Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಖಶೋಗಿ ಹತ್ಯೆ ಘೋರ ಕೃತ್ಯ; ಸೌದಿ...

ಖಶೋಗಿ ಹತ್ಯೆ ಘೋರ ಕೃತ್ಯ; ಸೌದಿ ಸ್ಥಿರತೆಯೂ ಮುಖ್ಯ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ವಾರ್ತಾಭಾರತಿವಾರ್ತಾಭಾರತಿ5 Nov 2018 10:02 PM IST
share
ಖಶೋಗಿ ಹತ್ಯೆ ಘೋರ ಕೃತ್ಯ; ಸೌದಿ ಸ್ಥಿರತೆಯೂ ಮುಖ್ಯ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ವರ್ನ (ಬಲ್ಗೇರಿಯ), ನ. 5: ಸೌದಿ ಅರೇಬಿಯದ ಪತ್ರಕರ್ತ ಜಮಾಲ್ ಖಶೋಗಿಯನ್ನು ಇಸ್ತಾಂಬುಲ್‌ನ ಸೌದಿ ಕೌನ್ಸುಲೇಟ್ ಕಚೇರಿಯಲ್ಲಿ ಹತ್ಯೆ ಮಾಡಿರುವುದು ಘೋರ ಕೃತ್ಯವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಆದರೆ, ಅದೇ ವೇಳೆ, ಸೌದಿ ಅರೇಬಿಯದಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳುವುದೂ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಬಲ್ಗೇರಿಯ ಭೇಟಿಯ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಖಶೋಗಿ ಹತ್ಯೆಗೆ ಸಂಬಂಧಿಸಿದಂತೆ ಇದು ಇಸ್ರೇಲ್‌ನ ಮೊದಲ ಸಾರ್ವಜನಿಕ ಹೇಳಿಕೆಯಾಗಿದೆ.

‘‘ಇಸ್ತಾಂಬುಲ್‌ನಲ್ಲಿರುವ ಸೌದಿ ಅರೇಬಿಯ ಕೌನ್ಸುಲೇಟ್ ಕಚೇರಿಯಲ್ಲಿ ಏನು ನಡೆಯಿತೋ, ಅದು ಘೋರ ಕೃತ್ಯವಾಗಿದೆ. ಅದನ್ನು ಸರಿಯಾದ ಕ್ರಮದಲ್ಲಿ ನಿಭಾಯಿಸಬೇಕಾಗಿದೆ. ಆದರೆ, ಅದೇ ವೇಳೆ, ಈ ವಲಯ ಮತ್ತು ಜಗತ್ತಿನ ಸ್ಥಿರತೆಗಾಗಿ ಸೌದಿ ಅರೇಬಿಯ ಸ್ಥಿರವಾಗಿ ಉಳಿಯುವುದು ಅಗತ್ಯವಾಗಿದೆ’’ ಎಂದರು.

‘‘ಈ ಎರಡೂ ಗುರಿಗಳನ್ನು ಸಾಧಿಸಲು ದಾರಿಯೊಂದನ್ನು ಕಂಡುಹಿಡಿಯಬೇಕು ಎಂದು ನನಗನಿಸುತ್ತದೆ. ಯಾಕೆಂದರೆ, ನಾನು ಭಾವಿಸಿರುವಂತೆ, ದೊಡ್ಡ ಸಮಸ್ಯೆ ಇರಾನ್ ಆಗಿದೆ. ಯುರೋಪ್‌ನಲ್ಲಿ ಕಳೆದ ಕೆಲವು ವಾರಗಳಲ್ಲಿ ಅದು ನಡೆಸಿಕೊಂಡು ಬರುತ್ತಿರುವ ಅಪಪ್ರಚಾರ ಅಭಿಯಾನವನ್ನು ನಾವು ನಿಲ್ಲಿಸಬೇಕಾಗಿದೆ’’ ಎಂದು ಇಸ್ರೇಲ್ ಪ್ರಧಾನಿ ನುಡಿದರು.

ಖಶೋಗಿ ಹತ್ಯೆಯ ಹಿನ್ನೆಲೆಯಲ್ಲಿ ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ವಿರುದ್ಧ ಟೀಕೆಗಳು ಹೆಚ್ಚುತ್ತಿರುವ ಹೊರತಾಗಿಯೂ, ಅವರನ್ನು ಬೆಂಬಲಿಸುವುದನ್ನು ಮುಂದುವರಿಸುವಂತೆ ಇಸ್ರೇಲ್ ಇತ್ತೀಚೆಗೆ ಶ್ವೇತಭವನವನ್ನು ಒತ್ತಾಯಿಸಿದೆ ಎಂಬುದಾಗಿ ‘ವಾಶಿಂಗ್ಟನ್ ಪೋಸ್ಟ್’ ವರದಿ ಮಾಡಿದ ಒಂದು ದಿನದ ಬಳಿಕ, ಇಸ್ರೇಲ್ ಪ್ರಧಾನಿಯ ಈ ಹೇಳಿಕೆಗಳು ಹೊರಬಿದ್ದಿವೆ.ಖಶೋಗಿ ‘ವಾಶಿಂಗ್ಟನ್ ಪೋಸ್ಟ್’ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದರು.

ಖಶೋಗಿ ಹಂತಕರಿಗೆ ಶಿಕ್ಷೆ ವಿಶ್ವಸಂಸ್ಥೆಗೆ ಸೌದಿ ಅರೇಬಿಯ ಭರವಸೆ

ಸೌದಿ ಪತ್ರಕರ್ತ ಜಮಾಲ್ ಖಶೋಗಿಯ ಹತ್ಯೆಯ ಬಗ್ಗೆ ಸೌದಿ ಅರೇಬಿಯ ತನಿಖೆ ನಡೆಸುತ್ತಿದೆ ಹಾಗೂ ಕೊಲೆಗಾರರನ್ನು ಅದು ಶಿಕ್ಷಿಸಲಿದೆ ಎಂದು ಸೌದಿ ಅರೇಬಿಯವು ಸೋಮವಾರ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಗೆ ಸೋಮವಾರ ತಿಳಿಸಿದೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯಲ್ಲಿ ಭಾಷಣ ಮಾಡಿದ ಸೌದಿ ಅರೇಬಿಯದ ಮಾನವಹಕ್ಕುಗಳ ಆಯೋಗದ ಅಧ್ಯಕ್ಷ ಬಂದಾರ್ ಅಲ್ ಐಬನ್ ಈ ವಿಷಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X