Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಜ್ಞಾನ ತೋರಿದ ಎಸ್.ಎಲ್. ಭೈರಪ್ಪ: ಸಿಪಿಐ...

ಅಜ್ಞಾನ ತೋರಿದ ಎಸ್.ಎಲ್. ಭೈರಪ್ಪ: ಸಿಪಿಐ ಆರೋಪ

ವಾರ್ತಾಭಾರತಿವಾರ್ತಾಭಾರತಿ5 Nov 2018 8:07 PM IST
share

ಮಂಗಳೂರು, ನ.5: ದ.ಕ ಜಿಲ್ಲೆಯ ಅಭಿವೃದ್ಧಿಗೆ ಎಡಪಂಥೀಯ ಚಳವಳಿ ಮಾರಕ ಎನ್ನುವ ಸಾಹಿತಿ ಎಸ್.ಎಲ್ ಭೈರಪ್ಪರ ಮಾತುಅಜ್ಞಾನದಿಂದ ಕೂಡಿದೆ. ಅವರು ಜಿಲ್ಲೆಯ ಜನಜೀವನದ ಇತಿಹಾಸದ ಬಗ್ಗೆ ಕುರುಡುತನ ಮೆರೆದಿದ್ದಾರೆ ಎಂದು ಸಿಪಿಐ ಮಂಗಳೂರು ತಾಲೂಕು ಸಮಿತಿ ಆರೋಪಿಸಿದೆ.

ಅವಿಭಜಿತ ದ.ಕ.ಜಿಲ್ಲೆಗಳಲ್ಲಿ ಕೃಷಿ ಕೂಲಿ, ಹೆಂಚು, ಗೋಡಂಬಿ, ಬೀಡಿ ಕಾರ್ಮಿಕರೇ ಹೆಚ್ಚಾಗಿದ್ದರು. ದುಡಿತಕ್ಕೆ ತಕ್ಕ ಪ್ರತಿಫಲಕ್ಕಾಗಿ ಸಂಘಟಿತರಾಗಿದ್ದರು. ಅನ್ನ ಕೊಟ್ಟ ಉದ್ಯಮವನ್ನು ಬೆಳೆಸುವುದರೊಂದಿಗೆ ತಾನೂ ಅಭಿವೃದ್ಧಿಗೊಂಡರು. ಇವರೆಲ್ಲಾ ಕಮ್ಯುನಿಸ್ಟ್ ಚಳವಳಿಯೊಂದಿಗೆ ಸಂಘಟಿತರಾಗಿ ತನ್ನ ದುಡಿತದ ಫಲವನ್ನು ಪಡೆದ ಕಾರಣದಿಂದಲೇ ಅವರ ಮಕ್ಕಳು ಇಂದು ಬೇರೆ ಬೇರೆ ಕೆಲಸದಲ್ಲಿ, ಉದ್ಯಮದಲ್ಲಿ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಯಿತು.

ಕಮ್ಯುನಿಸ್ಟ್ ಸಂಘಟನೆಯ ಮೂಲಕ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಜಿಲ್ಲೆಯ ಜನರ ಪಾತ್ರ ಹಿರಿದಾದದ್ದು ಎಂಬ ವಿಚಾರ ಬೈರಪ್ಪನವರಿಗೆ ತಿಳಿದಿದ್ದರೂ ತನ್ನ ಬಲಪಂಥೀಯ ಶಿಷ್ಯರನ್ನು ಮೆಚ್ಚಿಸಲು ಈ ರೀತಿ ಹೇಳಿದ್ದಾರೆಂದು ಸಿಪಿಐ ಮಂಗಳೂರು ತಾಲೂಕು ಸಮಿತಿ ಕಾರ್ಯದರ್ಶಿ ವಿ.ಎಸ್. ಬೇರಿಂಜ ಆರೋಪಿಸಿದ್ದಾರೆ.

ಬಿ.ವಿ. ಕಕ್ಕಿಲ್ಲಾಯ, ಶಾಂತಾರಾಮ ಪೈ, ಸಿಂಪ್ಸನ್ ಸೋನ್ಸ್, ಕೃಷ್ಣ ಶೆಟ್ಟಿ, ಲಿಂಗಪ್ಪಸುವರ್ಣ, ದಾಸಪ್ಪಮಾಸ್ಟರ್, ಮಹಾಬಲೇಶ್ವರ ಭಟ್, ಎಂ.ಎಚ್ ಕೃಷ್ಣಪ್ಪ, ವಿಶ್ವನಾಥ ನಾಯ್ಕಿ, ಅಡ್ಡೂರು ಶಿವಶಂಕರ್ ರಾವ್ ಮುಂತಾದ ಸ್ವಾತಂತ್ರ್ಯ ಹೋರಾಟಗಾರರು ಪ್ರವರ್ತಿಸಿದ ನಾಡು ಇದು. ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ, ಹಲವಾರು ಬಾರಿ ಜೈಲುವಾಸ ಅನುಭವಿಸಿದ ಇಂತಹ ಹೋರಾಟಗಾರರ ಬಗ್ಗೆ ಬೈರಪ್ಪ ತಿಳಿದುಕೊಳ್ಳದೆ ಮಾತನಾಡಿರುವುದು ಅಕ್ಷಮ್ಯ. ಜಿಲ್ಲೆಯ ಜನರ ಚಳವಳಿಯ ಬಗ್ಗೆ ಬಿ.ವಿ. ಕಕ್ಕಿಲ್ಲಾಯರ, ಸಿಂಪ್ಸನ್ ಸೋನ್ಸರ ಜೀವನ ಚರಿತ್ರೆಯನ್ನು ಓದಬೇಕೆಂದು ಸಿಪಿಐ ಸಲಹೆ ನೀಡಿದೆ.

ಸ್ವಾತಂತ್ರ್ಯ ಚಳವಳಿಯಲ್ಲಿ ಬಲಪಂಥೀಯರು ಬ್ರಿಟಿಷರ ಪರವಹಿಸಿದ ವಿಚಾರಗಳು ಬೈರಪ್ಪನವರಿಗೆ ಗೊತ್ತಿಲ್ಲವೆ? ಕರಾವಳಿ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು, ಜೈಲು ಶಿಕ್ಷೆ ಅನುಭವಿಸಿದ ಯಾರಾದರೂ ಒಬ್ಬ ಬಲಪಂಥೀಯ ಸ್ವಾತಂತ್ರ್ಯ ಹೋರಾಟಗಾರನ ಹೆಸರನ್ನು ಹುಡುಕಿ ಕೊಡಿ ಎಂದು ಭೈರಪ್ಪರಿಗೆ ಸಿಪಿಐ ಸವಾಲು ಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X