಕ್ಕೆ ಸರಕಾರ ಬಂದ ಬಳಿಕ, ಶುಕ್ರವಾರ ರಾತ್ರಿ ಪ್ರತಿಭಟನಕಾರರು ಬಂದ್ ಹಿಂದೆಗೆದುಕೊಂಡಿದ್ದಾರೆ.

‘‘ಅಸಿಯಾ ಬೀಬಿ ದೇಶದಿಂದ ಹೊರಹೋಗಲು ಸಾಧ್ಯವಾಗದಂತೆ ಆದಷ್ಟು ಬೇಗ ಅವರನ್ನು ವಿದೇಶ ಪ್ರಯಾಣ ನಿಯಂತ್ರಣ ಪಟ್ಟಿಯಲ್ಲಿರಿಸುವಂತೆ ನಾವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದೇವೆ’’ ಎಂದು ಬೀಬಿ ವಿರುದ್ಧ ಮೊಕದ್ದಮೆ ದಾಖಲಿಸಿರುವ ಕಾರಿ ಸಲಾಮ್‌ರ ವಕೀಲ ಗುಲಾಮ್ ಮುಸ್ತಾಫ ಚೌಧರಿ ಹೇಳಿದ್ದಾರೆ.

ಮೊದಲು ಪ್ರತಿಭಟನಕಾರರನ್ನು ಎದುರಿಸುವ ಸೂಚನೆ ನೀಡಿ, ಬಳಿಕ ಅವರಿಗೆ ಮಣಿದ ಇಮ್ರಾನ್ ಖಾನ್ ಸರಕಾರವನ್ನು ಬೀಬಿಯ ವಕೀಲ ಸೈಫುಲ್ ಮುಲುಕ್ ಮತ್ತು ಪಾಕಿಸ್ತಾನಿ ಮಾಧ್ಯಮಗಳು ಟೀಕಿಸಿವೆ.

ನ್ಯಾಯಕ್ಕಾಗಿನ ಹೋರಾಟ ಮುಂದುವರಿಯಲೇಬೇಕು: ಅಸಿಯಾ ಬೀಬಿ ವಕೀಲ

‘‘ತೀವ್ರವಾದಿಗಳ ಪ್ರತಿಭಟನೆ ದುರದೃಷ್ಟಕರ, ಆದರೆ ಅನಿರೀಕ್ಷಿತವಲ್ಲ’’ ಎಂದು ಅಸಿಯಾ ಬೀಬಿ ವಕೀಲ ಸೈಫುಲ್ ಮುಲುಕ್ ಹೇಳಿದ್ದಾರೆ.

‘‘ಆದರೆ, ಸರಕಾರದ ನಿಲುವು ನೋವು ತಂದಿದೆ. ದೇಶದ ಅತ್ಯುನ್ನತ ನ್ಯಾಯಾಲಯದ ಆದೇಶವನ್ನೂ ಅನುಷ್ಠಾನಗೊಳಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ’’ ಎಂದು ಅವರು ಹೇಳಿದ್ದಾರೆ.

‘‘ನ್ಯಾಯಕ್ಕಾಗಿನ ಹೋರಾಟ ಮುಂದುವರಿಯಲೇಬೇಕು’’ ಎಂದಿದ್ದಾರೆ.

ಇದು ಸರಕಾರದ ಇನ್ನೊಂದು ಶರಣಾಗತಿ ಎಂಬುದಾಗಿ ದೇಶದ ಅತ್ಯಂತ ಹಳೆಯ ಪತ್ರಿಕೆ ‘ಡಾನ್’ ತನ್ನ ಸಂಪಾದಕೀಯದಲ್ಲಿ ಸರಕಾರವನ್ನು ಟೀಕಿಸಿದೆ.

ಪಾಕ್‌ನಿಂದ ಹೊರಹೋಗಲು ನೆರವು ನೀಡಿ: ಟ್ರಂಪ್‌ಗೆ ಅಸಿಯಾ ಗಂಡನ ಮನವಿ

ಪಾಕಿಸ್ತಾನದಲ್ಲಿ ದೇವನಿಂದನೆ ಪ್ರಕರಣದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಅಸಿಯಾ ಬೀಬಿಯ ಕುಟುಂಬ ಸದಸ್ಯರಿಗೆ ಪ್ರಾಣಾಪಾಯವಿದೆ ಎಂದು ಹೇಳಿರುವ ಅವರ ಗಂಡ ಆಶಿಕ್ ಮಸಿಹ್, ತಮಗೆ ಆಶ್ರಯ ನೀಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಮನವಿ ಮಾಡಿದ್ದಾರೆ.

ಅವರು ಇದೇ ಮನವಿಯನ್ನು ಬ್ರಿಟನ್ ಮತ್ತು ಕೆನಡಕ್ಕೂ ಮಾಡಿದ್ದಾರೆ.

‘‘ಪಾಕಿಸ್ತಾನದಿಂದ ಹೊರಹೋಗಲು ನಮಗೆ ನೆರವು ನೀಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನಾನು ಮನವಿ ಮಾಡುತ್ತೇನೆ’’ ಎಂದು ಬ್ರಿಟಿಶ್ ಪಾಕಿಸ್ತಾನಿ ಕ್ರಿಶ್ಚಿಯನ್ ಅಸೋಸಿಯೇಶನ್ ದಾಖಲಿಸಿದ ವೀಡಿಯೊವೊಂದರಲ್ಲಿ ಮಸಿಹ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X