Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ:...

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿ ಶೆಟ್ಟಿಗೆ ಶರ್ತಬದ್ಧ ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ5 Nov 2018 9:36 PM IST
share
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿ ಶೆಟ್ಟಿಗೆ ಶರ್ತಬದ್ಧ ಜಾಮೀನು ಮಂಜೂರು

ಉಡುಪಿ, ನ.5: ಸುಪ್ರೀಂ ಕೋರ್ಟಿನ ನಿರ್ದೇಶನದಂತೆ ಉಡುಪಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೋಮವಾರ ಶರ್ತಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಪ್ರಕರಣದ ತನಿಖಾಧಿಕಾರಿ ಸಲ್ಲಿಸಿದ ಮಾಹಿತಿಯಂತೆ ಒಟ್ಟು 167 ಸಾಕ್ಷಿಗಳ ಪೈಕಿ ಪ್ರಮುಖ 36 ಸಾಕ್ಷಿಗಳ ವಿಚಾರಣೆಯನ್ನು ಆರು ತಿಂಗಳೊಳಗೆ ಪೂರ್ಣ ಗೊಳಿಸಿ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ನೀಡುವಂತೆ ಸುಪ್ರೀಂ ಕೋರ್ಟ್ ಎ. 23ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು.

ಅದರಂತೆ ಜು .2ರಿಂದ ಸಾಕ್ಷಗಳ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ಆರಂಭಿಸಲಾಗಿತ್ತು. ಇಂದು ನಡೆದ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಡಿಎನ್‌ಎ ವಿಭಾಗದ ಸಹಾಯಕ ನಿರ್ದೇಶಕ ಎಲ್. ಪುರುಷೋತ್ತಮ ಅವರ ಪಾಟಿ ಸವಾಲನ್ನು ಆರೋಪಿ ಪರ ವಕೀಲ ಹೈದರಬಾದಿನ ಜಿ.ವಿ.ರಾವ್ ನೆರವೇರಿಸುವ ಮೂಲಕ ಒಟ್ಟು 40 ಸಾಕ್ಷಗಳ ವಿಚಾರಣೆಯನ್ನು ಪೂರ್ಣಗೊಳಿಸಲಾಯಿತು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈಗಾಗಲೇ 36 ಸಾಕ್ಷಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ, ಆರೋಪಿ ರಾಜೇಶ್ವರಿ ಶೆಟ್ಟಿಗೆ ಒಂದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಆರೋಪಿ ತಂಗಿ ಮತ್ತು ಸಂಬಂಧಿಯೊಬ್ಬರ ಶ್ಯೂರಿಟಿಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿ ಆದೇಶಿಸಿದರು.

ಯಾವುದೇ ಕಾರಣಕ್ಕೂ ಸಾಕ್ಷಗಳಿಗೆ ಬೆದರಿಕೆ ಅಥವಾ ಪ್ರಭಾವ ಬೀರಬಾರದು. ಪ್ರತಿ ವಿಚಾರಣೆಯ ದಿನಾಂಕದಂದು ನ್ಯಾಯಾಲಯಕ್ಕೆ ಹಾಜರಾಗಬೇಕು. ನ್ಯಾಯಾಲಯದ ಅನುಮತಿ ಇಲ್ಲದೆ ಭಾರತ ದೇಶ ಬಿಟ್ಟು ಹೊರಗೆ ಹೋಗಬಾರದು ಎಂಬ ಶರ್ತವನ್ನು ನ್ಯಾಯಾಲಯ ಆರೋಪಿ ರಾಜೇಶ್ವರಿ ಶೆಟ್ಟಿಗೆ ವಿಧಿಸಿದೆ.

ಈ ಸಂದರ್ಭದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಶಾಂತಾರಾಮ್ ಶೆಟ್ಟಿ, ಆರೋಪಿ ಪರ ವಕೀಲರಾದ ನಾರಾಯಣ ಪೂಜಾರಿ ಹಾಗೂ ಅರುಣ್ ಬಂಗೇರ ಹಾಜರಿದ್ದರು. ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ರಾಜೇಶ್ವರಿ ಶೆಟ್ಟಿ ಎರಡು ಮೂರು ದಿನಗಳಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಆಸ್ತಿ ಹಾಗೂ ಅನೈತಿಕ ಸಂಬಂಧದ ವಿಚಾರದಲ್ಲಿ ಭಾಸ್ಕರ್ ಶೆಟ್ಟಿಯನ್ನು ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ 2016ರ ಜು. 28ರಂದು ಕೊಲೆ ಮಾಡಿ, ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆ ಹೋಮ ಕುಂಡದಲ್ಲಿ ಸುಟ್ಟಿದ್ದರು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಡ್ತಿ ನೀಡಿದ ದೂರಿನಂತೆ ಆ. 7ರಂದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅಂದಿನಿಂದ ಅಂದರೆ ಎರಡು ವರ್ಷ ಮೂರು ತಿಂಗಳಗಳ ಕಾಲ ಜೈಲಿನಲ್ಲಿದ್ದ ರಾಜೇಶ್ವರಿ ಶೆಟ್ಟಿಗೆ ಇದೀಗ ಬಿಡುಗಡೆ ಭಾಗ್ಯ ದೊರೆತಿದೆ. ಆದರೆ ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಜೈಲಿನಲ್ಲಿಯೇ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X